ಇವರನ್ನು ರಾಷ್ಟ್ರಪತಿ ಹುದ್ದೆಗೆ ಮೋದಿ ಏಕೆ ಆರಿಸಲಿಕ್ಕಿಲ್ಲ?
ಬೆಂಗಳೂರು, ಮೇ 16 : ಭಾರತದ ಮುಂದಿನ ರಾಷ್ಟ್ರಪತಿ ಯಾರಾಗಲಿದ್ದಾರೆ ಎಂಬ ಬಗ್ಗೆ ಎಲ್ಲೆಡೆ ಬಿಸಿಬಿಸಿ ಚರ್ಚೆ ನಡೆಯುತ್ತಿದೆ. ಇಂಥವರು ರಾಷ್ಟ್ರಪತಿಯಾದ್ರೆ ನಮ್ಮ ಕೈ ಮೇಲಾಗುತ್ತದೆ ಎಂದು ರಾಜಕೀಯ ಪಕ್ಷಗಳು ಲೆಕ್ಕಾಚಾರದಲ್ಲಿ ತೊಡಗಿದ್ದರೆ, ಶ್ರೀಸಾಮಾನ್ಯರು ಇಂಥವರು ದೇಶದ ಅತ್ಯುನ್ನತ ಅಧಿಕಾರ ಗ್ರಹಣ ಮಾಡಿದರೆ ದೇಶಕ್ಕೆ ಒಳ್ಳೆಯದಾಗಬಹುದು ಎಂದು ವಿಚಾರ ವಿನಿಮಯ ನಡೆಸಿದ್ದಾರೆ.
ಸದ್ಯದ ಚಿತ್ರಣ ನೋಡಿದರೆ, ಉತ್ತರಪ್ರದೇಶ ಮತ್ತು ಉತ್ತರಾಖಂಡದಲ್ಲಿ ಭರ್ಜರಿ ಜಯಗಳಿಸಿರುವ ನರೇಂದ್ರ ಮೋದಿ ನೇತೃತ್ವದ ಎನ್ಡಿಎಗೆ ತಮಗಿಷ್ಟಬಂದ ರಾಷ್ಟ್ರಪತಿಯನ್ನು ಆರಿಸಲು ಅಡೆತಡೆಗಳು ಅಷ್ಟೊಂದು ಗೋಚರಿಸುತ್ತಿಲ್ಲ. ರಾಷ್ಟ್ರಪತಿಯನ್ನು ಆಯ್ಕೆಮಾಡಲು ಅವರಿಗೆ ಸಂಖ್ಯೆಗಳನ್ನು ಕ್ರೋಢೀಕರಿಸುವುದೂ ಅಷ್ಟು ಕಷ್ಟವಲ್ಲ.[ನಂದನ್ ನಿಲೇಕಣಿ ಭಾರತದ ರಾಷ್ಟ್ರಪತಿ ಏಕಾಗಬಾರದು?]
ಆದರೆ, ಅವರಿಗೆ ಈಗಿರುವ ಸವಾಲು, ಯಾರನ್ನು ರಾಷ್ಟ್ರಪತಿಯನ್ನಾಗಿ ಆರಿಸುವುದು? ಇದು ಸವಾಲಿನದು ಏಕೆಂದರೆ, ಈಗಾಗಲೆ ಹಲವಾರು ಪ್ರಭಾವಿ ವ್ಯಕ್ತಿಗಳ ಹೆಸರುಗಳು ಚಲಾವಣೆಯಲ್ಲಿ ಬರಲು ಆರಂಭಿಸಿವೆ. ಇವರಲ್ಲಿ ಜಾರ್ಖಂಡ್ ರಾಜ್ಯಪಾಲೆ ದ್ರೌಪದಿ ಮುರ್ಮು ಅವರ ಹೆಸರು ಎಲ್ಲರಿಗಿಂತ ಮುಂದಿದೆ. ಅವರು ಆಯ್ಕೆಯಾದರೆ ದೇಶದ ಗುಡ್ಡಗಾಡು ಜನಾಂಗಕ್ಕೆ ಸೇರಿದ ಮೊಟ್ಟಮೊದಲ ರಾಷ್ಟ್ರಪತಿಯಾಗಲಿದ್ದಾರೆ.
ಇವರ ಜೊತೆಗೆ ಎಲ್ಕೆ ಅಡ್ವಾಣಿ, ಮುರಳಿ ಮನೋಹರ ಜೋಶಿ, ಅಮಿತಾಬ್ ಬಚ್ಚನ್, ನಜ್ಮಾ ಹೆಫ್ತುಲ್ಲಾ, ಸುಷ್ಮಾ ಸ್ವರಾಜ್, ಮೋಹನ್ ಭಾಗವತ್ ಅವರ ಹೆಸರುಗಳು ಕೂಡ ರೌಂಡ್ ಹೊಡೆಯುತ್ತಿವೆ. ಆದರೆ, ಇವರನ್ನು ನರೇಂದ್ರ ಮೋದಿಯವರು ಯಾಕೆ ಪರಿಗಣಿಸಲಾರರು ಎಂಬುದಕ್ಕೆ ಇಲ್ಲಿ ವಿವರಣೆಗಳಿವೆ, ಓದಿರಿ.

ಮೋಹನ್ ಭಾಗವತ್

ನಜ್ಮಾ ಹೆಫ್ತುಲ್ಲಾ

ಅಮಿತಾಬ್ ಬಚ್ಚನ್
ಹಿಂದಿ ಚಿತ್ರರಂಗದ ಜನಪ್ರಿಯ ನಟ ಅಮಿತಾಬ್ ಬಚ್ಚನ್ ಅವರು ಸ್ಪರ್ಧೆಗಿಳಿದರೆ ಅವರ ವಿರುದ್ಧ ನಿಲ್ಲುವವರು ಕಡಿಮೆ. ಜುಲೈನಲ್ಲಿ ಪ್ರಣಬ್ ಅವರು ನಿವೃತ್ತರಾದನಂತರ ಅಮಿತಾಬ್ ಅವರೇ ರಾಷ್ಟ್ರಪತಿಯಾಗಲಿದ್ದಾರೆ ಎಂಬ ದಟ್ಟ ಗಾಳಿಸುದ್ದಿ ಕೂಡ ಹಬ್ಬಿತ್ತು. ಮೋದಿಯ ಖಡಕ್ ಬೆಂಬಲಿಗರಾಗಿರುವ ಅವರು ಸ್ವಚ್ಛ ಭಾರತ ಅಭಿಯಾನದ ರಾಯಭಾರಿ ಕೂಡ. ಆದರೆ, ಅವರ ಹೆಸರು ಪನಾಮಾ ಪೇಪರ್ಸ್ ಹಗರಣದಲ್ಲಿ ಕೇಳಿಬಂದಿರುವುದರಿಂದ ಅವರು ಹೆಚ್ಚೂಕಡಿಮೆ ಸ್ಪರ್ಧೆಯಿಂದ ಹಿಂದುಳಿದಂತಾಗಿದೆ.

ಪ್ರಣಬ್ ಮುಖರ್ಜಿ
ಪ್ರಣಬ್ ಮುಖರ್ಜಿಯವರು ಕಾಂಗ್ರೆಸ್ಸಿನವರಾದರೂ ಅವರೊಂದಿಗೆ ಮೋದಿಯವರಿಗೆ ಯಾವುದೇ ವೈಷಮ್ಯವೂ ಅಲ್ಲ, ತಕರಾರೂ ಇಲ್ಲ. ಅಚ್ಚರಿಯ ಸಂಗತಿಯೆಂದರೆ, ಮೋದಿ ಪ್ರಧಾನಿಯಾದ ನಂತರ ಅವರಿಬ್ಬರ ಬಾಂಧವ್ಯ ಇನ್ನಷ್ಟು ಗಟ್ಟಿಯಾಗಿದೆ. ಅವರನ್ನೇನಾದರೂ ರಾಷ್ಟ್ರಪತಿಯನ್ನಾಗಿ ಮೋದಿ ಆಯ್ಕೆ ಮಾಡಿದರೆ, ಇದು ತಮಗೇ ಸಿಕ್ಕ ಜಯ ಎಂದು ಕಾಂಗ್ರೆಸ್ಸಿಗರು ಸಂಭ್ರಮಿಸಿದರೂ ಅಚ್ಚರಿಯಿಲ್ಲ. ಬಿಜೆಪಿ ಹುರಿಯಾಳುಗಳೇ ಸಾಕಷ್ಟಿರುವಾಗ ಮೋದಿ ಕಾಂಗ್ರೆಸ್ಸಿನವರನ್ನೇಕೆ ಆಯ್ಕೆ ಮಾಡುತ್ತಾರೆ?

ಎಲ್ಕೆ ಅಡ್ವಾಣಿ
ಲಾಲ್ ಕೃಷ್ಣ ಅಡ್ವಾಣಿಯವರನ್ನು ರಾಷ್ಟ್ರಪತಿಯನ್ನಾಗಿ ಮಾಡಿ ಗುರುದಕ್ಷಿಣೆ ಸಲ್ಲಿಸಲಿದ್ದಾರೆ ಎಂದು ಗಾಳಿಸುದ್ದಿ ಹಬ್ಬಿತ್ತು. ಆದರೆ, ಅವರಿಬ್ಬರ ನಡುವಣ ನಡವಳಿಕೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಇಬ್ಬರ ನಡುವಿನ ಬಾಂಧವ್ಯ ಅಷ್ಟು ಗಟ್ಟಿಯಾಗಿಲ್ಲದಿರುವುದು ಕಂಡುಬರುತ್ತದೆ. ಅಲ್ಲದೆ, ಬಾಬ್ರಿ ಧ್ವಂಸ ಪ್ರಕರಣದಲ್ಲಿ ಅಡ್ವಾಣಿಯವರು ವಿಚಾರಣೆ ಎದುರಿಸಬೇಕು ಎಂದು ಸುಪ್ರೀಂ ಕೋರ್ಟ್ ಆಜ್ಞೆ ಮಾಡಿದ್ದರಿಂದ ಅವರನ್ನು ರಾಷ್ಟ್ರಪತಿ ಸ್ಪರ್ಧೆಗಿಳಿಸುವುದು ಸರಿಯೆ ಎಂಬ ಪ್ರಶ್ನೆ ಎದುರಾಗಿದೆ.

ಮುರಳಿ ಮನೋಹರ ಜೋಶಿ
ಹಿರಿಯ ನಾಯಕರಾಗಿರುವ ಮುರಳಿ ಮನೋಹರ ಜೋಶಿಯವರು ಕೂಡ ಪ್ರಬಲ ಸ್ಪರ್ಧೆ. ಆದರೆ, 2014ಕ್ಕೂ ಮೊದಲು ಮೋದಿಯವರು ಬಿಜೆಪಿ ಪ್ರಧಾನಿ ಅಭ್ಯರ್ಥಿಯಾಗುವುದನ್ನು ಅವರು ಖಡಾಖಂಡಿತವಾಗಿ ವಿರೋಧಿಸಿದ್ದರು. ಜೋಶಿಗೆ ಆರೆಸ್ಸೆಸ್ ಬೆಂಬಲ ಇದೆಯಾದರೂ ಗೋವಾದಲ್ಲಿ ಜೋಶಿ ಅಂದು ಹೇಳಿದ್ದನ್ನು ಮೋದಿ ಅಷ್ಟು ಬೇಗನೆ ಮರೆಯುವರೆ? ಇದಕ್ಕಿಂತ ಹೆಚ್ಚಾಗಿ, ಬಾಬ್ರಿ ಹಗರಣ ಕೂಡ ಜೋಶಿ ಕುತ್ತಿಗೆಗೆ ಸುತ್ತಿಕೊಂಡಿದೆ. ಹೀಗಾಗಿ ಮೋದಿ ಕೆಲಸ ಸುಲಭವಾಗಿದೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications