ಉಪ್ರ ಮುಖ್ಯಮಂತ್ರಿ ಯಾರೆಂದು ತಿಳಿಯಲು ಸಂಜೆವರೆಗೆ ತಡೀರಿ: ನಾಯ್ಡು
ಮಾಧ್ಯಮಗಳಲ್ಲಿ ಕೇಳಿಬರುತ್ತಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಹೆಸರು ಕೇವಲ ಊಹೆಯಷ್ಟೇ. ಸಂಜೆ 4ರ ನಂತರ ಬಿಜೆಪಿಯಿಂದ ಮುಖ್ಯಮಂತ್ರಿ ಹೆಸರು ಘೋಷಣೆ ಮಾಡಲಾಗುತ್ತದೆ. ಅಲ್ಲಿಯವರೆಗೆ ಕಾಯಿರಿ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಹೇಳಿದ್ದಾರೆ
ನವದೆಹಲಿ, ಮಾರ್ಚ್ 18: ಮಾಧ್ಯಮಗಳಲ್ಲಿ ಬರುತ್ತಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಆಯ್ಕೆ ಹೆಸರು ಮಾಧ್ಯಮಗಳ ಊಹೆ ಅಷ್ಟೇ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಹೇಳಿದ್ದಾರೆ. ಶನಿವಾರ ಸಂಜೆ 4ರವರೆಗೆ ಕಾಯಿರಿ, ಆ ನಂತರ ಉತ್ತರಪ್ರದೇಶದ ಮುಖ್ಯಮಂತ್ರಿ ಯಾರು ಎಂಬುದು ಗೊತ್ತಾಗುತ್ತದೆ ಎಂದು ನಾಯ್ಡು ಮಾಧ್ಯಮದವರಿಗೆ ಶನಿವಾರ ಹೇಳಿದ್ದಾರೆ.
ಮಾಧ್ಯಮಗಳಲ್ಲಿ ಬಹಳ ಹೆಸರುಗಳು ಕೇಳಿಬರುತ್ತಿವೆ. ಇವೆಲ್ಲ ತಪ್ಪು. ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಹೆಸರು ಘೋಷಣೆ ಮಾಡುತ್ತೀವಿ ಎಂದು ಅವರು ಹೇಳಿದ್ದಾರೆ. ಬಿಜೆಪಿಯ ಶಾಸಕಾಂಗ ಪಕ್ಷದ ಸಭೆ ಲಖನೌದಲ್ಲಿ ಸಂಜೆ 4ಕ್ಕೆ ನಡೆಯಲಿದೆ. ಆ ಸಭೆಯ ಬಳಿಕ ಪಕ್ಷದ ನಾಯಕನ ಹೆಸರನ್ನು ಘೋಷಣೆ ಮಾಡಲಾಗುತ್ತದೆ.[ಉತ್ತರಪ್ರದೇಶ ಮುಖ್ಯಮಂತ್ರಿಯಾಗಿ ಮನೋಜ್ ಸಿನ್ಹಾ!]
ಉತ್ತರಪ್ರದೇಶದ ಮುಖ್ಯಮಂತ್ರಿ ಸ್ಥಾನಕ್ಕೆ ಹಲವರ ಹೆಸರು ಕೇಳಿಬರುತ್ತಿದೆ. ಆದರೆ ಮನೋಜ್ ಸಿನ್ಹಾ ಹೆಸರು ಬಹುತೇಕ ಅಂತಿಮವಾಗಿದೆ. ಅವರೇ ಮುಖ್ಯಮಂತ್ರಿ ಎಂದು ಹಲವು ಮೂಲಗಳಿಂದ ತಿಳಿದುಬಂದಿದೆ. ಶನಿವಾರ ಬೆಳಗ್ಗೆಯಿಂದ ಈ ಬಗ್ಗೆ ಹಲವು ಸೂಚನೆಗಳನ್ನು ಸಿನ್ಹಾ ಅವರು ಕೊಟ್ಟಿದ್ದಾರೆ.[ಯುಪಿಯಲ್ಲಿ ಯಾರಿಗೆ ಒಲಿಯಲಿದೆ ಮುಖ್ಯಮಂತ್ರಿ ಪಟ್ಟ?]
ವಾರಣಾಸಿಯ ಎರಡು ದೇವಾಲಯಕ್ಕೆ ಅವರು ಭೇಟಿ ನೀಡಿದ್ದಾರೆ. ಆದರೆ ತಮ್ಮ ಹೆಸರು ಸಿಎಂ ಸ್ಥಾನಕ್ಕೆ ಪ್ರಬಲವಾಗಿ ಕೇಳಿಬರುತ್ತಿರುವುದನ್ನು ಸಿನ್ಹಾ ನಿರಾಕರಿಸಿದ್ದಾರೆ.