ಹಿಮಾಚಲದ ಸಿಎಂ ರೇಸ್: ಪ್ರೇಮ್ ಕುಮಾರ್ ಈಗಲೂ ನೆಚ್ಚಿನ ಆಯ್ಕೆ
ಶಿಮ್ಲಾ, ಡಿಸೆಂಬರ್ 21: ಹಿಮಾಚಲ ಪ್ರದೇಶಕ್ಕೆ ಹೊಸ ಸಿಎಂ ಆಯ್ಕೆಯಲ್ಲಿ ಬಿಜೆಪಿ ನಿರತವಾಗಿದೆ. ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಪ್ರೇಮ್ ಕುಮಾರ್ ಧುಮಾಲ್ ಅವರು ಸೋಲು ಕಂಡಿದ್ದು, ಬಿಜೆಪಿಗೆ ಕೊಂಚ ಹಿನ್ನಡೆಯಾಗಿದೆ. ಹೀಗಾಗಿ, ಮುಖ್ಯಮಂತ್ರಿ ಆಯ್ಕೆ ಸ್ವಲ್ಪ ವಿಳಂಬವಾಗಿದೆ. ಈಗ ಲಭ್ಯವಿರುವ ಮಾಹಿತಿಯಂತೆ ಸಿಎಂ ಕುರ್ಚಿಗಾಗಿ ರೇಸಿನಿಂದ ಪ್ರೇಮ್ ಕುಮಾರ್ ಅವರು ಹಿಂದೆ ಸರಿದಿಲ್ಲ ಎಂದು ತಿಳಿದು ಬಂದಿದೆ.
ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಪ್ರೇಮ್ ಕುಮಾರ್ ಧುಮಾಲ್ ಅವರನ್ನು ಮತದಾನಕ್ಕೂ ಸ್ವಲ್ಪ ವಾರದ ಮುನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿತ್ತು. ಧುಮಾಲ್ಗೂ ಮೊದಲು ಜೆಪಿ ನಡ್ಡಾ ಹೆಸರು ಸಿಎಂ ರೇಸ್ನಲ್ಲಿ ಕೇಳಿಬಂದಿತ್ತು. ಕೊನೆ ಕ್ಷಣದಲ್ಲಿ ಸಿಎಂ ಅಭ್ಯರ್ಥಿ ಘೋಷಣೆ ಮಾಡಲಾಯಿತು. ಸುಜಾನ್ಪುರ್ ಕ್ಷೇತ್ರದಲ್ಲಿ ಕಾಂಗ್ರೆಸ್ಸಿನ ರಾಜೇಂದ್ರ ಸಿಂಗ್ ರಾಣಾ ಗೆಲುವು ಸಾಧಿಸಿದ್ದು ಈಗ ಇತಿಹಾಸ.

ಈಗ ಹೊಸ ಸಿಎಂ ಆಯ್ಕೆಯಲ್ಲಿ ತೊಡಗಿರುವ ಬಿಜೆಪಿಗೆ ಆಯ್ಕೆ ಕಗ್ಗಂಟಾಗಲು ಮುಖ್ಯ ಕಾರಣ ಪ್ರೇಮ್ ಕುಮಾರ್ ಅವರ ವಯಸ್ಸು. 73 ವರ್ಷ ವಯಸ್ಸಿನ ಪ್ರೇಮ್ ಕುಮಾರ್ ಅವರಿಗೆ ಸಿಎಂ ಕುರ್ಚಿ ಕೊಟ್ಟರೂ ಇನ್ನೆರಡು ವರ್ಷಗಳಿಗೆ ಕುರ್ಚಿಯನ್ನು ಹಿಂಪಡೆಯಬೇಕಾಗುತ್ತದೆ.
2019ರ ಚುನಾವಣೆ ದೃಷ್ಟಿಯಿಂದ ಎಲ್ಲಾ ರಾಜಕೀಯ ನಡೆ ಇಡುತ್ತಿರುವ ಅಮಿತ್ ಶಾ ಅವರು ಪ್ರೇಮ್ ಅವರನ್ನು ಮುಖ್ಯಮಂತ್ರಿಯಾಗಿ ತಾತ್ಕಾಲಿಕವಾಗಿ ನೇಮಿಸುವುದರ ಬಗ್ಗೆ ಅಷ್ಟು ಆಸಕ್ತಿ ವಹಿಸಿಲ್ಲ.
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ನರೇಂದ್ರ ತೋಮಾರ್ ಅವರು ಮುಂದಿನ ಮಂಗಳವಾರದ ವೇಳೆಗೆ ಹಿಮಾಚಲಕ್ಕೆ ಬರಲಿದ್ದು, ಸಿಎಂ ಆಯ್ಕೆಯ ಬಗ್ಗೆ ಅಂತಿಮ ನಿರ್ಧಾರ ಪ್ರಕಟಿಸುವ ನಿರೀಕ್ಷೆಯಿದೆ.
-
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್












Click it and Unblock the Notifications