ಉಪರಾಷ್ಟ್ರಪತಿ ಚುನಾವಣೆ: ಗೋಪಾಲ ಕೃಷ್ಣ ಗಾಂಧಿ ವಿಪಕ್ಷಗಳ ಅಭ್ಯರ್ಥಿ
ನವದೆಹಲಿ, ಜುಲೈ 18: ಉಪರಾಷ್ಟ್ರಪತಿ ಚುನಾವಣೆಗೆ ಮಹಾತ್ಮಾ ಗಾಂಧಿಯವರ ಮೊಮ್ಮಗ ಗೋಪಾಲ ಕೃಷ್ಣ ಗಾಂಧಿಯವರನ್ನು ತಮ್ಮ ಒಮ್ಮತದ ಅಭ್ಯರ್ಥಿಯಾಗಿ ವಿಪಕ್ಷಗಳು ಆಯ್ಕೆ ಮಾಡಿವೆ.
ಇಂದು ನಡೆದ ವಿಪಕ್ಷಗಳ ಸಭೆಯಲ್ಲಿ 18 ಪಕ್ಷಗಳು ಅವಿರೋಧವಾಗಿ ಗೋಪಾಲಕೃಷ್ಣ ಗಾಂಧಿಯವರನ್ನು ತಮ್ಮ ಅಭ್ಯರ್ಥಿಯಾಗಿ ಆಯ್ಕೆ ಮಾಡಿದವು.
ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಗೋಪಾಲಕೃಷ್ಣ ಗಾಂಧಿಯವರ ಹೆಸರು ರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಗಳ ಆಯ್ಕೆ ಸಮಯದಲ್ಲಿಯೂ ಕೇಳಿ ಬಂದಿತ್ತು. ಕೊನೆಗೆ ಮೀರಾ ಕುಮಾರ್ ರನ್ನು ವಿಪಕ್ಷಗಳ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಯಿತು.
ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಮೊಮ್ಮಗನಾಗಿರುವ ಗೋಪಾಲ ಕೃಷ್ಣ ಗಾಂಧಿ 2004-2009ರ ಮಧ್ಯೆ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿ ಕಾರ್ಯ ನಿರ್ವಹಿಸಿದ್ದರು. ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಅವರಿಗೆ ಗಾಂಧಿ ಬಹಿರಂಗ ಪತ್ರವೊಂದನ್ನು ಬರೆದಿದ್ದನ್ನೂ ಇಲ್ಲಿ ನೆನಪಿಸಿಕೊಳ್ಳಬಹುದು.
1946, ಏಪ್ರಿಲ್ 22ರಂದು ಹುಟ್ಟಿದ ಗೋಪಾಲ ಕೃಷ್ಣ ಗಾಂಧಿ ಭಾರತದ ಆಡಳಿತ ಸೇವೆಯಲ್ಲಿದ್ದರು. ಭಾರತದ ರಾಯಭಾರಿಯಾಗಿಯೂ ಅವರು ಕಾರ್ಯ ನಿರ್ವಹಿಸಿದ್ದರು. ಅಧಿಕಾರಿಯಾಗಿದ್ದ ವೇಳೆ ಭಾರತದ ರಾಷ್ಟ್ರಪತಿಗಳ ಕಾರ್ಯದರ್ಶಿಯಾಗಿಯೂ ಕೆಲಸ ನಿರ್ವಹಿಸಿದ್ದರು. ಅವರು ದಕ್ಷಿಣ ಆಫ್ರಿಕಾ ಮತ್ತು ಶ್ರೀಲಂಕಾ ದೇಶಗಳಿಗೆ ಭಾರತ ರಾಯಭಾರಿಯಾಗಿದ್ದರು.
ಚುನಾವಣಾ
ವೇಳಾಪಟ್ಟಿ
ನಾಮಪತ್ರ
ಸಲ್ಲಿಸಲು
ಕೊನೆಯ
ದಿನ-ಜುಲೈ
18
ನಾಮಪತ್ರ
ಪರಿಶಿಲನೆ-ಜುಲೈ
19
ನಾಮಪತ್ರ
ಹಿಂತೆಗೆತ-ಜುಲೈ
21
ಮತದಾನ
-
ಆಗಸ್ಟ್
5
ಮತ
ಎಣಿಕೆ
-ಆಗಸ್ಟ್
5