ಮಂಗಳವಾರದ ತಾಜಾ ಸುದ್ದಿಗಳ ಚಿತ್ರ ಸಂಪುಟ
ನವದೆಹಲಿ, ಏ. 7 : ದೇಶದೆಲ್ಲೆಡೆ ಜನರು ಬಿಸಿಲಿಗೆ ತತ್ತರಿಸುತ್ತಿದ್ದಾರೆ. ಬಿಸಿಲಿನ ಝಳದೊಂದಿಗೆ ಸೇರಿಕೊಂಡಿರುವ ಮಾಲಿನ್ಯ ಜನರ ಜೀವ ಹಿಂಡುತ್ತಿದೆ. ಮಂಗಳವಾರದ ವಿವಿಧ ಚಿತ್ರಗಳೇ ಅದಕ್ಕೆ ಸಾಕ್ಷಿ.
ಅಕಾಲಿಕ ಮಳೆಗೆ ಬೆಳೆ ಕಳೆದುಕೊಂಡ ರೈತರ ಮನವಿ ಆಲಿಸಿದ ಬಾಲಿವುಡ್ ತಾರೆ, ರಾಜ್ಯಸಭಾ ಸದಸ್ಯೆ ಹೇಮಾ ಮಾಲಿನಿ, ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಜತೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ. ದೆಹಲಿಯಲ್ಲಿ ನಡೆಯುತ್ತಿರುವ ಪರಿಸರ ಸ್ನೇಹಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟದ ಕೇಂದ್ರಗಳಿಗೆ ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಭೇಟಿ ಮತ್ತಷ್ಟು ಸುದ್ದಿಗಳು ಚಿತ್ರಗಳಲ್ಲಿ...(ಪಿಟಿಐ ಚಿತ್ರಗಳು)[ಬುಲೆಟ್ ಏರಿದ ಮಹೇಂದ್ರ, ಅರಳಿದ ಹೂಗಳ ಸೌಂದರ್ಯ]

ನಮಗೆ ನೀರು ಕೊಡಿ
ಬೇಸಿಗೆ ಧಗೆ ದಿನದಿಂದ ದಿನಕ್ಕೆ ಏರುತ್ತಿದ್ದು ಎಲ್ಲೆಡೆ ಕುಡಿವ ನೀರಿಗೆ ಹಾಹಾಕಾರ ಆರಂಭವಾಗಿದೆ. ನಮಗೆ ಕುಡಿಯುವ ನೀರು ಒದಗಿಸಿ ಎಂದು ಆಗ್ರಹಿಸಿ ಪಾನ್ ಬೀಡಾ ವ್ಯಾಪಾರಿಗಳು ದೆಹಲಿಯಲ್ಲಿ ಬೀದಿಗಳಿದು ಪ್ರತಿಭಟನೆ ನಡೆಸಿದರು.

ಗೆಳೆಯರ ಹುಡುಕುತ್ತಾ..
ಗೆಳೆಯರೇ ಎಲ್ಲಿರುವಿರಿ, ನಿಮ್ಮ ಬಳಿಗೆ ನಾನು ಬರುತ್ತಿದ್ದೇನೆ, ಸ್ವಲ್ಪ ತಡೆಯಿರಿ ಎಂಬಂತೆ ಗರಿಗಳನ್ನು ಅಗಲಿಸಿ ಹೊರಟ ರಾಷ್ಟ್ರಪಕ್ಷಿ. ಬಿಕೆನಾರ್ ನ ಉದ್ಯಾನವೊಂದರಲ್ಲಿ ಸ್ವಚ್ಛಂದವಾಗಿ ವಿಹರಿಸಿದ ನವಿಲು ಕ್ಯಾಮರಾ ಕಣ್ಣಿಗೆ ಬಿದ್ದದ್ದು ಹೀಗೆ.

ಎಲ್ಲಾ ಸರಿಯಾಗಿದೆಯಾ?
ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಮುಕ್ತಿ ಮಹಮದ್ ಸಯ್ಯೀದ್ ಮತ್ತು ಪ್ರಧಾನಿ ನರೇಂದ್ರ ಮೋದಿ ನವದೆಹಲಿಯಲ್ಲಿ ಮಾತುಕತೆ ನಡೆಸಿದರು. ಜಮ್ಮು ಕಾಶ್ಮೀರದಲ್ಲಿ ಬಿಜೆಪಿ ಮತ್ತು ಪಿಡಿಪಿ ಮೈತ್ರಿ ಸರ್ಕಾರ ರಚಿಸಿಕೊಂಡಿದ್ದು ಕೆಲದಿನದ ಹಿಂದೆ ದೋಸ್ತಿಗಳ ಮಧ್ಯೆ ಭಿನ್ನಾಭಿಪ್ರಾಯ ಉಂಟಾಗಿತ್ತು.

ಚಿನ್ನ ಹೇಳು ಹೇಗಿರುವೆ?
ಪುತ್ರಿ ಝೀವಾ ಜತೆ ರಾಂಚಿಯಲ್ಲಿ ಕಾಣಿಸಿಕೊಂಡ ಸಾಕ್ಷಿ ಸಿಂಗ್. ಮಹೇಂದ್ರ ಸಿಂಗ್ ಧೋನಿ ಸಹ ಜಾಲಿ ಮೂಡ್ ನಲ್ಲಿದ್ದು ಏಪ್ರಿಲ್ 8 ರಿಂದ ಆರಂಭವಾಗಲಿರುವ ಐಪಿಎಲ್ ಗೆ ಸಜ್ಜಾಗುತ್ತಿದ್ದಾರೆ.

ಸಿನಿಮಾ ಶೂಟಿಂಗ್ ಅಲ್ಲ
ಬಾಲಿವುಡ್ ತಾರೆ, ರಾಜ್ಯಸಭಾ ಸದಸ್ಯೆ ಹೇಮಾ ಮಾಲಿನಿ ಅಕಾಲಿಕ ಮಳೆಯಿಂದ ಹಾನಿಗೊಳಗಾದ ರೈತರ ಹೊಲಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹೇಗಿದೆ ಉತ್ಪನ್ನ?
ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ನವದೆಹಲಿಯಲ್ಲಿ ನಡೆಯುತ್ತಿರುವ ಪರಿಸರ ಸ್ನೇಹಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟದ ಕೇಂದ್ರಗಳಿಗೆ ಭೇಟಿ ನೀಡಿದರು.

ಮಂಜಲ್ಲ,, ಸರಿಯಾಗಿ ನೋಡಿ
ಬಿಕೆನಾರ್ ನಲ್ಲಿ ಮಾಲಿನ್ಯ ಪ್ರಮಾಣ ಮೀತಿ ಮೀರಿದ್ದು ಧೂಳಿನಲ್ಲಿ ಬೈಕ್ ಸವಾರರು ಆಗಮಿಸುತ್ತಿದ್ದ ದೃಶ್ಯ ಕಂಡಿದ್ದು ಹೀಗೆ. ವಾತಾವರಣದ ಉಷ್ಣತೆ ಮತ್ತು ಮಾಲಿನ್ಯ ಪ್ರಮಾಣ ಪ್ರತಿದಿನ ಏರುತ್ತಿದ್ದು ಮಹಾನಗರಗಳಲ್ಲಿ ವಾಸ ಮಾಡುವುದು ದುಸ್ತರವಾಗಿ ಪರಿಣಮಿಸುತ್ತಿದೆ.

ತೃತೀಯ ರಂಗದ ಆರಂಭಿಕ ದಾಂಡಿಗ?
ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಕ್ರಿಕೆಟ್ ಆಡುವುದರ ಮೂಲಕ ಲಕ್ನೋದಲ್ಲಿ ಹಮ್ಮಿಕೊಂಡಿದ್ದ ಪಂದ್ಯಾವಳಿಯೊಂದನ್ನು ಉದ್ಘಾಟಿಸಿದರು.

ತುಂಬು ಚಂದ್ರನ ನೋಡಿ
ಸೋಮವಾರ ರಾತ್ರಿ ಕಂಡು ಬಂದ ತುಂಬು ಚಂದಿರ. ಮೊನ್ನೆಯಷ್ಟೇ ಚಂದ್ರ ಗ್ರಹಣ ನಡೆದಿದ್ದು ಚಂದ್ರ ಮರುಹುಟ್ಟು ಪಡೆದು ಎದ್ದುಬಂದನೋ ಎಂಬಂತೆ ಒಂದು ಕ್ಷಣ ಕಂಡಿದ್ದು ಸತ್ಯ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD











Click it and Unblock the Notifications