ಮೋದಿಗೆ ಹ್ಯಾಂಡ್ ಶೇಕ್ ನೀಡಲು ರಾಹುಲ್ ನಿರಾಕರಿಸಿದ್ರೆ!?
ನವದೆಹಲಿ, ಡಿಸೆಂಬರ್, 11: ಈ ಕೆಳಗಿನ ಒಂದೊಂದು ಚಿತ್ರಗಳು ಒಂದೊಂದು ಕತೆ ಹೇಳುತ್ತವೆ. ಇಂದಿನ ರಾಜಕೀಯ ಬೆಳವಣಿಗೆ, ನಾಟಕೀಯ ತಿರುವುಗಳು, ಕ್ರೀಡಾ ಸ್ಫೂರ್ತಿ, ಸಂಭ್ರಮ, ಹಳ್ಳಿ ಸೊಗಡು, ಚೆನ್ನೈ ಪ್ರವಾಹದ ನಂತರದ ಸ್ಥಿತಿ...ಎಲ್ಲವನ್ನು ನಿಮ್ಮ ಮುಂದೆ ಇಡುತ್ತಿವೆ.
ಇಲ್ಲಿನ ಚಿತ್ರಗಳ ಅರ್ಥಕ್ಕೆ, ಭಾವಕ್ಕೆ ಯಾವ ಹಿಡಿ ತಡೆ ಇಲ್ಲ. ಅವರವರ ಭಾವಕ್ಕೆ ತಕ್ಕಂತೆ ಅರ್ಥ ಮಾಡಿಕೊಳ್ಳಬಹುದು. ಕತೆ, ಕವನವನ್ನು ಬರೆಯಬಹುದು. ಸುಮ್ಮನೇ ನೋಡಿಕೊಂಡು ಹೋಗಬಹುದು. ಎಲ್ಲಿ ನಿಂತು. ಯಾವ ಪರಿಸ್ಥಿತಿಯಲ್ಲಿ ಚಿತ್ರಗಳನ್ನು ನೋಡುತ್ತಿರಿ ಎಂಬುದರ ಮೇಲೆ ಅದರ ಭಾವಾರ್ಥಗಳನ್ನು ಲೆಕ್ಕ ಹಾಕಬಹುದು.[ಸಂಸತ್ ಕಲಾಪ ದಿಕ್ಕು ತಪ್ಪಿತೆ?]
ಸದ್ಯದ ದೇಶ-ವಿದೇಶದ ವಿದ್ಯಮಾನಗಳನ್ನು ಮತ್ತೊಂದು ಕಣ್ಣಿನಿಂದ ನೋಡುವಂಥ ಫೋಟೊಗಳು ಇಲ್ಲಿವೆ. ಇಲ್ಲಿ ನರೇಂದ್ರ ಮೋದಿ ಇದ್ದಾರೆ, ರಾಹುಲ್ ಗಾಂಧಿ ಇದ್ದಾರೆ, ಸಾನಿಯಾ ಮಿರ್ಜಾ, ನಡಾಲ್, ವಿರಾಟ್ ಕೊಹ್ಲಿ ಎಲ್ಲರೂ ಇದ್ದಾರೆ. ಗ್ರಾಮೀಣ ಭಾಗದ ಕತೆ ಹೇಳುವ ಎತ್ತಿನಗಾಡಿಯೂ ಇದೆ. ದಿನದ ಚಿತ್ರಗಳ ಮೇಲೆ ಒಂದು ಕ್ವಿಕ್ ರೌಂಡ್ ಹಾಕಿಕೊಂಡು ಬರೋಣ....

ಹ್ಯಾಂಡ್ ಶೇಕ್ ಬೇಡ!
ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ 75 ನೇ ಜನ್ಮದಿನಾಚರಣೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ. ನ್ಯಾಶನಲ್ ಹೆರಾಲ್ಡ್ ಪ್ರಕರಣಕ್ಕೆ ಎರಡು ಪಕ್ಷಗಳ ನಾಯಕರ ನಡುವೆ ಮಾತಿನ ಯುದ್ಧ ನಡೆಯುತ್ತಿದೆ.

ಎಲ್ಲಿಗೆ ಪಯಣ
ಸೂರತ್ ನ ಹಳ್ಳಿಯೊಂದರ ರಸ್ತೆಯಲ್ಲಿ ಹೊರಟ ಎತ್ತಿನ ಗಾಡಿ ಗ್ರಾಮೀಣ ಭಾಗದ ಕನ್ನಡಿಯಂತೆ ಕಂಡಿದ್ದು ಸುಳ್ಳಲ್ಲ.

ಚಿತ್ರರಂಗ ಬದಲಾಗಿದೆಯಾ?
ಕೇರಳದ ಕೊಚ್ಚಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡ ಖ್ಯಾತ ಹಿನ್ನಲೆ ಗಾಯಕ ಜೇಸುದಾಸ್ ಮತ್ತು ನಟ ಜಯರಾಂ ಇಂದಿನ ಚಿತ್ರರಂಗದ ಸ್ಥಿತಿಯ ಬಗ್ಗೆ ಪರಸ್ಪರ ಮಾತುಕತೆ ನಡೆಸಿದಂತೆ ಕಂಡುಬಂತು.

ಕೊಹ್ಲಿ ಕಿವಿಯಲ್ಲಿ ಸಾನಿಯಾ ಏನು ಹೇಳಿದ್ರು?
ಐಪಿಟಿಎಲ್ ಟೆನಿಸ್ ಪಂದ್ಯಾವಳಿಯ ಪುರುಷರ ಪಂದ್ಯ ನಡೆಯುತ್ತಿದ್ದ ವೇಳೆ ಕಂಡು ಬಂದ ದೃಶ್ಯ, ಸಾನಿಯಾ ಮಿರ್ಜಾ ವಿರಾಟ್ ಬಳಿ ಏನು ಹೇಳಿದರು ಎಂಬುದು ಪಕ್ಕದಲ್ಲಿದ್ದವರಿಗೂ ಕೇಳಲಿಲ್ಲ.

ನವದೆಹಲಿಯಲ್ಲಿ ನಡಾಲ್
ನವದೆಹಲಿಯಲ್ಲಿ ನಡೆದ ಐಪಿಟಿಎಲ್ ಟೆನಿಸ್ ಪಂದ್ಯಾವಳಿಯಲ್ಲಿ ಫಿಲಿಪೈನ್ಸ್ಆಟಗಾರರನ್ನು ಸೋಲಿಸಿದ ನಂತರ ರಫೆಲ್ ನಡಾಲ್ ಮತ್ತು ಸಾನಿಯಾ ಸಂಭ್ರಮ.

ಬದಲಾವಣೆ ತರುತ್ತೇನೆ
ಅರ್ಜೇಂಟಿನಾದ ಅಧ್ಯಕ್ಷರಾಗಿ ಪ್ರಮಾಣ ವಚನ ತೆಗೆದುಕೊಂಡ ನಂತರ ಮಾರಿಶಿಯೋ ಮಾಕ್ರಿ ತಮ್ಮ ಬೆಂಬಲಿಗರೊಂದಿಗೆ ಸಂತಸ ಹಂಚಿಕೊಂಡಿದ್ದು ಹೀಗೆ.

ಅಭಿಮಾನಿಗಳ ಸಂಭ್ರಮಕ್ಕೆ ಎಣೆ ಎಲ್ಲಿ?
ಗುದ್ದೋಡು ಪ್ರಕರಣದಲ್ಲಿ ಸಲ್ಮಾನ್ ಖಾನ್ ನಿರ್ದೋಷಿ ಎಂಬ ನಿರ್ಧಾರ ಹೊರಬೀಳುತ್ತಿದ್ದಂತೆ ಮುಂಬೈನಲ್ಲಿ ಸಂಭ್ರಮಿಸಿದ ಸಲ್ಮಾನ್ ಅಭಿಮಾನಿಗಳು.

ಅಯ್ಯಪ್ಪಾ.. ಅಂತೂ ಹೇರ್ ಕಟ್ ಮಾಡಿಸ್ದೆ
ಪ್ರವಾಹಕ್ಕೆ ಸಿಕ್ಕಿ ನಲುಗಿಹೋಗಿದ್ದ ಚೆನ್ನೈ ಬಾಲಕರಿಗೆ ಕೇಶ ಮಂಡನ ಮಾಡಿದ ಎನ್ ಜಿಒ ಸದಸ್ಯರು. ಚೆನ್ನೈ ನಲ್ಲಿ ಮಳೆ ಕಳೆದೆರಡು ದಿನಗಳಿಂದ ನಿಯಂತ್ರಣಕ್ಕೆ ಬಂದಿದ್ದು ಜನಜೀವನ ಸಹಜ ಸ್ಥಿತಿಗೆ ಬಂದಿದೆ.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications