ಭಯೋತ್ಪಾದನೆಗೆ ಹಣ ಸಂಗ್ರಹ : NIAಯಿಂದ ದಾವೂದ್ ಇಬ್ರಾಹಿಂ, ಶಕೀಲ್ ಸೇರಿ ಐವರ ವಿರುದ್ಧ ಚಾರ್ಚ್ಶೀಟ್
ನವದೆಹಲಿ, ನವೆಂಬರ್ 5: ಭಯೋತ್ಪಾದನೆಗೆ ಹಣ ಸಂಗ್ರಹಿಸುತ್ತಿದ್ದ ಆರೋಪದ ಮೇಲೆ ದೇಶದಿಂದ ಪರಾರಿಯಾಗಿರುವ ಗ್ಯಾಂಗ್ಸ್ಟರ್ ದಾವೂದ್ ಇಬ್ರಾಹಿಂ ಹಾಗೂ ಆತನ ಸಹಚರ ಚೋಟಾ ಶಕೀಲ್ ಹಾಗೂ ಬಂಧಿತರಾಗಿರುವ ದಾವೂದ್ನ ಡಿ ಕಂಪನಿಯ ಇತರೆ ಮೂವರು ಸದಸ್ಯರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ ಚಾರ್ಜ್ ಶೀಟ್ ಸಲ್ಲಿಸಿದೆ.
ಬಂಧಿತ ಆರೋಪಿಗಳು ಮುಂಬೈ ಮತ್ತು ದೇಶದ ಇತರೆ ಪ್ರದೇಶಗಳಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ನಡೆಸಲು ಹಣವನ್ನು ಸಂಗ್ರಹಿಸುತ್ತಿದ್ದರು ಎಂದು ಎನ್ಎನ್ಐ ಶನಿವಾರ ಹೇಳಿಕೆ ಬಿಡುಗಡೆ ಮಾಡಿದೆ.

ವಿಶ್ವಸಂಸ್ಥೆಯಿಂದ ಜಾಗತಿಕ ಭಯೋತ್ಪಾದಕರು ಎಂದು ಗುರುತಿಸಲ್ಪಟ್ಟಿರುವ ದಾವೂದ್ ಇಬ್ರಾಹಿಂ ಹಾಗೂ ಶಕೀಲ್ ಹೊರತುಪಡಿಸಿ ಎನ್ಐಎ ಬಂಧಿಸಿರುವ ಆರಿಫ್ ಅಬೂಬಕರ್ ಶೇಖ್ ಅಲಿಯಾಸ್ ಆರಿಫ್ ಭಾಯಿಜಾನ್, ಶಬ್ಬೀರ್ ಅಬೂಬಕರ್ ಶೇಖ್ ಮತ್ತು ಮೊಹಮ್ಮದ್ ಸಲೀಂ ಖುರೇಷಿ ಅಲಿಯಾಸ್ ಸಲೀಂ ಫ್ರೂಟ್ ಎಂಬುವವರನ್ನು ಐಎನ್ಎ ಹೊಸ ಚಾರ್ಜ್ಶೀಟ್ನಲ್ಲಿ ಸೇರಿಸಿದೆ.
ವಿಶ್ವದಲ್ಲಿ ಭಯೋತ್ಪಾದಕ ಗ್ಯಾಂಗ್ ಎಂದು ಗುರುತಿಸಿಕೊಂಡಿರುವ ಡಿ-ಕಂಪನಿ ಸದಸ್ಯರಾಗಿರುವ ಬಂಧಿತ ಆರೋಪಿಗಳು ವಿವಿಧ ರೀತಿಯ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸುವ ಮೂಲಕ ಗ್ಯಾಂಗ್ನ ಅಪರಾಧ ಚಟುವಟಿಕೆಗಳನ್ನು ದೇಶದಲ್ಲಿ ಮತ್ತಷ್ಟು ಹೆಚ್ಚಿಸಲು ಸಂಚು ರೂಪಿಸಿದ್ದರು ಎಂದು ತನಿಖೆಯಿಂದ ದೃಢಪಟ್ಟಿದೆ.
ಅಲ್ಲದೆ ಆರೋಪಿಗಳು ಹಲವು ಜನರಿಗೆ ಬೆದರಿಕೆ ಹಾಗೂ ಕೆಲವು ವ್ಯಕ್ತಿಗಳಿಗೆ ಮಾರಣಾಂತಿಕ ಹಲ್ಲೆ ಮಾಡಿ ಸಾವಿನ ಭಯವನನ್ನು ಉಂಟು ಮಾಡಿ ಅಪಾರ ಪ್ರಮಾಣದ ಹಣವನ್ನು ಸಂಗ್ರಹಿಸಿದ್ದಾರೆ. ಈ ಮೂಲಕ ಜನರ ಮನಸ್ಸಿನಲ್ಲಿ ಭಯವನ್ನು ಸೃಷ್ಟಿಸುವ ಹಾಗೂ ಭಾರತದ ಭದ್ರತಾ ವ್ಯವಸ್ಥೆಯ ಧಕ್ಕೆಯನ್ನುಂಟು ಮಾಡುವ ಉದ್ಧೇಶ ಇವರು ಹೊಂದಿದ್ದರು ಎಂದು ಎನ್ಐಎ ತಿಳಿಸಿದೆ.
ಬಂಧಿತ ಆರೋಪಿಗಳು ಮುಂಬೈ ಮತ್ತು ಭಾರತದ ಇತರ ಭಾಗಗಳಲ್ಲಿ ಜನರಲ್ಲಿ ಭಯವನ್ನು ಸೃಷ್ಟಿಸಲು ಭಯೋತ್ಪಾದನಾ ಚಟುವಟಿಕೆಗಳಿಗೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಅಪರಾಧಿಗಳಿಂದ ಹವಾಲಾ ಚಾನೆಲ್ಗಳ ಮೂಲಕ ಅಪಾರ ಪ್ರಮಾಣದ ಹಣವನ್ನು ಪಡೆದಿದ್ದಾರೆ. ಜೊತೆಗೆ ಆರೋಪಿಗಳು ಭಯೋತ್ವಾದನೆಯ ಮೂಲಕ ಆದಾಯಗಳಿಸುತ್ತಿದ್ದರು ಎಂದು ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಲಾಗಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications