ಮಾಧ್ಯಮಗಳಿಂದ ತಪ್ಪಾಗಿ ವರದಿ - ಆರ್ಟ್ ಆಫ್ ಲಿವಿಂಗ್ ನಿಂದ ಸ್ಪಷ್ಟನೆ
“ಎನ್ಜಿಟಿಯಲ್ಲಿ ಆರ್ಟ್ ಆಫ್ ಲಿವಿಂಗ್ ಠೇವಣಿ ಇಟ್ಟಿರುವ ಹಣವನ್ನು ಬಳಸುವಂತೆ ಮನೋಜ್ ಮಿಶ್ರಾ ಮನವಿ ಸಲ್ಲಿಸಿದ್ದರು. ಆದರೆ ಈ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ," ಎಂದು ಆರ್ಟ್ ಆಫ್ ಲಿವಿಂಗ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.
ಬೆಂಗಳೂರು, ಏಪ್ರಿಲ್ 21: 'ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ (ಎನ್ಜಿಟಿ)'ವು ಗುರುವಾರ ವಿಚಾರಣೆ ವೇಳೆ 'ಆರ್ಟ್ ಆಫ್ ಲಿವಿಂಗ್ ' ಸಂಸ್ಥೆಯನ್ನು ತರಾಟೆಗೆ ತೆಗೆದುಕೊಂಡಿದೆ ಎಂಬ ವರದಿಗೆ ಸಂಬಂಧಿಸಿದಂತೆ ಸಂಸ್ಥೆಯು ಸ್ಪಷ್ಟನೆ ನೀಡಿದೆ. ಕೋರ್ಟ್ ತರಾಟೆಗೆ ತೆಗೆದುಕೊಂಡಿದ್ದು ನಮ್ಮನ್ನಲ್ಲ ಮನೋಜ್ ಶರ್ಮಾರನ್ನು ಎಂದು ತನ್ನ ಹೇಳಿಕೆಯನ್ನು ತಿಳಿಸಿದೆ.
ಈ ಕುರಿತು ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯಲ್ಲಿ, "ಎನ್ಜಿಟಿಯಲ್ಲಿ ಆರ್ಟ್ ಆಫ್ ಲಿವಿಂಗ್ ಠೇವಣಿ ಇಟ್ಟಿರುವ ಹಣವನ್ನು ಬಳಸುವಂತೆ ಮನೋಜ್ ಮಿಶ್ರಾ ಮನವಿ ಸಲ್ಲಿಸಿದ್ದರು. ಆದರೆ ಈ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ," ಎಂದು ಶ್ರೀ ಶ್ರೀ ರವಿಶಂಕರ್ ಸ್ಥಾಪಿಸಿರುವ ಆರ್ಟ್ ಆಫ್ ಲಿವಿಂಗ್ ಹೇಳಿದೆ.[ನಿಮಗೆ ಜವಾಬ್ದಾರಿಯೇ ಇಲ್ಲ, ರವಿಶಂಕರ್ ಗೆ ಕೋರ್ಟ್ ಛೀಮಾರಿ]

ಮಾತ್ರವಲ್ಲ ಗುರುವಾರ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದಲ್ಲಿ ನಡೆದ ವಿಚಾರಣೆಯಲ್ಲಿ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು. ಈ ಮೂರು ನಿರ್ಧಾರಗಳೂ ಆರ್ಟ್ ಆಫ್ ಲಿವಿಂಗ್ನ ಪರವಾಗಿದ್ದವು ಎಂದು ವಾದಿಸಿದ್ದವು.
ಆರ್ಟ್ ಆಫ್ ಲಿವಿಂಗ್ ನೀಡಿದ ಹೇಳಿಕೆ ಇಲ್ಲಿದೆ,
1) ಆರ್ಟ್ ಆಫ್ ಲಿವಿಂಗ್ ಇರಿಸಿದ್ದ ಠೇವಣಿ ಹಣವನ್ನು ತಕ್ಷಣವೇ ಬಳಸಬೇಕೆಂಬ ಅರ್ಜಿದಾರ ಮನೋಜ್ ಮಿಶ್ರರವರ ಮನವಿ ಸಲ್ಲಿಸಿದರು. ಈ ಮನವಿಯನ್ನು ತಿರಸ್ಕರಿಸಲಾಯಿತು.
2) ವರದಿಯಲ್ಲಿ ಹೇಳಲಾದ ಅಂಶಗಳ ಬ್ಗಗೆ ನಮ್ಮ ವಿರೋಧವನ್ನು ಆಲಿಸದೆಯೆ ಮೊಕ್ಕದ್ದೊಮೆ ಮುಂದುವರಿಸಬೇಕೆಂದು ಮಿಶ್ರರ ಮನವಿ ಮಾಡಿಕೊಂಡರು; ಅದನ್ನು ತಿರಸ್ಕರಿಸಲಾಯಿತು.
3) ನಮ್ಮ ಜಾಲತಾಣದಲ್ಲಿ ನಾವು ವ್ಯಕ್ತ ಪಡಿಸಿರುವ ಅಭಿಪ್ರಾಯದ ಬಗ್ಗೆ ಕ್ರಮ ಕೈಗೊಳ್ಳುವಂತೆ ಮಿಶ್ರ ಮನವಿ ಮಾಡಿದರು. ಇದನ್ನೂ ಸನ್ಮಾನ್ಯ ನ್ಯಾಯಾಲಯ ತಿರಸ್ಕರಿಸಿತು.
ಎಂಬುದಾಗಿ ಆರ್ಟ್ ಆಫ್ ಲಿವಿಂಗ್ ಹೇಳಿದೆ.
ಇನ್ನು ಮಾಧ್ಯಮ ವರದಿ ಬಗ್ಗೆ ಸ್ಪಷ್ಟನೆ ನೀಡಿರುವ ಆರ್ಟ್ ಆಫ್ ಲಿವಿಂಗ್, " ಮಾಧ್ಯಮಗಳಲ್ಲಿ ವರದಿಯಾದಂತೆ ಸನ್ಮಾನ್ಯ ನ್ಯಾಯಾಲಯವು ನಮ್ಮ ವಿರುದ್ಧವಾಗಿ ಹೇಳಿಲ್ಲ. ಬದಲಿಗೆ ನ್ಯಾಯಾಲಯ ಮನೋಜ್ ಮಿಶ್ರ ವಿರುದ್ಧ ಹೇಳಿತ್ತು.
ಇದೇ ವೇಳೆ, "ನ್ಯಾಯಾಲಯದಲ್ಲಿ ನಡೆಯುವ ಕುಚೋದ್ಯದ ಮಾತುಗಳೆಲ್ಲವೂ ಅಸಂಬದ್ಧ. ಕೇವಲ ನಿರ್ಧಾರಗಳು ಮಾತ್ರ ಮುಖ್ಯವಾಗುತ್ತವೆ. ಹಾಗೂ ವಿಚಾರಣೆ ವೇಳೆ ಎಲ್ಲಾ ನಿರ್ಧಾರಗಳೂ ನಮ್ಮ ಪರವಾಗಿಯೇ ಇದ್ದವು. ದುರದೃಷ್ಟವೆಂದರೆ ಕೆಲವು ಮಾಧ್ಯಮಗಳಲ್ಲಿ ವಿಚಾರಣೆಯನ್ನು ತಪ್ಪಾಗಿ ವರದಿ ಮಾಡಿವೆ," ಎಂದು ಹೇಳಿಕೆ ಬಿಡುಗಡೆ ಮಾಡಿದೆ.
ನ್ಯಾಯಾಲಯದ ಮೇಲೆ ನಮಗೆ ಪೂರ್ಣ ವಿಶ್ವಾಸವಿದೆ ಮತ್ತು ಸತ್ಯಕ್ಕೇ ಜಯ ಸಲ್ಲುತ್ತದೆ ಎಂದು ನಮಗೆ ಪೂರ್ಣ ವಿಶ್ವಾಸವಿದೆ ಎಂದು ಆರ್ಟ್ ಆಫ್ ಲಿವಿಂಗ್ ಹೇಳಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications