ಪೀಲೆಯಿಂದ ಪರಿಕ್ಕರ್ ವರೆಗೆ... 10 ಸುದ್ದಿ ಚಿತ್ರಗಳು
ನವದೆಹಲಿ ಅಕ್ಟೋಬರ್. 13: ಪುಟ್ಬಾಲ್ ದಂತಕತೆ ಬ್ರೆಜಿಲ್ ನ ಪೀಲೆ ಭಾರತಕ್ಕೆ ಭೇಟಿ ನೀಡಿದ್ದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿದರು. ಈ ವೇಳೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ, ಸಂಗೀತ ನಿರ್ದೇಶಕ ಎ ಆರ್ ರೆಹಮಾನ್ ಜತೆಗಿದ್ದರು. ನವದೆಹಲಿಯಲ್ಲಿ ನೂರಕ್ಕೂ ಹೆಚ್ಚು ಹಿರಿಯ ಐಎಎಸ್ ಅಧಿಕಾರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಿದರು. ತರಬೇತಿ ಕಾರ್ಯಕ್ರಮವೊಂದರಲ್ಲಿ ಮೋದಿ ದೇಶದ ಆಗು ಹೋಗುಗಳ ಬಗ್ಗೆ ಮಾತನಾಡಿದರು.
ಭಾರತೀಯ ಸೇನೆ ವಿಶ್ವದಲ್ಲೇ 5 ನೇ ಬಲಿಷ್ಠ ಸೇನೆ ಎಂಬ ಹೆಗ್ಗಳಿಕೆಯನ್ನು ಕೆಲ ದಿನಗಳ ಹಿಂದೆ ಪಡೆದುಕೊಂಡಿದೆ. ಭಾರತೀಯ ವಾಯು ಸೇನೆಯ ಹಿರಿಯ ಅಧಿಕಾರಿಗಳೊಂದಿಗೆ ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಸಭೆ ನಡೆಸಿದರು ದೇಶದ ರಕ್ಷಣಾ ಇಲಾಖೆಯ ಬೆಳವಣಿಗೆ ಸಂಬಂಧ ಮಾಹಿತಿ ಪಡೆದುಕೊಂಡರು.[ವಿಶ್ವದ ಬಲಿಷ್ಠ ಮಿಲಿಟರಿ ಶಕ್ತಿ ಹೊಂದಿರುವ ದೇಶಗಳು : ಇಲ್ಲಿದೆ ಪಟ್ಟಿ]
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಎರಡನೇ ಏಕದಿನ ಪಂದ್ಯ ಇಂದೋರ್ ನಲ್ಲಿ ಅಕ್ಟೋಬರ್ 14 ರಂದು ನಡೆಯಲಿದ್ದು ಎರಡು ತಂಡದ ಆಟಗಾರರು ತಾಲೀಮು ನಡೆಸಿದರು. ಇನ್ನಷ್ಟು ಪ್ರಮುಖ ಸುದ್ದಿಗಳನ್ನು ಚಿತ್ರಗಳಲ್ಲಿ ನೋಡಿ..(ಪಿಟಿಐ ಚಿತ್ರಗಳು)

ಪುಟ್ಬಾಲ್ ದಂತಕತೆ ಭಾರತದಲ್ಲಿ
ಪುಟ್ಬಾಲ್ ದಂತಕತೆ ಭಾರತದಲ್ಲಿ ಪುಟ್ಬಾಲ್ ದಂತಕತೆ ಪಿಲೇ ಭಾರತಕ್ಕೆ ಭೇಟಿ ನೀಡಿದ್ದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಎದುರುಗೊಂಡಿದ್ದು ಹೀಗೆ. ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ, ಸಂಗೀತ ನಿರ್ದೇಶಕ ಎ ಆರ್ ರೆಹಮಾನ್ ಜತೆಗಿದ್ದರು.

ಎರಡೆರಡು ಪೀಲೆ
ತಮ್ಮದೇ ವಿಶೇಷ ಭಂಗಿಯ ಗೋಲು ಹೊಡೆಯುವ ಪುತ್ಥಳಿಯನ್ನು ಕೋಲ್ಕತ್ತಾದಲ್ಲಿ ಅನಾವರಣ ಮಾಡಿದ ವಿಶ್ವ ಪುಟ್ಬಾಲ್ ಸಾಮ್ರಾಟ ಪೀಲೆ.

ಮಮತಾ ಅವರೊಂದಿಗೆ ಮಾತು
ಕೋಲ್ಕತ್ತಾದಲ್ಲಿ ಹಮ್ಮಿಕೊಂಡಿದ್ದ ಸಂವಾದದ ವೇಳೆ ವಿದ್ಯಾರ್ಥಿಗಳೊಂದಿಗೆ ಪೀಲೆ ಮಾತನಾಡಿದರು. ಪಶ್ಚಿಮ ಬಂಗಾಳ ಮುಖ್ಯಮಂತ್ರಿಯವರೊಂದಿಗೆ ಚರ್ಚೆಯಲ್ಲಿ ತೊಡಗಿದ್ದು ಕಂಡುಬಂತು.

ಭರ್ಜರಿ ತಾಲೀಮು
ನಿರಂತರ ಸೋಲಿನಿಂದ ಕಂಗೆಟ್ಟಿರುವ ಭಾರತೀಯ ಕ್ರಿಕೆಟ್ ತಂಡದ ಆಟಗಾರರು ಇಂದೋರ್ ನಲ್ಲಿ ದಕ್ಷಿಣ ಆಫ್ರಿಕಾವನ್ನು ಬುಧವಾರ ಎದುರಿಸಲಿದ್ದಾರೆ. ಪಂದ್ಯಕ್ಕೂ ಮುನ್ನ ಅಭ್ಯಾಸ ನಿರತರಾಗಿದ್ದ ಭಾರತದ ಆಟಗಾರರು.

ನರೇಂದ್ರ ಮೋದಿ ಸಭೆ
ನವದೆಹಲಿಯಲ್ಲಿ ನೂರಕ್ಕೂ ಹೆಚ್ಚು ಹಿರಿಯ ಐಎಎಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ. ತರಬೇತಿ ಕಾರ್ಯಕ್ರಮವೊಂದರಲ್ಲಿ ಮೋದಿ ದೇಶದ ಆಗು ಹೋಗುಗಳ ಬಗ್ಗೆ ಮಾತನಾಡಿದರು.

ಬಲಿಷ್ಠ ಸೇನೆಯಾಗಲಿ
ಭಾರತೀಯ ವಾಯು ಸೇನೆಯ ಹಿರಿಯ ಅಧಿಕಾರಿಗಳೊಂದಿಗೆ ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಸಭೆ ನಡೆಸಿದರು. ಭಾರತೀಯ ಸೇನೆ ವಿಶ್ವದಲ್ಲೇ 5 ನೇ ಬಲಿಷ್ಠ ಸೇನೆ ಎಂಬ ಹೆಗ್ಗಳಿಕೆಯನ್ನು ಕೆಲ ದಿನಗಳ ಹಿಂದೆ ಪಡೆದುಕೊಂಡಿತ್ತು.

ಆಳೆತ್ತರಕ್ಕೆ ಬೆಂಕಿ
ಅಮೆರಿಕದ ಕಾನ್ಸಾಸ್ ನಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿ ಆಸ್ತಿ -ಪಾಸ್ತಿಗಳನ್ನು ಭಸ್ಮ ಮಾಡಿತು. ಕೆಲ ದಿನಗಳ ಹಿಂದೆ ಕ್ಯಾಪಿಫೋರ್ನಿಯಾದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡು ಸಾವಿರಾರು ಎಕರೆ ಅರಣ್ಯವನ್ನು ಬಲಿ ಪಡೆದುಕೊಂಡಿತ್ತು.

ಸುಂದರಿ ನಾನೇ!
ಮಿಸ್ ಲೆಬೆನಾನ್ ಆಗಿ ಹೊರಹೊಮ್ಮಿದ 23 ವರ್ಷದ ವಾಲೆರಿಯೆ ಅಬು ಶಕ್ರಾ ಸಂಭ್ರಮ.

ಶಾಂದಾರ್ ಪ್ರಚಾರ
ಮುಂಬೈನಲ್ಲಿ ಬಹುನಿರೀಕ್ಷಿತ ಚಿತ್ರ ಶಾಂದಾರ್ ದ ಪ್ರಚಾರದಲ್ಲಿ ವಿಭಿನ್ನವಾಗಿ ಕಾಣಿಸಿಕೊಂಡ ಬಾಲಿವುಡ್ ನಟ ಶಾಹೀದ್ ಕಪೂರ್ ಮತ್ತು ನಟಿ ಆಲಿಯಾ ಭಟ್.
-
ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ: ಜಾಗತಿಕ ಪೂರೈಕೆ ವ್ಯತ್ಯಯದ ಬಗ್ಗೆ ಆತಂಕ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ












Click it and Unblock the Notifications