ನಾಲ್ಕು ರಾಜ್ಯಗಳ 30 ಸ್ಥಳಗಳಲ್ಲಿಎನ್ಐಎ ದಿಢೀರ್ ದಾಳಿ, ಕಾರಣವೇನು?
ನವದೆಹಲಿ, ಮಾರ್ಚ್ 12: ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮಾರ್ಚ್ 12ರ ಮಂಗಳವಾರ ಅನೇಕ ರಾಜ್ಯಗಳಲ್ಲಿ ವ್ಯಾಪಕ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ದೇಶದೊಳಗೆ ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕ - ದರೋಡೆಕೋರ ಜಾಲಗಳನ್ನು ಕಿತ್ತುಹಾಕುವ ಸಂಘಟಿತ ಪ್ರಯತ್ನದ ಭಾಗವಾಗಿ 30 ಸ್ಥಳಗಳಲ್ಲಿ ದಾಳಿ ನಡೆಸಿತು.
ಪಂಜಾಬ್, ಹರಿಯಾಣ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಚಂಡೀಗಢದಲ್ಲಿ ಧಿಡೀರ್ ದಾಳಿ ನಡೆಸಿದೆ. ಎನ್ಐ ಸುದ್ದಿಸಂಸ್ಥೆ ವರದಿ ಮಾಡಿದಂತೆ, ರಾಜ್ಯ ಪೊಲೀಸ್ ಪಡೆಗಳ ಜೊತೆಯಲ್ಲಿ ಹಲವಾರು ಎನ್ಐಎ ತಂಡಗಳು ಕಾರ್ಯನಿರ್ವಹಿಸುತ್ತಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ವ್ಯಕ್ತಿಗಳ ವಿಚಾರಣೆಯ ಸಮಯದಲ್ಲಿ ಸಂಗ್ರಹಿಸಲಾದ ನಿರ್ದಿಷ್ಟ ಮಾಹಿತಿ ಮೇರೆಗೆ ದಾಳಿ ನಡೆಯುತ್ತಿದೆ.

ಗುಪ್ತಚರ ಮೂಲಕ ಗುರುತಿಸಲಾದ ಶಂಕಿತರೊಂದಿಗೆ ಸಂಬಂಧಿಸಿದ ಸ್ಥಳಗಳನ್ನು ಗುರಿಯಾಗಿಟ್ಟುಕೊಂಡು ಪೊಲೀಸರು ಮತ್ತು ಎನ್ಐಎ ಜಂಟಿಯಾಗಿ ದಾಳಿ ನಡೆಸಿವೆ. ಭಯೋತ್ಪಾದನೆ ಮತ್ತು ಮಾಫಿಯಾ ಜಾಲಗಳನ್ನು ಮತ್ತು ಅವುಗಳಿಗೆ ಬೆಂಬಲ ನೀಡುವುದನ್ನು ಬೇರಿನೀಮದ ಕಿತ್ತುಹಾಕುವುದು ಈ ದಾಲಿಯ ಉದ್ದೇಶ,
ಎನ್ಐಎ ಇತ್ತೀಚಿನ ತಿಂಗಳುಗಳಲ್ಲಿ "ಭಯೋತ್ಪಾದನೆಯ ಆದಾಯ" ದಿಂದ ಪಡೆದ ಆಸ್ತಿಗಳನ್ನು ಗುರುತಿಸುವುದು ಮತ್ತು ವಶಪಡಿಸಿಕೊಳ್ಳುವುದು ಸೇರಿದಂತೆ ಹಲವಾರು ಉದ್ದೇಶಿತ ತಂತ್ರಗಳನ್ನು ಅಳವಡಿಸಿಕೊಂಡಿದೆ ಎಂದು ಎನ್ಐಎ ವಕ್ತಾರರು ಈ ಹಿಂದೆ ಹೇಳಿದ್ದರು.

ಪಂಜಾಬಿ ಗಾಯಕ ಸಿಧು ಮೂಸೆವಾಲಾ ಮತ್ತು ಪರ್ದೀಪ್ ಕುಮಾರ್ ಅವರಂತಹ ಸಾಮಾಜಿಕ ಮುಖಂಡರಂತಹ ಪ್ರಮುಖ ವ್ಯಕ್ತಿಗಳ ಹತ್ಯೆಗಳು ಸೇರಿದಂತೆ ವಿವಿಧ ಅಪರಾಧಗಳಲ್ಲಿ ಈ ನೀಚ ಜಾಲಗಳು ಭಾಗಿಯಾಗಿವೆ. ಅವರು ವ್ಯಾಪಾರಸ್ಥರು ಮತ್ತು ವೃತ್ತಿಪರರನ್ನು ಗುರಿಯಾಗಿಸಿಕೊಂಡು ವ್ಯಾಪಕ ಸುಲಿಗೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಜನವರಿಯಲ್ಲಿ, ಎನ್ಐಎ ಉತ್ತರ ಭಾರತದಾದ್ಯಂತ 32 ಸ್ಥಳಗಳಲ್ಲಿ ದಾಳಿ ನಡೆಸಿತು. ದಾಳಿಯಲ್ಲಿ ನಿಷೇಧಿತ ಸಂಘಟನೆಗಳಾದ ಬಬ್ಬರ್ ಖಾಲ್ಸಾ ಇಂಟರ್ನ್ಯಾಷನಲ್ (ಬಿಕೆಐ) ಮತ್ತು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ಗೆ ಸಂಬಂಧಿಸಿದ ಮೂರು ಪ್ರಕರಣಗಳಿಗೆ ಸಂಬಂಧಿಸಿದಂತೆ ಅಕ್ರಮ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು, ದೋಷಾರೋಪಣೆಯ ದಾಖಲೆಗಳು, ಡಿಜಿಟಲ್ ಸಾಧನಗಳು ಮತ್ತು ನಗದು ಪತ್ತೆಯಾಗಿತ್ತು.
ಈ ಗುಂಪುಗಳ ಕಾರ್ಯಾಚರಣೆಗಳು ಗಡಿಯಾಚೆಯಿಂದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು, ಸ್ಫೋಟಕಗಳು ಮತ್ತು ಸುಧಾರಿತ ಸ್ಫೋಟಕ ಸಾಧನಗಳು (IEDs) ನಂತಹ ಭಯೋತ್ಪಾದಕ ಯಂತ್ರಾಂಶಗಳ ಕಳ್ಳಸಾಗಣೆ ಮತ್ತು ಸಂಗ್ರಹಣೆಯನ್ನು ಒಳಗೊಂಡಿವೆ ಎಂದು ಎನ್ಐಎ ಬಹಿರಂಗಪಡಿಸಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications