ಮೋದಿಗೆ ಹ್ಯಾಂಡ್ ಶೇಕ್ ನೀಡಲು ರಾಹುಲ್ ನಿರಾಕರಿಸಿದ್ರೆ!?
ನವದೆಹಲಿ, ಡಿಸೆಂಬರ್, 11: ಈ ಕೆಳಗಿನ ಒಂದೊಂದು ಚಿತ್ರಗಳು ಒಂದೊಂದು ಕತೆ ಹೇಳುತ್ತವೆ. ಇಂದಿನ ರಾಜಕೀಯ ಬೆಳವಣಿಗೆ, ನಾಟಕೀಯ ತಿರುವುಗಳು, ಕ್ರೀಡಾ ಸ್ಫೂರ್ತಿ, ಸಂಭ್ರಮ, ಹಳ್ಳಿ ಸೊಗಡು, ಚೆನ್ನೈ ಪ್ರವಾಹದ ನಂತರದ ಸ್ಥಿತಿ...ಎಲ್ಲವನ್ನು ನಿಮ್ಮ ಮುಂದೆ ಇಡುತ್ತಿವೆ.
ಇಲ್ಲಿನ ಚಿತ್ರಗಳ ಅರ್ಥಕ್ಕೆ, ಭಾವಕ್ಕೆ ಯಾವ ಹಿಡಿ ತಡೆ ಇಲ್ಲ. ಅವರವರ ಭಾವಕ್ಕೆ ತಕ್ಕಂತೆ ಅರ್ಥ ಮಾಡಿಕೊಳ್ಳಬಹುದು. ಕತೆ, ಕವನವನ್ನು ಬರೆಯಬಹುದು. ಸುಮ್ಮನೇ ನೋಡಿಕೊಂಡು ಹೋಗಬಹುದು. ಎಲ್ಲಿ ನಿಂತು. ಯಾವ ಪರಿಸ್ಥಿತಿಯಲ್ಲಿ ಚಿತ್ರಗಳನ್ನು ನೋಡುತ್ತಿರಿ ಎಂಬುದರ ಮೇಲೆ ಅದರ ಭಾವಾರ್ಥಗಳನ್ನು ಲೆಕ್ಕ ಹಾಕಬಹುದು.[ಸಂಸತ್ ಕಲಾಪ ದಿಕ್ಕು ತಪ್ಪಿತೆ?]
ಸದ್ಯದ ದೇಶ-ವಿದೇಶದ ವಿದ್ಯಮಾನಗಳನ್ನು ಮತ್ತೊಂದು ಕಣ್ಣಿನಿಂದ ನೋಡುವಂಥ ಫೋಟೊಗಳು ಇಲ್ಲಿವೆ. ಇಲ್ಲಿ ನರೇಂದ್ರ ಮೋದಿ ಇದ್ದಾರೆ, ರಾಹುಲ್ ಗಾಂಧಿ ಇದ್ದಾರೆ, ಸಾನಿಯಾ ಮಿರ್ಜಾ, ನಡಾಲ್, ವಿರಾಟ್ ಕೊಹ್ಲಿ ಎಲ್ಲರೂ ಇದ್ದಾರೆ. ಗ್ರಾಮೀಣ ಭಾಗದ ಕತೆ ಹೇಳುವ ಎತ್ತಿನಗಾಡಿಯೂ ಇದೆ. ದಿನದ ಚಿತ್ರಗಳ ಮೇಲೆ ಒಂದು ಕ್ವಿಕ್ ರೌಂಡ್ ಹಾಕಿಕೊಂಡು ಬರೋಣ....

ಹ್ಯಾಂಡ್ ಶೇಕ್ ಬೇಡ!
ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ 75 ನೇ ಜನ್ಮದಿನಾಚರಣೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ. ನ್ಯಾಶನಲ್ ಹೆರಾಲ್ಡ್ ಪ್ರಕರಣಕ್ಕೆ ಎರಡು ಪಕ್ಷಗಳ ನಾಯಕರ ನಡುವೆ ಮಾತಿನ ಯುದ್ಧ ನಡೆಯುತ್ತಿದೆ.

ಎಲ್ಲಿಗೆ ಪಯಣ
ಸೂರತ್ ನ ಹಳ್ಳಿಯೊಂದರ ರಸ್ತೆಯಲ್ಲಿ ಹೊರಟ ಎತ್ತಿನ ಗಾಡಿ ಗ್ರಾಮೀಣ ಭಾಗದ ಕನ್ನಡಿಯಂತೆ ಕಂಡಿದ್ದು ಸುಳ್ಳಲ್ಲ.

ಚಿತ್ರರಂಗ ಬದಲಾಗಿದೆಯಾ?
ಕೇರಳದ ಕೊಚ್ಚಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡ ಖ್ಯಾತ ಹಿನ್ನಲೆ ಗಾಯಕ ಜೇಸುದಾಸ್ ಮತ್ತು ನಟ ಜಯರಾಂ ಇಂದಿನ ಚಿತ್ರರಂಗದ ಸ್ಥಿತಿಯ ಬಗ್ಗೆ ಪರಸ್ಪರ ಮಾತುಕತೆ ನಡೆಸಿದಂತೆ ಕಂಡುಬಂತು.

ಕೊಹ್ಲಿ ಕಿವಿಯಲ್ಲಿ ಸಾನಿಯಾ ಏನು ಹೇಳಿದ್ರು?
ಐಪಿಟಿಎಲ್ ಟೆನಿಸ್ ಪಂದ್ಯಾವಳಿಯ ಪುರುಷರ ಪಂದ್ಯ ನಡೆಯುತ್ತಿದ್ದ ವೇಳೆ ಕಂಡು ಬಂದ ದೃಶ್ಯ, ಸಾನಿಯಾ ಮಿರ್ಜಾ ವಿರಾಟ್ ಬಳಿ ಏನು ಹೇಳಿದರು ಎಂಬುದು ಪಕ್ಕದಲ್ಲಿದ್ದವರಿಗೂ ಕೇಳಲಿಲ್ಲ.

ನವದೆಹಲಿಯಲ್ಲಿ ನಡಾಲ್
ನವದೆಹಲಿಯಲ್ಲಿ ನಡೆದ ಐಪಿಟಿಎಲ್ ಟೆನಿಸ್ ಪಂದ್ಯಾವಳಿಯಲ್ಲಿ ಫಿಲಿಪೈನ್ಸ್ಆಟಗಾರರನ್ನು ಸೋಲಿಸಿದ ನಂತರ ರಫೆಲ್ ನಡಾಲ್ ಮತ್ತು ಸಾನಿಯಾ ಸಂಭ್ರಮ.

ಬದಲಾವಣೆ ತರುತ್ತೇನೆ
ಅರ್ಜೇಂಟಿನಾದ ಅಧ್ಯಕ್ಷರಾಗಿ ಪ್ರಮಾಣ ವಚನ ತೆಗೆದುಕೊಂಡ ನಂತರ ಮಾರಿಶಿಯೋ ಮಾಕ್ರಿ ತಮ್ಮ ಬೆಂಬಲಿಗರೊಂದಿಗೆ ಸಂತಸ ಹಂಚಿಕೊಂಡಿದ್ದು ಹೀಗೆ.

ಅಭಿಮಾನಿಗಳ ಸಂಭ್ರಮಕ್ಕೆ ಎಣೆ ಎಲ್ಲಿ?
ಗುದ್ದೋಡು ಪ್ರಕರಣದಲ್ಲಿ ಸಲ್ಮಾನ್ ಖಾನ್ ನಿರ್ದೋಷಿ ಎಂಬ ನಿರ್ಧಾರ ಹೊರಬೀಳುತ್ತಿದ್ದಂತೆ ಮುಂಬೈನಲ್ಲಿ ಸಂಭ್ರಮಿಸಿದ ಸಲ್ಮಾನ್ ಅಭಿಮಾನಿಗಳು.

ಅಯ್ಯಪ್ಪಾ.. ಅಂತೂ ಹೇರ್ ಕಟ್ ಮಾಡಿಸ್ದೆ
ಪ್ರವಾಹಕ್ಕೆ ಸಿಕ್ಕಿ ನಲುಗಿಹೋಗಿದ್ದ ಚೆನ್ನೈ ಬಾಲಕರಿಗೆ ಕೇಶ ಮಂಡನ ಮಾಡಿದ ಎನ್ ಜಿಒ ಸದಸ್ಯರು. ಚೆನ್ನೈ ನಲ್ಲಿ ಮಳೆ ಕಳೆದೆರಡು ದಿನಗಳಿಂದ ನಿಯಂತ್ರಣಕ್ಕೆ ಬಂದಿದ್ದು ಜನಜೀವನ ಸಹಜ ಸ್ಥಿತಿಗೆ ಬಂದಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications