ಹುಕ್ಕೇರಿ: ಅರಳಬೇಕಿದ್ದ ಜೀವಗಳ ಬಲಿ ಪಡೆದ ಶಾಲೆಯ ಗೋಡೆ
ನವದೆಹಲಿ/ ಬೆಳಗಾವಿ, ಜುಲೈ, 11: ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಸರ್ಕಾರಿ ಶಾಲೆಯ ಕಟ್ಟಡದ ಗೋಡೆ ಕುಸಿದು 2ಮಕ್ಕಳು ಸ್ಥಳದಲ್ಲೇ ಮೃತ ಪಟ್ಟಿದ್ದು 9 ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಸುದ್ದಿಯನ್ನು ಅರಗಿಸಿಕೊಳ್ಳಬೇಕಿದೆ.
ಉಗ್ರನ ಹತ್ಯೆ ನಂತರ ಕಾಶ್ಮೀರ ಕಣಿವೆಯಲ್ಲಿ ಪರಿಸ್ಥಿತಿ ಕೈ ಮೀರಿ ಹೋಗಿದ್ದು ಇನ್ನು ನಿಯಂತ್ರಣಕ್ಕೆ ಬಂದಿಲ್ಲ. ಉಗ್ರ ಬುರ್ಹಾನ್ ವಾಹಿ ಹತ್ಯೆಯ ಹಿಂಸಾತ್ಮಕ ಪ್ರತಿಭಟನೆಗೆ ಬಲಿಯಾದವರ ಸಂಖ್ಯೆ ಇದೀಗ 30 ದಾಟಿದೆ. ಪ್ರತಿಭಟನಾಕಾರರು ಮತ್ತು ಪೊಲೀಸರ ಮೇಲೆ ನಿರಂತರವಾಗಿ ಕಲ್ಲು ತೂರಾಟ ಮಾಡುತ್ತಿರುವ ಪರಿಣಾಮ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.[ಕಲ್ಲಪ್ಪ ಆತ್ಮಹತ್ಯೆ ಪ್ರಕರಣ: ಸಿಐಡಿಗೆ ಮಾಹಿತಿ ನೀಡುವುದು ಹೇಗೆ?]
ಮಳೆ ಪರಿಣಾಮ ಗಂಗಾನದಿ ಇಕ್ಕೆಲದಲ್ಲಿ ಪ್ರವಾಹ ಪರಿಸ್ಥಿತಿ ಕಂಡುಬಂದಿದೆ. ಉಜ್ಜಯಿಸಿ ಮತ್ತು ವಾರಣಾಸಿಯಲ್ಲಿ ಮಳೆ ಪರಿಣಾಮ ಪ್ರವಾಹ ಸ್ಥಿತಿ ಎದುರಾಗಿದೆ. (ಪಿಟಿಐ ಚಿತ್ರಗಳು)

ಮಕ್ಕಳ ದುರ್ಮರಣ
ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಬಾಲಕಿಯರ ಶಾಲೆಯ ಕಟ್ಟಡದ ಗೋಡೆ ಕುಸಿದು 2ಮಕ್ಕಳು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ
ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಸರ್ಕಾರಿ ಶಾಲೆಯ ಕಟ್ಟಡದ ಗೋಡೆ ಕುಸಿದ ಪರಿಣಾಮ ಗಂಭೀರ ಗಾಯಗೊಂಡಿರುವ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿಯಂತ್ರಣಕ್ಕೆ ಬಾರದ ಪರಿಸ್ಥಿತಿ
ಉಗ್ರನ ಹತ್ಯೆ ನಂತರ ಕಾಶ್ಮೀರ ಕಣಿವೆಯಲ್ಲಿ ಪರಿಸ್ಥಿತಿ ಕೈ ಮೀರಿ ಹೋಗಿದ್ದು ಇನ್ನು ನಿಯಂತ್ರಣಕ್ಕೆ ಬಂದಿಲ್ಲ. ಪೊಲೀಸರ ಮೇಲೆ ಪ್ರತಿಭಟನಾಕಾರರ ಕಲ್ಲೆಸೆತ.

ಕಲ್ಲು ತೂರಾಟ
ಉಗ್ರ ಬುರ್ಹಾನ್ ವಾಹಿ ಹತ್ಯೆಯ ಹಿಂಸಾತ್ಮಕ ಪ್ರತಿಭಟನೆಗೆ ಬಲಿಯಾದವರ ಸಂಖ್ಯೆ ಇದೀಗ 30 ದಾಟಿದೆ. ಪ್ರತಿಭಟನಾಕಾರರು ಮತ್ತು ಪೊಲೀಸರ ಮೇಲೆ ನಿರಂತರವಾಗಿ ಕಲ್ಲು ತೂರಾಟ ಮಾಡುತ್ತಿರುವ ಪರಿಣಾಮ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಮಳೆ ಆರ್ಭಟ
ಮಳೆ ಪರಿಣಾಮ ಉಜ್ಜಯಿನಿಯಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದ್ದು ನೀರಿನಿಂದ ಆವೃತವಾದ ದೇವಾಲಯಗಳು.

ಉಕ್ಕಿ ಹರಿದ ಗಂಗಾ ನದಿ
ಧಾರಾಕಾರ ಮಳೆ ಪರಿಣಾಮ ಗಂಗಾ ನದಿ ಉಕ್ಕಿ ಹರಿದಿದ್ದು ವಾರಣಾಸಿಯಲ್ಲಿ ಕಂಡು ಬಂದ ದೃಶ್ಯ.

ತಾಜ್ ಮಹಲ್ ನೋಡಿ
ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಪ್ರಯಾಣಿಸುತ್ತಿದ್ದ ವಿಮಾನದಿಂದ ತೆಗೆದ ವಿಶ್ವ ವಿಖ್ಯಾತ ತಾಜ್ ಮಹಲ್ ಚಿತ್ರ.












Click it and Unblock the Notifications