ಚಳಿಗಾಲದ ಅಧಿವೇಶನದಲ್ಲಿ ಬಿಸಿ ಮುಟ್ಟಿಸಿದ್ದು ಯಾರು ಯಾರಿಗೆ?
ನವದೆಹಲಿ, ನವೆಂಬರ್, 27: ಚಳಿಗಾಲದ ಅಧಿವೇಶನದ ಶುಕ್ರವಾರದ ಸಂಸತ್ ಕಲಾಪ ಪ್ರಧಾನಿ ನರೇಂದ್ರ ಮೋದಿ ಅವರ ಸಂವಿಧಾನದ ಕುರಿತಾದ ಭಾಷಣಕ್ಕೆ ಸಾಕ್ಷಿಯಾಯಿತು.
ಪ್ರಧಾನಿ ಭಾಷಣಕ್ಕೆ ಸಂಸತ್ ನ ಎಲ್ಲ ಸದಸ್ಯರು ಅಭಿನಂದನೆ ಸಲ್ಲಿಸಿದರು. ಇದಾದ ಮೇಲೆ ಕಾಂಗ್ರೆಸ್ ಪಕ್ಷದ ಸದಸ್ಯರು ಮಾತನಾಡಲು ಅವಕಾಶ ಕೇಳಿದಾಗ ಗೊಂದಲದ ವಾತಾವರಣ ಸೃಷ್ಟಿಯಾಯಿತು. ಪಕ್ಷದ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ನೀಡುವುದಾಗಿ ಸಭಾಧ್ಯಕ್ಷರು ತಿಳಿಸಿದರು.[ರೈತರು, ಬಡವರು, ಕಾರ್ಮಿಕರು ದೇಶ ಕಟ್ಟಿದ್ದಾರೆ: ಮೋದಿ]
ಈ ಬಾರಿಯ ಅಧಿವೇಶನದಲ್ಲಿ ಸರಕು ಮತ್ತು ಸೇವಾ ತೆರಿಗೆ ಮಸೂದೆ(ಜಿಎಸ್ ಟಿ) ಕುರಿತು ಚರ್ಚೆ ನಡೆಯಲಿದೆ. ಈ ಬಗ್ಗೆ ಚರ್ಚೆ ಮಾಡಲು ಪ್ರಧಾನಿ ನರೇಂದ್ರ ಮೋದಿ, ಸ್ವತಃ ಮನಮೋಹನ್ ಸಿಂಗ್ ಮತ್ತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಆಹ್ವಾನ ನೀಡಿದ್ದಾರೆ. ಶುಕ್ರವಾರದ ಸಂಸತ್ ಕಲಾಪದ ದೃಶ್ಯಗಳನ್ನು ಚಿತ್ರಗಳಲ್ಲಿ ನೋಡಿಕೊಂಡು ಬನ್ನಿ...(ಪಿಟಿಐ ಚಿತ್ರಗಳು)

ವೆಂಕಯ್ಯ ನಾಯ್ಡು ಮಾತು
ಕೇಂದ್ರ ನಗರಾಭಿವೃದ್ಧಿ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ವೆಂಕಯ್ಯ ನಾಯ್ಡು ಸಂಸತ್ ಕಲಾಪ ಉದ್ದೇಶಿಸಿ ಮಾತನಾಡಿದರು.

ಸೋನಿಯಾ ಮತ್ತು ಖರ್ಗೆ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಸಂಸತ್ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರದ ಅಧಿವೇಶನದಲ್ಲಿ ಭಾಗವಹಿಸಿದ್ದರು.

ಸಿತಾರಾಂ ಯಚೂರಿ
ಸಿಪಿಐ ಎಂ ಜನರಲ್ ಸಕ್ರೆಟರಿ ಸಿತಾರಾಂ ಯಚೂರಿ ರಾಜ್ಯಸಭೆಯಲ್ಲಿ ಶುಕ್ರವಾರ ಮಾತನಾಡಿದರು.

ಅರುಣ್ ಜೇಟ್ಲಿ
ಕೇಂದ್ರ ವಿತ್ತ ಸಚಿವ ಅರುಣ ಜೇಟ್ಲಿ ಕಲಾಪ ಉದ್ದೇಶಿಸಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಪಕ್ಕದಲ್ಲಿಯೇ ಆಸೀನರಾಗಿದ್ದರು. ಜೇಟ್ಲಿ ತುರ್ತು ಪರಿಸ್ಥಿತಿ ಮತ್ತು ಮಾಜಿ ಪ್ರಧಾನಿ ಇಂಧಿರಾ ಗಾಂಧಿ ಕುರಿತು ನೀಡಿದ ಹೇಳಿಕೆ ಸಹ ವಿವಾದದ ಕಿಡಿ ಹೊತ್ತಿಸಿತ್ತು.

ಮುಲಾಯಂ ಸಿಂಗ್ ಯಾದವ್
ಸಂಸತ್ ಕಲಾಪವನ್ನು ಉದ್ದೇಶಿಸಿ ಲೋಕಸಭೆಯಲ್ಲಿ ಮಾತನಾಡಿದ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್.

ಗುಲಾಂ ನಬಿ ಆಜಾದ್
ಸಂಸತ್ ಕಲಾಪವನ್ನು ಉದ್ದೇಶಿಸಿ ಲೋಕಸಭೆಯಲ್ಲಿ ಮಾತನಾಡಿದ ಗುಲಾಂ ನಬಿ ಆಜಾದ್












Click it and Unblock the Notifications