ಚಿತ್ರಗಳಲ್ಲಿ: ದೇಶಾದ್ಯಂತ ಸಂವಿಧಾನ ಶಿಲ್ಪಿಗೆ ನಮನ
ನವದೆಹಲಿ, ಏ. 14: ದೇಶಾದ್ಯಂತ ಮಂಗಳವಾರ ಡಾ. ಬಿಆರ್ ಅಂಬೇಡ್ಕರ್ ಅವರ ಜನ್ಮದಿನವನ್ನು ಆಚರಿಸಲಾಯಿತು. ಕೇಂದ್ರ ಸಚಿವರಾದ ರಾಜ್ ನಾಥ್ ಸಿಂಗ್, ವೆಂಕಯ್ಯ ನಾಯ್ಡು ಮತ್ತು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ನವದೆಹಲಿಯಲ್ಲಿ ಸಂವಿಧಾನ ಶಿಲ್ಪಿಗೆ ನಮನ ಸಲ್ಲಿಸಿದರು. ನಾಗರೀಕರು ಭಾರತದ ಸಂವಿಧಾನ ನಿರ್ಮಾತೃವಿಗೆ ಗೌರವ ಸೂಚಿಸಿದರು.[ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಗೆ ಗೂಗಲ್ ನಮನ]
ಡಾ. ಬಿಆರ್ ಅಂಬೇಡ್ಕರ್ ಅವರ ಜನಮದಿನದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಜೈ ಭೀಮ್ ಎಂದು ಪ್ರಧಾನಿ ಮೋದಿ ಸಮಾಜ ಸುಧಾರಕನಿಗೆ ಗೌರವ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರು. ಸಂಸದ ಕೆ.ಎಚ್. ಮುನಿಯಪ್ಪ ಹಾಜರಿದ್ದರು. ಕಂಚಿನ ಪದಕ ಗಳಿಸಿ ತವರಿಗೆ ಮರಳಿದ ಭಾರತದ ಹಾಕಿ ತಂಡ ಇನ್ನು ಮುಂತಾದ ಸುದ್ದಿಗಳು ಚಿತ್ರಗಳಲ್ಲಿ...(ಪಿಟಿಐ ಚಿತ್ರಗಳು)

ಸಂವಿಧಾನ ಶಿಲ್ಪಿಗೆ ನಮನ
ಅವರ ಜನ್ಮದಿನವನ್ನು ಆಚರಿಸಲಾಯಿತು. ಕೇಂದ್ರ ಸಚಿವರಾದ ರಾಜ್ ನಾಥ್ ಸಿಂಗ್, ವೆಂಕಯ್ಯ ನಾಯ್ಡು ಮತ್ತು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ನವದೆಹಲಿಯಲ್ಲಿ ಸಂವಿಧಾನ ಶಿಲ್ಪಿಗೆ ನಮನ ಸಲ್ಲಿಸಿದರು.

ಡಾ. ಭೀಮರಾವ್ ಅಂಬೇಡ್ಕರ್ ಸ್ಮರಣೆ
ನವದೆಹಲಿಯ ಸಂಸತ್ ಭವನದ ಆವರಣದಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ನಾಗರೀಕರು ನಮನ ಸಲ್ಲಿಸಿದರು. ಡಾ,. ಬಿ.ಆರ್ . ಅಂಬೇಡ್ಕರ್ ಅವರ 125 ನೇ ಜಯಂತಿ ಪ್ರಯುಕ್ತ ಇಡೀ ದೇಶಾದ್ಯಂತ ಸ್ಮರಣೆ ಮಾಡಕಲಾಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ ನಮನ
ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ವಿಧಾನ ಸೌಧದ ಎದುರಿನ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರು. ಸಂಸದ ಕೆ.ಎಚ್. ಮುನಿಯಪ್ಪ ಹಾಜರಿದ್ದರು.

ಕಂಚು ಗೆದ್ದು ಬಂದರು
ಅಜ್ಲಾನ್ ಶಾ ಹಾಕಿ ಕಪ್ ನಲ್ಲಿ ಕಂಚಿನ ಸಾಧನೆ ಮಾಡಿ ಭಾರತಕ್ಕೆ ಆಗಮಿಸಿದ ಹಾಕಿ ತಂಡದ ಆಟಗಾರರು ದೆಹಲಿ ವಿಮಾನ ನಿಲ್ದಾಣದಲ್ಲಿ ಪದಕ ಪ್ರದರ್ಶನ ಮಾಡಿದರು.

ಕಡತ ಬಹಿರಂಗ ಮಾಡಿ
ಜರ್ಮನಿಯ ಬರ್ಲಿನ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ನೇತಾಜಿ ಸುಭಾಷ್ ಚಂದ್ರ ಬೋಸ್ ಮೊಮ್ಮಗ ಸುರ್ಯಕುಮಾರ್ ಬೋಸ್ ನೇತಾಜಿ ಕಣ್ಮರೆ ಕಡತವನ್ನು ಬಹಿರಂಗ ಮಾಡುವಂತೆ ಪ್ರಧಾನಿಗೆ ಮನವಿ ಮಾಡಿದರು.

ವಿವಿಧ ಭಾರತಿದೂ ಎಫ್.ಎಂ ಬಂತು
ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ವಿವಿಧ ಭಾರತಿ(100.1) ಎಫ್.ಎಂ ಗೆ ನವದೆಹಲಿಯಲ್ಲಿ ಚಾಲನೆ ನೀಡಿದರು. ನಿಮಗಿಷ್ಟವಾಗುವ ಗೀತೆಗಳ ಗುಚ್ಛವನ್ನು ವಿವಿಧ ಭಾರತಿಯಲ್ಲಿ ಕೇಳಿ ಆನಂದಿಸಲು ಸಾಧ್ಯವಿದೆ.

ಹೇಗಿದ್ದೀರಿ ಬಂಧುಗಳೇ?
ವಿದೇಶಿ ಸಂಬಂಧಗಳ ಅಭಿವೃದ್ಧಿಗೆ ಪಣ ತೊಟ್ಟಿರುವ ನರೇಂದ್ರ ಮೋದಿ ಜರ್ಮನಿಯ ಬರ್ಲಿನ್ ನಲ್ಲಿ ಭಾರತೀಯ ಮೂಲದವರನ್ನು ಉದ್ದೇಶಿಸಿ ಮಾತನಾಡಿದರು.

ಬೋಲ್ಡ್ ಆಗದವರು ಯಾರು?
ಮುಂಬೈ ನಲ್ಲಿ ನಡೆದ ಉಡುಪು ಮಳಿಗೆ ಉದ್ಘಾಟನೆ ಸಮಾರಂಭದಲ್ಲಿ ಬಾಲಿವುಡ್ ನಟಿ ಪರಿಣಿತಿ ಛೋಪ್ರಾ ಕಾಣಿಸಿಕೊಂಡರು.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications