ಚಳಿಗಾಲದ ಸಂಸತ್ ಅಧಿವೇಶನ: ಯಾರು, ಏನು ಹೇಳಿದರು?
ನವದೆಹಲಿ, ನವೆಂಬರ್, 26: ಚಳಿಗಾಲದ ಸಂಸತ್ ಅಧಿವೇಶನ ಗುರುವಾರ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಕೇಂದ್ರ ಸಚಿವರು, ಸಂಸತ್ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕ ನಾಯಕರು ಸಂಸತ್ ಕಲಾಪದಲ್ಲಿ ಭಾಗವಹಿಸಿದ್ದರು.
ಸರಕು ಮತ್ತು ಸೇವಾ ತೆರಿಗೆ ಬಿಲ್(ಜಿಎಸ್ ಟಿ) ಮಂಡಿಸಲು ಸಿದ್ಧತೆಗಳು ನಡೆದಿವೆ. ಈ ಬಾರಿ ಬಿಲ್ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವಿನ ವಾಕ್ ಸಮರಕ್ಕೆ ಕಾರಣವಾಗುವುದು ಪಕ್ಕಾ.[ಸಂಸತ್ ನಲ್ಲಿ ಖರ್ಗೆ-ಸುಷ್ಮಾ ಜಟಾಪಟಿ]
ಉಳಿದಂತೆ ದೇಶದಲ್ಲಿ ಅಸಹಿಷ್ಣುತೆ ಗೊಂದಲ ವಿರೋಧ ಪಕ್ಷಗಳ ಬತ್ತಳಿಕೆಯಲ್ಲಿರುವ ಮತ್ತೊಂದು ಪ್ರಮುಖ ಅಸ್ತ್ರ. ದೇಶದ ಅರ್ಥವ್ಯವಸ್ಥೆಗೆ ಸಂಬಂಧಿಸಿದ ವಿಚಾರಗಳು ಮಂಡನೆಯಾಗಲಿವೆ. ಪಾರ್ಲಿಮೆಂಟ್ ಅಧಿವೇಶನದ ಮೊದಲ ದಿನ ಸಂಸತ್ ಭವನದ ಒಳಗೆ ಮತ್ತು ಹೊರಗೆ ಏನೇನಾಯಿತು ಎಂಬುದನ್ನು ನೋಡಿಕೊಂಡು ಬರೋಣ..(ಪಿಟಿಐ ಚಿತ್ರಗಳು)

ಚರ್ಚೆಯೇ ಸಂಸತ್ತಿನ ಜೀವಾಳ
ಚರ್ಚೆ, ಮಾತುಕತೆ ಮತ್ತು ವಿಚಾರ ವಿನಿಮಯವೇ ಸಂಸತ್ ನ ಜೀವಾಳ. ಇದೆಲ್ಲ ನಡೆದ ಮೇಲೆಯೇ ಸ್ಪಷ್ಟ ತೀರ್ಮಾನವೊಂದಕ್ಕೆ ಬರಲು ಸಾಧ್ಯವಿದೆ.-ನರೇಂದ್ರ ಮೋದಿ

ಸರ್ಕಾರದ ಬಳಿ ಬಹುಮತವಿದೆ
ಸರ್ಕಾರದ ಬಳಿ ಬಹುಮತವಿದೆ ಆದರೂ ಸಹ ಆಡಳಿತ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿಲ್ಲ-ಶರದ್ ಯಾದವ್

ನಮ್ಮ ಬೆಂಬಲವಿದೆ
ಸರಕು ಮತ್ತು ಸೇವಾ ತೆರಿಗೆ ಬಿಲ್(ಜಿಎಸ್ ಟಿ)ಗೆ ನಾವು ಸಂಪೂರ್ಣ ಬೆಂಬಲ ನೀಡುತ್ತಿದ್ದೇವೆ. ಇದು ದೇಶದ ಅರ್ಥ ವ್ಯವಸ್ಥೆಯನ್ನು ಸದೃಢ ಮಾಡುವುದರಲ್ಲಿ ಅನುಮಾನವಿಲ್ಲ-ಮಾಯಾವತಿ

ದೇಶ ಬಿಡುವ ಯೋಚನೆ ಮಾಡಿರಲಿಲ್ಲ
ಸಂವಿಧಾನ ಶಿಲ್ಪಿ ಡಾ ಬಿ ಆರ್ ತಮ್ಮ ಜೀವನದಲ್ಲಿ ಅನೇಕ ಸಂಕಷ್ಟಗಳನ್ನು ಎದುರಿಸಿದ್ದರು ಆದರೆ ಎಂದು ದೇಶ ಬಿಡುವ ಮಾತನಾಡಿರಲಿಲ್ಲ- ರಾಜನಾಥ್ ಸಿಂಗ್ ,

ರಾಹುಲ್ ಗಾಂಧಿ ಆಗಮನ
ಬೆಂಗಳೂರಿನ ಕಾಲೇಜೊಂದರಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮುಜುಗರಕ್ಕೆ ಗುರಿಯಾಗಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಗುರುವಾರ ಸಂಸತ್ ಕಲಾಪದಲ್ಲಿ ಭಾಗವಹಿಸಲು ಆಗಮಿಸಿದರು.

ನಮಗೆ ಸಂವಿಧಾನದ ಪಾಠ ಬೇಕಿಲ್ಲ
ಸಂವಿಧಾನದ ನಿರ್ಮಾಣದಲ್ಲಿ ಯಾವುದೇ ಶ್ರಮವಹಿಸದ ಪಕ್ಷಗಳಿಂದ, ಜನರಿಂದ ನಾವು ಸಂವಿಧಾನದ ಬಗ್ಗೆ ಪಾಠ ಕೇಳುವ ಅಗತ್ಯವಿಲ್ಲ. -ಸೋನಿಯಾ ಗಾಂಧಿ

ಸರಿಯಾದ ಚರ್ಚೆ ಮಾಡಿ
ಬೇಡದ ಸಂಗತಿಗಳಿಗೆ ಕಲಾಪದ ಸಮಯ ವ್ಯರ್ಥ ಮಾಡುವುದು ಬೇಡ. ಸರಿಯಾಧ ಸಂಗತಿಗಳನ್ನು ಚರ್ಚೆ ಮಾಡುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು. ಮಲ್ಲಿಕಾರ್ಜುನ ಖರ್ಗೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications