ಸಂಕ್ರಾಂತಿ ಸಂಭ್ರಮ: ಎಳ್ಳು-ಬೆಲ್ಲ, ಪುಣ್ಯ ಸ್ನಾನ, ಜ್ಯೋತಿ ದರ್ಶನ...
ನವದೆಹಲಿ, ಜನವರಿ, 15: ಸೂರ್ಯ ತನ್ನ ಪಥ ಬದಲಾಯಿಸಿದ್ದಾನೆ. ಸಂಕ್ರಾಂತಿ ಸಂಭ್ರಮ ಎಲ್ಲೆಲ್ಲೂ ಮನೆ ಮಾಡಿದೆ. ರೈತರಿಗೆ ಸುಗ್ಗಿಯ ಸಂಭ್ರಮ. ಮಹಾನಗರದ ಜನರಿಗೆ ಹಬ್ಬ ಆಚರಣೆ ಸಂಭ್ರಮ ಸಡಗರ.
ಇಡಿ ಭಾರತದಾದ್ಯಂತ ಹಬ್ಬವನ್ನು ಆಚರಣೆ ಮಾಡಲಾಯಿತು. ಜನರು ಎಳ್ಳು-ಬೆಲ್ಲ ಹಂಚಿ ವರ್ಷವಿಡಿ ನೆಮ್ಮದಿಯ ವಾತಾವರಣ ನೆಲೆಸಲು ಬೇಡಿಕೊಂಡರು. ಮುಂಜಾನೆಯಿಂದಲೇ ದೇವಾಲಯಗಳಲ್ಲಿ ಪೂಜೆ-ಪುನಸ್ಕಾರಗಳು ಜೋರಾಗಿದ್ದವು.[ಮಕರ ಸಂಕ್ರಾಂತಿಗೆ ನಕ್ಷತ್ರಗಳಿಗನುಗುಣವಾಗಿ ಫಲಾಫಲ]
ಶುಕ್ರವಾರ ಸಂಜೆ 5.18ಕ್ಕೆ ಸರಿಯಾಗಿ ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ಸೂರ್ಯ ಪಥ ಬದಲಿಸಿದ ಸಂದರ್ಭ ಗವಿಗಂಗಾಧರೇಶ್ವರನ ಮೇಲೆ ಸೂರ್ಯ ರಶ್ಮಿಚ ಸ್ಪರ್ಶವಾಯಿತು. ಲಿಂಗದ ಮೇಲೆ ಸೂರ್ಯ ರಶ್ಮಿ ಸ್ಪರ್ಶದ ವೀಕ್ಷಣೆಗಾಗಿ ದೇಗುಲದ ಆವರಣದಲ್ಲಿ 2 ಬಿಗ್ ಸ್ಕ್ರೀನ್ ಗಳ ವ್ಯವಸ್ಥೆ ಮಾಡಲಾಗಿತ್ತು. ಕೇರಳದ ಶಬರಿಮಲೆಯಲ್ಲಿಯೂ ಅಯ್ಯಪ್ಪ ಸ್ಮಾಮಿ ದೇವಾಲಯದಲ್ಲೂ ಸಂಭ್ರಮ ಮನೆ ಮಾಡಿತ್ತು.[ಸುಗ್ಗಿ ಕಾಲ ಬಂತು, ಸಂಕ್ರಾಂತಿ ಸಂಭ್ರಮ ತಂತು]
ಬೆಂಗಳೂರಿ ಗವಿ ಗಂಗಾಧರೇಶ್ವರ ದೇವಾಲಯ, ತೀರ್ಥಹಳ್ಳಿಯ ಬಿಜ್ಜವಳ್ಳಿಯಲ್ಲಿ ವಿಶೇಷ ಪೂಜೆಗಳು ನಡೆದವು. ಸಾವಿರಾರು ಭಕ್ತರು ಗವಿಗಂಗಾಧರೇಶ್ವರನಿಗೆ ನಮನ ಸಲ್ಲಿಸಿ ಸೂರ್ಯ ರಶ್ಮಿಯ ವೈಚಿತ್ರದ ದರ್ಶನ ಪಡೆದುಕೊಂಡರು. ಇಡೀ ಭಾರತದಲ್ಲಿ ಸಂಕ್ರಾಂತಿ ಆಚರಣೆ ಹೇಗಿತ್ತು? ನೋಡಿಕೊಂಡು ಬನ್ನಿ...(ಪಿಟಿಐ ಚಿತ್ರಗಳು)

ಗವಿ ಗಂಗಾಧರೇಶ್ವರ
ಬೆಂಗಳೂರಿನ ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಶಿವಲಿಂಗದ ಮೇಲೆ ಸೂರ್ಯ ರಶ್ಮಿ ಬೀಳುವುದನ್ನು ನೋಡಲು ಸಾವಿರಾರು ಭಕ್ತರು ಸೇರಿದ್ದರು.

ಪುಣ್ಯ ಸ್ನಾನ
ಪಶ್ಚಿಮ ಬಂಗಾಳದ ಗಂಗಾಸಾಗರದಲ್ಲಿ ಮಕರ ಸಂಕ್ರಾಂತಿ ನಿಮಿತ್ತ ಪುಣ್ಯ ಸ್ನಾನ ಮಾಡಿ ನರ್ತಿಸಿದ ಭಕ್ತರು.

ನೆರೆದ ಭಕ್ತರು
ಸಂಕ್ರಾಂತಿ ಪ್ರಯುಕ್ತ ಗಂಗಾಸಾಗರದಲ್ಲಿ ಪುಣ್ಯ ಸ್ನಾನ ಮಾಡಲು ಸೇರಿದ್ದ ಭಕ್ತ ಸಮುದಾಯ.

ಹಿಂದೂಗಳ ಮೆರವಣಿಗೆ
ಮಕರ ಸಂಕ್ರಾಂತಿ ನಿಮಿತ್ತ ಫತೇಫುರ್ ದಲ್ಲಿ ಹಿಂದೂ ಸಮುದಾಯದ ಭಕ್ತರಿಂದ ನಡೆದ ಮೆರವಣಿಗೆ.

ಚಂದ್ರಬಾಬು ನಾಯ್ಡು ಸಂಭ್ರಮ
ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಕರ ಸಂಕ್ರಾಂತಿ ಸಂಭ್ರಮದಲ್ಲಿ ಭಾಗವಹಿಸಿದ್ದರು.

ಸಂಗೀತ ಸಂಭ್ರಮ
ಪಾಪ್ ಸಿಂಗರ್ ಗಜೇಂದ್ರ ಫೋಗಾಟ್ ಗುರ್ ಗಾವ್ ನಲ್ಲಿ ಸಂಕ್ರಾಂತಿ ನಿಮಿತ್ತ ವಿಶೇಷ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.

ಹರಿದ್ವಾರ
ಹರಿದ್ವಾರದಲ್ಲಿ ಪುಣ್ಯ ಸ್ನಾನ ಮಾಡಿ ಪುನೀತರಾದ ಭಕ್ತರು. ಮಕರ ಸಂಕ್ರಾಂತಿ ನಿಮಿತ್ತ ಪುಣ್ಯ ಸ್ನಾನ ಮಾಡಿದರೆ ಮೋಕ್ಷ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಜನರಲ್ಲಿದೆ.

ಅಲಹಾಬಾದ್
ಕೊರೆಯುವ ಚಳಿಯ ಮಧ್ಯೆಯೂ ಅಲಹಾಬಾದ್ ನಲ್ಲಿ ಪುಣ್ಯ ಸ್ನಾನಕ್ಕೆ ಲಕ್ಷಾಂತರ ಜನರು ಸೇರಿದ್ದರು.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications