ಪುಣೆಯಲ್ಲಿ ಕೊಹ್ಲಿ ಟ್ರೆಕ್ಕಿಂಗ್, ಬೆಂಗ್ಳೂರಲ್ಲಿ ಕ್ಲಾರ್ಕ್ ಜತೆ ಮೀಟಿಂಗ್
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಹೀನಾಯ ಸೋಲು ಕಂಡ ನಂತರ, ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ ಕೊಹ್ಲಿ ಮಾಡಿದ್ದೇನು? ಭಾರೀ ಬೇಸರಕ್ಕೊಳಗಾಗಿದ್ದ ಅವರು, ಆ ಬೇಜಾರಿನಿಂದ ಹೊರಬರಲು ಗುಡ್ಡ ಹತ್ತಿದ್ದರಂತೆ!
ಗುಡ್ಡ ಹತ್ತೋದ್ರಿಂದ ಬೇಜಾರು ಹೋಗುತ್ತಾ ಅಂತ ಕೇಳಬಹುದು. ಆದರೆ, ಮನಸ್ಸನ್ನು ತಮಗಿಷ್ಟವಾದ ಕೆಲಸಗಳಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ಬೇಸರವು ಮನಸ್ಸಿನ ಶಕ್ತಿಯನ್ನು ಸಂಪೂರ್ಣವಾಗಿ ಆಪೋಶನ ತೆಗೆದುಕೊಳ್ಳದಂತೆ ಎಚ್ಚರಿಕೆ ವಹಿಸಬಹುದು. ಅದನ್ನೇ ಕೊಹ್ಲಿ ಮಾಡಿದ್ದರು.
ಇನ್ನು, ಬೆಂಗಳೂರಿನಲ್ಲಿ ಇದೇ ಶನಿವಾರದಿಂದ (ಮಾ. 4) ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ದ್ವಿತೀಯ ಟೆಸ್ಟ್ ಪಂದ್ಯ ನಡೆಯಲಿದೆ. ಹಾಗಾಗಿ, ಆ ಪಂದ್ಯದ ಕಾಮೆಂಟೇಟರ್ ಆಗಿ ಬಂದಿರುವ ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಮೈಕಲ್ ಕ್ಲಾರ್ಕ್ ಬೆಂಗಳೂರಿನಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯನ್ನು ಭೇಟಿಯಾಗಿದ್ದರು.
ಇನ್ನು, ಮುಂಬೈನಲ್ಲಿ ರಾಮ್ ಗೋಪಾಲ್ ವರ್ಮಾ ಅವರ ಹೊಸ ಚಿತ್ರ 'ಸರ್ಕಾರ್ 3' ಟ್ರೈಲರ್ ಬಿಡುಗಡೆಯಾಗಿದ್ದು ಅದರಲ್ಲಿ ಭಾಗವಹಿಸಿದ್ದ ನಟರಾದ ಜಾಕಿ ಶ್ರಾಫ್ ಹಾಗೂ ಅಮಿತಾಭ್ ಬಚ್ಚನ್ ಎಲ್ಲರ ಗಮನ ಸೆಳೆದರು.
ಇಂಥವೇ ಕೆಲವಾರು ಸುದ್ದಿಗಳ ಸಂಕ್ತಿಪ್ತ ಮಾಹಿತಿ ಫೋಟೋ ಸಹಿತ ಇಲ್ಲಿದೆ.

ಸೋಲಿನ ಕಹಿ ಮರೆಯಲು ಕಸರತ್ತು
ಇತ್ತೀಚೆಗೆ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಸೋತ ನಂತರ, ಪುಣೆಯ ಬಳಿಯಲ್ಲಿನ ಗುಡ್ಡವೊಂದಕ್ಕೆ ಟ್ರೆಕ್ಕಿಂಗ್ ಹೋಗಿ ಸೋಲಿನ ನೋವಿನಿಂದ ಹೊರಬರಲು ಯತ್ನಿಸಿದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಆ ಫೋಟೋವನ್ನು ಈಗ ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ.

ಕ್ರಿಕೆಟ್ ತಾರೆಗಳ ಉಭಯ ಕುಶಲೋಪರಿ
ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯಕ್ಕಾಗಿ ಬೆಂಗಳೂರಿಗೆ ಆಗಮಿಸಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ಮೈಕಲ್ ಕ್ಲಾರ್ಕ್ ಜತೆಗೆ ಫೋಟೋಕ್ಕೆ ಪೋಸು ನೀಡಿದರು.

ಆತಂಕದಲ್ಲಿ ಭಕ್ತಾದಿಗಳು
ಪಾಟ್ನಾದಲ್ಲಿರುವ ತಖ್ತ್ ಹರ್ಮಾದಿರ್ ಸಾಹಿಬ್ ದರ್ಗಾದ (ಗುರುದ್ವಾರ) ಸ್ಫೋಟಗೊಳಿಸುವುದಾಗಿ ಅನೇಕ ಬೆದರಿಕೆಗಳು ಬಂದಿರುವ ಹಿನ್ನೆಲೆಯಲ್ಲಿ ದರ್ಗಾಕ್ಕೆ ಬಿಗಿ ಭದ್ರತೆ ಒದಗಿಸಲಾಗಿದೆ.

ಸರ್ಕಾರ್ ಮೂರನೇ ಆವೃತ್ತಿ
ಭಾರತೀಯ ಚಲನಚಿತ್ರ ರಂಗದಲ್ಲಿ ಭೂಗತ ಲೋಕದ ಚಿತ್ರಗಳ ಹೊಸ ಟ್ರೆಂಡ್ ಸೃಷ್ಟಿಸಿದ ನಿರ್ದೇಶಕ, ನಿರ್ಮಾಪಕ ರಾಮ್ ಗೋಪಾಲ್ ವರ್ಮಾ ಅವರ ಹೊಸ ಚಿತ್ರ 'ಸರ್ಕಾರ್ 3' ಚಿತ್ರದ ಟ್ರೈಲರ್ ಇತ್ತೀಚೆಗೆ ಮುಂಬೈನಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಲಾಯಿತು. ಈ ಸಮಾರಂಭದಲ್ಲಿ ಬಾಲಿವುಡ್ ನಟರಾದ ಜಾಕಿಶ್ರಾಫ್ ಹಾಗೂ ಅಮಿತಾಭ್ ಬಚ್ಚನ್ ಕಂಡಿದ್ದು ಹೀಗೆ.

ಭಾರತ ವಿರುದ್ಧದ ಸೆಣಸಿಗಾಗಿ ಸಿದ್ಧತೆ
ಶನಿವಾರದಿಂದ (ಫೆ. 4) ಆರಂಭಗೊಳ್ಳಲಿರುವ ಭಾರತ ವಿರುದ್ಧದ ದ್ವಿತೀಯ ಕ್ರಿಕೆಟ್ ಟೆಸ್ಟ್ ಪಂದ್ಯಕ್ಕಾಗಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಅಭ್ಯಾಸ ನಿರತರಾಗಿರುವ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವನ್ ಸ್ಮಿತ್.

ತಂದೆ, ಜನನಾಯಕ ಕರುಣಾ ನಿಧಿ ಜತೆ
ಇತ್ತೀಚೆಗೆ, ತಮ್ಮ 65ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿರುವ ತಮಿಳುನಾಡಿನ ಡಿಎಂಕೆ ಪಕ್ಷದ ನಾಯಕ ಸ್ಟಾಲಿನ್ ಅವರು, ತಮ್ಮ ತಂದೆ ಹಾಗೂ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿಯವರ ಆಶೀರ್ವಾದ ಪಡೆಯುವಾಗ ತೆಗೆದ ಚಿತ್ರವಿದು.
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್












Click it and Unblock the Notifications