ರಾಷ್ಟ್ರಪತಿ ಚುನಾವಣೆ, ಸೋನಿಯಾ ಗಾಂಧಿ ಜತೆ ಬಿಜೆಪಿ ನಾಯಕರ ಚರ್ಚೆ
ನವದೆಹಲಿ, ಜೂನ್ 14: ಮುಂದಿನ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಇಂದು ಸಂಜೆ ಸೋನಿಯಾ ಗಾಂಧಿಯವರನ್ನು ಬಿಜೆಪಿ ನಾಯಕರಾದ ರಾಜನಾಥ್ ಸಿಂಗ್ ಮತ್ತು ವೆಂಕಯ್ಯ ನಾಯ್ಡು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ.
ಇಂದು ಸಂಜೆ ವಿಪಕ್ಷಗಳ ಸಭೆ ನಡೆಯಲಿದ್ದು ಈ ಸಭೆಯ ನಂತರ ಭೇಟಿಯಾಗಲಿದ್ದಾರೆ ಎನ್ನಲಾಗಿದೆ.

ಈಗಾಗಲೆ ಎನ್ಡಿಎ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಚುನಾವಣಾ ಸಮಿತಿಯೊಂದನ್ನು ರಚನೆ ಮಾಡಿದೆ. ಈಗಾಗಲೇ ವಿಪಕ್ಷಗಳು ಸರ್ವಸಮ್ಮತ ಅಭ್ಯರ್ಥಿಯನ್ನು ಕಣಕ್ಕಿಳಿಸುವಂತೆ ಬೇಡಿಕೆ ಮುಂದಿಟ್ಟಿವೆ.
ಇಲ್ಲಿಯವರೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ. ಜೂನ್ 23ರಂದು ಬಿಜೆಪಿ ಕಡೆಯಿಂದ ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಕೆಯಾಗುವ ಸಾಧ್ಯತೆ ಇದೆ.
ಜುಲೈ 17ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು ಜುಲೈ 20ರಂದು ಮತ ಎಣಿಕೆ ನಡೆಯಲಿದೆ.












Click it and Unblock the Notifications