ವಿಶ್ವದೆಲ್ಲೆಡೆ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಸಾಧನೆ ಮೆಲುಕು
ನವದೆಹಲಿ, ಏಪ್ರಿಲ್, 14: ದೇಶದೆಲ್ಲೆಡೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನದ ಸಂಭ್ರಮ. ಪ್ರಧಾನಿ ನರೇಂದ್ರ ಮೋದಿ ಆದಿಯಾಗಿ ಗಣ್ಯರು ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಕೆ ಮಾಡಿದರು. ವಿಶ್ವ ಸಂಸ್ಥೆ ಸಹ ಸಂವಿಧಾನ ಶಿಲ್ಪಿಗೆ ನಮನ ಸಲ್ಲಿಕೆ ಮಾಡಿತು.
ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಕೆ ಮಾಡಿ ಮಾತನಾಡಿದ ಪ್ರಧಾನಿ, ಜೀವನವನ್ನು ಹೋರಾಟದಲ್ಲಿಯೇ ಕಳೆದ ಅಂಬೇಡ್ಕರ್ ಅವರ ಆದರ್ಶಗಳು ಮಾತ್ರ ಎಂದಿಗೂ ಬದಲಾಗಲಿಲ್ಲ ಎಂದು ಹೇಳಿದರು.[ಆನ್ ಲೈನ್ ಕೃಷಿ ಮಾರುಕಟ್ಟೆ ಎಲ್ಲೆಲ್ಲಿ ಆರಂಭ]
ಭಾರತ ಪ್ರವಾಸದಲ್ಲಿರುವ ಬ್ರಿಟನ್ ರಾಜದಂಪತಿ ಪ್ರಿನ್ಸ್ ವಿಲಿಯಮ್ ಮತ್ತು ಕೇಟ್ ಮಿಡ್ಲ್ಟನ್ ಅಸ್ಸಾಂ ನ ತೇಜ್ ಪುರಕ್ಕೆ ಭೇಟಿ ನೀಡಿದ್ದರು. ನಂತರ ಅಭಯಾರಣ್ಯದಲ್ಲಿ ಸಫಾರಿ ಮಾಡಿ ಸಂಭ್ರಮಿಸಿದ್ದು ವಿಶೇಷ. ಇನ್ನಷ್ಟು ಸುದ್ದಿಗಳನ್ನು ಚಿತ್ರಗಳಲ್ಲಿ ನೋಡಿಕೊಂಡು ಬನ್ನಿ(ಪಿಟಿಐ ಚಿತ್ರಗಳು)

ಗೌರವ ಸೂಚಿಸಿದ ಪ್ರಧಾನಿ
ಡಾ ಬಿ ಆರ್ ಅಂಬೇಡ್ಕರ್ ಪುತ್ಥಳಿಗೆ ಶಿರಬಾಗಿ ಗೌರವ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ.

ವಿಶ್ವಸಂಸ್ಥೆಯಲ್ಲಿ ಅಂಬೇಡ್ಕರ್ ಜಯಂತಿ
ವಿಶ್ವಸಂಸ್ಥೆಯಲ್ಲಿ ಅಂಬೇಡ್ಕರ್ ಜಯಂತಿಯನ್ನು ಆಚರಣೆ ಮಾಡಲಾಯಿತು. ಭಾರತದ ಸಂಸದಿಯ ಪ್ರತಿನಿಧಿ ಸಯ್ಯದ್ ಅಕ್ಬರುದ್ದೀನ್ ಪಾಲ್ಗೊಂಡಿದ್ದರು.

ಅಂಬೇಡ್ಕರ್ ನೆನಪು
ಪಂಜಾಬ್ ಅಸೆಂಬ್ಲಿಯ ವಕ್ತಾರ ಚರಣಜೀತ್ ಅತ್ವಾಲ್ ಅಂಬೇಡ್ಕರ್ ಸಾಧನೆಗಳನ್ನು ಅಮೆರಿಕದಲ್ಲಿ ಮೆಲುಕು ಹಾಕಿದರು.

ಮಾಲಾರ್ಪಣೆ
ಅಂಬೇಡ್ಕರ್ ಪುತ್ಥಳಿಗೆ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಮಾಲಾರ್ಪಣೆ ಮಾಡಿದರು.

ಆಗಮಿಸಿದ ಗಣ್ಯರು
ಅಂಬೇಡ್ಕರ್ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್.

ಕಪಿರಾಯ
ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ಮಧ್ಯೆ ಬುಧವಾರ ಕೋಲ್ಕತಾದಲ್ಲಿ ನಡೆದ ಪಂದ್ಯಕ್ಕೆ ಟಿಕೆಟ್ ತೆಗೆದುಕೊಳ್ಳದೆ ಬಂದಿದ್ದ ಕಪಿರಾಯ.

ರಾಜ-ರಾಣಿ
ಬ್ರಿಟನ್ ರಾಜದಂಪತಿ ಪ್ರಿನ್ಸ್ ವಿಲಿಯಮ್ ಮತ್ತು ಕೇಟ್ ಮಿಡ್ಲ್ಟನ್ ಅಸ್ಸಾಂ ನ ಖಾಜಿರಂಗ ಅಭಯಾರಣ್ಯದಲ್ಲಿ ಸುತ್ತಾಡಿದರು.

ಜಂಗಲ್ ಬುಕ್
ತಮ್ಮದೇ ನಟನೆಯ "ಜಂಗಲ್ ಬುಕ್" ನೋಡಲು ಬಂದ ನಟ ನೀಲ್ ಛಾಯಾಗ್ರಾಹಕರ ಕ್ಯಾಮರಾ ಕಣ್ಣಿಹಗೆ ಬಿದ್ದಿದ್ದು ಹೀಗೆ.

ಹಬ್ಬದ ಸಂಭ್ರಮ
ಪಂಜಾಬ್ ನ ಅಮೃತಸರದಲ್ಲಿ ಬೈಸಾಕಿ ಹಬ್ಬದ ನಿಮಿತ್ತ ದೀಪ ಬೆಳಗಿಸಿ ಸಂಭ್ರಮಿಸಿದ ಯುವತಿಯರು.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications