ಜಿಂದಾಲ್ಗೆ ಬಂದ ಕೇಜ್ರಿವಾಲ್, ಪಾಠ ಹೇಳಿದ ಭಾರತ ರತ್ನ
ಬೆಂಗಳೂರು, ಜನವರಿ, 28: ತೀವ್ರ ಕೆಮ್ಮು ಮತ್ತು ಮಧುಮೇಹದಿಂದ ಬಳಲುತ್ತಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಚಿಕಿತ್ಸೆಗಾಗಿ ಬೆಂಗಳೂರಿನ ಜಿಂದಾಲ್ ಪ್ರಕೃತಿ ಚಿಕಿತ್ಸಾಲಯಕ್ಕೆ ದಾಖಲಾಗಿದ್ದಾರೆ.
ಪತ್ನಿ ಸುನೀತಾ ಅವರೊಂದಿಗೆ ಕೇಜ್ರಿವಾಲ್ ಬೆಂಗಳೂರಿಗೆ ಆಗಮಿಸಿದ್ದಾರೆ. ಅಲ್ಲಿಂದ ಸರ್ಕಾರಿ ವಾಹನ ತೊರೆದು ಖಾಸಗಿ ವಾಹನದಲ್ಲಿಯೇ ಆಸ್ಪತ್ರೆಗೆ ಆಗಮಿಸಿದರು. ಬುಧವಾರ ಮಧ್ಯಾಹ್ನ ಜಿಂದಾಲ್ ಆಸ್ಪತ್ರೆಯ ಒಳರೋಗಿಯಾಗಿ ದಾಖಲಾದರು.
ಉತ್ತರ ಕರ್ನಾಟಕದ ವಿವಿಧೆಡೆ ಪ್ರವಾಸ ನಡೆಸಿದ ಹಿರಿಯ ವಿಜ್ಞಾನಿ ಭಾರತರತ್ನ ಡಾ.ಸಿ.ಎನ್.ಆರ್. ರಾವ್ ಮಕ್ಕಳೊಂದಿಗೆ ಬೆರೆತು ವಿಜ್ಞಾನದ ಪಾಠ ಹೇಳಿಕೊಟ್ಟರು, ಕೊಪ್ಪಳ ಮತ್ತು ಗದಗದಲ್ಲಿ ರಾವ್ ಪ್ರವಾಸ ಮಾಡಿದರು. ಈ ವೇಳೆ ನಂಬಿಕೆ ಇರಬೇಕು ಆದರೆ ಮೂಢನಂಬಿಕೆ ಇರಬಾರದು ಎಂದು ಪ್ರತಿಪಾದಿಸಿದರು. ಬೆಂಗಳೂರು ಸೇರಿದಂತೆ ರಾಜ್ಯ ಮತ್ತು ದೇಶದ, ವಿವಿಧೆಡೆ ನಡೆದ ಘಟನಾವಳಿಗಳ ಒಟ್ಟು ಚಿತ್ರಣ ಇಲ್ಲಿದೆ....(ಪಿಟಿಐ ಚಿತ್ರಗಳು)

ಕೇಜ್ರಿವಾಲ್ ಚಿಕಿತ್ಸೆ
ತೀವ್ರ ಕೆಮ್ಮು ಮತ್ತು ಮಧುಮೇಹದಿಂದ ಬಳಲುತ್ತಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಚಿಕಿತ್ಸೆಗಾಗಿ ಬೆಂಗಳೂರಿನ ಜಿಂದಾಲ್ ಪ್ರಕೃತಿ ಚಿಕಿತ್ಸಾಲಯಕ್ಕೆ ದಾಖಲಾಗಿದ್ದಾರೆ.

ಕೇಜ್ರಿವಾಲ್ ರೌಂಡ್ಸ್
ಜಿಂದಾಲ್ ಆಸ್ಪತ್ರೆ ಆವರಣದಲ್ಲಿ ವಾಯು ವಿಹಾರಕ್ಕೆ ಹೊರಟ ಅರವಿಂದ್ ಕೇಜ್ರಿವಾಲ್. ಆಟೋ ಚಾಲಕರಿಗೆ 8ನೇ ತರಗತಿ ಕಡ್ಡಾಯ ಎಂಬ ನೀತಿ ವಿರೋಧಿಸಿ ಜನವರಿ 31 ರಂದು ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಕೇಜ್ರಿವಾಲ್ ಭಾಗವಹಿಸಲಿದ್ದಾರೆ.

ಮಕ್ಕಳಿಗೆ ಪಾಠ ಹೇಳಿದ ಭಾರತ ರತ್ನ
ಗದಗದ ಲಕ್ಷ್ಮೀಶ್ವರದಲ್ಲಿ ಮಕ್ಕಳ ವಿವಿಧ ಪ್ರಶ್ನೆಗಳಿಗೆ ಉತ್ತರಿಸಿದ ಹಿರಿಯ ವಿಜ್ಞಾನಿ ಭಾರತರತ್ನ ಡಾ.ಸಿ.ಎನ್.ಆರ್. ರಾವ್. ಉತ್ತರ ಕರ್ನಾಟಕದ ಹಲವೆಡೆ ಪ್ರವಾಸ ಮಾಡಿದ ರಾವ್ ಮಕ್ಕಳೊಂದಿಗೆ ಬೆರೆತರು.

ನ್ಯಾಯಾಲಕ್ಕೆ ಸರಿತಾ
ಬಹುಕೋಟಿ ಸೋಲಾರ್ ಹಗರಣದ ಪ್ರಮುಖ ಆರೋಪಿಗಳಾದ ಸರಿತಾ ಎಸ್ ನಾಯರ್ ಕೊಚ್ಚಿಯ ನ್ಯಾಯಾಲಯಕ್ಕೆ ಬುಧವಾರ ಹಾಜರಾಗಿದ್ದು. ಸೋಲಾರ್ ಹಗರಣ ದೇಶಾದ್ಯಂತ ವಿವಾದ ಎಬ್ಬಿಸಿದ್ದು ಕೇರಳದ ಪ್ರಮುಖರ ಹೆಸರು ಕೇಳಿ ಬರುತ್ತಿದೆ.

ಚಾಂಡಿ ರಾಜೀನಾಮಗೆ ಆಗ್ರಹ
ಸೋಲಾರ್ ಹಗರಣದಲ್ಲಿ ಕೇರಳ ಸಿಎಂ ಉಮನ್ ಚಾಂಡಿ ಭಾಗಿಯಾಗಿದ್ದು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಲ್ ಇಂಡಿಯಾ ಯುತ್ ಫೆಡರೇಶನ್ ಕಾರ್ಯಕರ್ತಯರು ತಿರುವನಂತಪುರದಲ್ಲಿ ಪ್ರತಿಭಟನೆ ನಡೆಸಿದರು.

ಇದು ನಮ್ಮ ಕೊಡಗಿನ ತಂಡ
ನವದೆಹಲಿಯ ರಾಜ್ ಪಥ್ ನಲ್ಲಿ ನಡೆದ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕೊಡಗು ಕಾಫಿಯನಾಡು ಸ್ತಬ್ಧಚಿತ್ರ ಜನಮನ್ನಣೆಗೆ ಪಾತ್ರವಾಗಿತ್ತು. ಸ್ತಬ್ಧಚಿತ್ರದ ನೇತೃತ್ವ ವಹಿಸಿದ್ದ ತಂಡ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಭೇಟಿಮಾಡಿತು.

ಮಹಾ ಸಿಎಂ ಭೇಟಿ
ಮಹಾರಾಷ್ಟ್ರದ ಶನಿಸಿಂಗಣಾಪುರ ಶನಿ ದೇವಾಲಯಕ್ಕೆ ಮಹಿಳೆಯರ ಪ್ರವೇಶ ಕುರಿತು ಎದ್ದಿರುವ ವಿವಾದ ದೊಡ್ಡದಾಗಿದೆ, ಮಹಿಳಾ ಪರ ಹೋರಾಟಗಾರ್ತಿ ತೃಪ್ತಿ ದೇಸಾತಿ ಮಹಾ ಸಿಎಂ ದೇವೇಂದ್ರ ಫಡ್ನವೀಸ್ ಅವರನ್ನು ಈ ಹಿನ್ನೆಲೆಯಲ್ಲಿ ಭೇಟಿ ಮಾಡಿದರು.

ವೆಬ್ ತಾಣ ಬಿಡುಗಡೆ
ನಾಪತ್ತೆಯಾದವರ ಬಗ್ಗೆ ಸಕಲ ಮಾಹಿತಿ ನೀಡುವ ವೆಬ್ ತಾಣವನ್ನು ಮುಂಬೈನಲ್ಲಿ ಬಾಲಿವುಡ್ ನಟಿ ಕಾಜೋಲ್ ಅನಾವರಣ ಮಾಡಿದರು.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು











Click it and Unblock the Notifications