ಉಗ್ರ ಮೊಹಮದ್ ನವೀದ್ ವಿರುದ್ಧ ಚಾರ್ಜ್ ಶೀಟ್
ಬೆಂಗಳೂರು, ಜನವರಿ 29 : ಜಮ್ಮು-ಕಾಶ್ಮೀರದ ಉದಾಮ್ಪುರದಲ್ಲಿ ನಡೆದ ಉಗ್ರರ ದಾಳಿ ಪ್ರಕರಣದ ಕುರಿತು ಎನ್ಐಎ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಜೀವಂತವಾಗಿ ಸೆರೆ ಸಿಕ್ಕ ಉಗ್ರ ಮೊಹಮದ್ ನವೀದ್ ದಾಳಿಯ ಪ್ರಮುಖ ಆರೋಪಿ ಎಂದು ಎನ್ಐಎ ಹೇಳಿದ್ದು, ಇತರ 8 ಜನರ ಹೆಸರನ್ನು ಆರೋಪ ಪಟ್ಟಿಯಲ್ಲಿ ಸೇರಿಸಲಾಗಿದೆ.
2015ರ ಆಗಸ್ಟ್ 5ರಂದು ಜಮ್ಮು ಕಾಶ್ಮೀರದಲ್ಲಿ ಬಿಎಸ್ಎಫ್ ಶಿಬಿರದ ಮೇಲೆ ಲಷ್ಕರ್ ಎ ತೋಯ್ಬಾ ಉಗ್ರರು ದಾಳಿ ಮಾಡಿದ್ದರು. ಈ ದಾಳಿಯಲ್ಲಿ ಇಬ್ಬರು ಯೋಧರು ಸಾವನ್ನಪ್ಪಿದ್ದರು. ಮೊಹಮದ್ ನವೀದ್ ಮತ್ತು ಆತನ ಸಹಚರನನ್ನು ಸ್ಥಳೀಯರ ನೆರವಿನಿಂದಾಗಿ ಜೀವಂತವಾಗಿ ಸೆರೆ ಹಿಡಿಯಲಾಗಿತ್ತು. [ಕಾಶ್ಮೀರದಲ್ಲಿ ಜೀವಂತವಾಗಿ ಸೆರೆ ಸಿಕ್ಕ ಉಗ್ರ]

ರಾಷ್ಟ್ರೀಯ ತನಿಖಾ ದಳ ಈ ಉಗ್ರರ ದಾಳಿಯ ತನಿಖೆ ನಡೆಸುತ್ತಿದ್ದು ಗುರುವಾರ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಈ ದಾಳಿ ಪ್ರಕರಣದಲ್ಲಿ ಮೊಹಮದ್ ನವೀದ್ ಮೊದಲ ಆರೋಪಿಯಾಗಿದ್ದು, ಇತರ 8 ಜನರು ಆರೋಪಿಗಳು ಎನ್ಐಎ ಉಲ್ಲೇಖಿಸಿದೆ. ದಾಳಿಯ ಬಗ್ಗೆ ತನಿಖೆ ಮುಂದುವರೆಯುತ್ತಿದೆ ಎಂದು ಕೋರ್ಟ್ಗೆ ತಿಳಿಸಿದೆ. ['ನಾನು ಕೊಲ್ಲಲು ಬಂದಿದ್ದೆ, ಸಾಯಲು ಅಲ್ಲ']
ಪಾಕಿಸ್ತಾನದ ಉಗ್ರ ಸಂಘಟನೆ ಲಷ್ಕರ್ ಎ ತೋಯ್ಬಾ ಈ ದಾಳಿ ನಡೆಸಿದೆ ಎಂದು ಎನ್ಐಎ ಚಾರ್ಜ್ ಶೀಟ್ನಲ್ಲಿ ಹೇಳಿದೆ. ಮೊಹಮದ್ ನವೀದ್ ಮತ್ತು ಇತರ ಉಗ್ರರು ಈ ದಾಳಿಯನ್ನು ನಡೆಸಲು ಗಡಿನುಸುಳಿ ಬಂದಿದ್ದರು. ಕಾಶ್ಮೀರದ ಸ್ಥಳೀಯರು ಇವರಿಗೆ ನೆರವು ನೀಡಿದ್ದರು ಎಂದು ಎನ್ಐಎ ಹೇಳಿದೆ. [ಸೆರೆಸಿಕ್ಕ ಉಗ್ರ ನವೀದ್ ಯಾರು?]
ಈ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ನವೀದ್ ಹಲವಾರು ಮಾಹಿತಿಗಳನ್ನು ನೀಡಿದ್ದಾನೆ. ಜಮ್ಮ ಮತ್ತು ಕಾಶ್ಮೀರದಲ್ಲಿ ದಾಳಿಗೆ ಸಹಕಾರ ನೀಡಿದ ಹಲವು ಆರೋಪಿಗಳನ್ನು ಬಂಧಿಸಿದ್ದೇವೆ. ಪ್ರಕರಣದ ತನಿಖೆ ಇನ್ನೂ ಪೂರ್ಣಗೊಂಡಿಲ್ಲ ಎಂದು ಎನ್ಐಎ ಚಾರ್ಜ್ಶೀಟ್ನಲ್ಲಿ ತಿಳಿಸಿದೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications