ರಾಷ್ಟ್ರಪತಿ ಚುನಾವಣೆ ಮತ ಲೆಕ್ಕಾಚಾರ, ಕೋವಿಂದ್ ರಿಗೆ ಸುಲಭ ಗೆಲುವು
ನವದೆಹಲಿ, ಜೂನ್ 26: ಮುಂದಿನ ರಾಷ್ಟ್ರಪತಿ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ರಾಮ್ ನಾಥ್ ಕೋವಿಂದ್ ಸುಲಭ ಗೆಲುವು ಸಾಧಿಸಲಿದ್ದಾರೆ. ವಿಪಕ್ಷಗಳ ಜಂಟಿ ಅಭ್ಯರ್ಥಿ ಮೀರಾ ಕುಮಾರ್ ವಿರುದ್ಧ ಸ್ಪರ್ಧಿಸಲಿರುವ ಬಿಹಾರದ ಮಾಜಿ ರಾಜ್ಯಪಾಲರ ಗೆಲುವು ನಿಚ್ಚಳವಾಗಿದೆ.
ಕೋವಿಂದ್ ಶೇಕಡಾ 62 ಮತಗಳನ್ನು ಪಡೆಯಲಿದ್ದಾರೆ. 2012ರಲ್ಲಿ ಪ್ರಣಬ್ ಮುಖರ್ಜಿ ಶೇಕಡಾ 69 ಮತಗಳನ್ನು ಪಡೆದಿದ್ದರು. ಇಷ್ಟು ಮತಗಳನ್ನು ಪಡೆಯಲು ಕೋವಿಂದ್ ರಿಗೆ ಸಾಧ್ಯವಿಲ್ಲವಾದರೂ ಗೆಲುವಿಗೇನೂ ಅಡ್ಡಿಯಿಲ್ಲ.

ಕೋವಿಂದ್ ಅವರು 10,98,903 ಎಲೆಕ್ಟೋರಲ್ ಕಾಲೇಜು ಮತಗಳಲ್ಲಿ ಸುಮಾರು 7 ಲಕ್ಷ ಮತಗಳನ್ನು ಪಡೆಯುವ ಸಾಧ್ಯತೆ ಇದೆ. ವಿಪಕ್ಷಗಳ ಅಭ್ಯರ್ಥಿ ಮೀರಾ ಕುಮಾರ್ ಸುಮಾರು 4 ಲಕ್ಷ ಮತಗಳನ್ನು ಪಡೆಯಲಿದ್ದಾರೆ. ಎಸ್ಪಿ, ಬಿಎಸ್ಪಿ, ಆರ್.ಜೆಡಿ, ಟಿಎಂಸಿ ಮತ್ತು ಸಿಪಿಎಂ ನಂಥ ಪ್ರಾದೇಶಿಕ ಪಕ್ಷಗಳ ಬೆಂಬಲ ಅವರಿಗಿದೆ.
ಇನ್ನು ಕೋವಿಂದ್ ವಿಚಾರಕ್ಕೆ ಬಂದರೆ ಜೆಡಿಯು, ಬಿಜೆಡಿ, ಎಐಎಡಿಎಂಕೆ, ಟಿಆರ್.ಎಸ್, ಮತ್ತು ವೈಎಸ್ಆರ್ ಕಾಂಗ್ರೆಸ್ ಬೆಂಬಲ ಅವರಿಗಿದೆ.
ಮತಗಳ ಲೆಕ್ಕಾಚಾರದ ಪ್ರಕಾರ ಕೋವಿಂದ್ ಬುಟ್ಟಿಯಲ್ಲಿ 6,82,677 ಮತಗಳಿದ್ದರೆ, ಮೀರಾ ಕುಮಾರ್ ಬಳಿಯಲ್ಲಿ 3,76,261 ಮತಗಳಿವೆ.
ಇನ್ನು ಅಂದಾಜು 39,965 ಮತಗಳು ಇತರ ಪಕ್ಷಗಳಿಗೆ ಸೇರಿದ್ದು ಇವರು ಯಾರಿಗೆ ಮತದಾನ ಮಾಡುತ್ತಾರೆ ಕಾದು ನೋಡಬೇಕಾಗಿದೆ. ಆದರೆ ಇವರು ಯಾರಿಗೇ ಮತದಾನ ಮಾಡಿದರೂ ಸೋಲು ಗೆಲುವಿನಲ್ಲೇನೂ ಬದಲಾವಣೆಯಾಗುವುದಿಲ್ಲ.
ಇನ್ನು ಒಟ್ಟು 776 ಸಂಸತ್ ಸದಸ್ಯರಲ್ಲಿ ಕೋವಿಂದ್ ಗೆ 524 ಜನರ ಬೆಂಬಲವಿದ್ದರೆ, ಮೀರಾ ಕುಮಾರ್ ಗೆ 235 ಸದಸ್ಯರ ಬೆಂಬಲವಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications