ಇಸ್ಲಾಂ ಧರ್ಮಬೋಧಕ ಜಾಕಿರ್ ವಿಚಾರಣೆಗೆ ಕೊನೆ ಅವಕಾಶ?
ಕಳೆದೊಂದು ತಿಂಗಳಿನಿಂದ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಒಂದರ ಮೇಲೊಂದರಂತೆ ಸಮನ್ಸ್ ಜಾರಿಗೊಳಿಸಲಾಗಿದ್ದರೂ ವಿಚಾರಣೆಗೆ ಹಾಜರಾಗದ ಜಾಕಿರ್.
ನವದೆಹಲಿ, ಏಪ್ರಿಲ್ 4: ವಿಚಾರಣೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ಆಯೋಗ (ಎನ್ ಐಎ) ನೀಡುತ್ತಿರುವ ಯಾವುದೇ ಸಮನ್ಸ್ ಗೆ ಜಗ್ಗದ ಇಸ್ಲಾಂ ಧರ್ಮ ಬೋಧಕ ಜಾಕಿರ್ ನಾಯಕ್ ಅವರಿಗೆ ಸಂಕಷ್ಟ ಎದುರಾಗುವ ಸಾಧ್ಯತೆಗಳು ಹೆಚ್ಚಾಗಿವೆ.
ಜಾಕಿರ್ ಅವರ ಮೇಲೆ ಹಣಕಾಸು ಅಕ್ರಮಗಳ ಆರೋಪಗಳಿರುವುದರಿಂದ ಎನ್ ಐಎ, ಜಾಕಿರ್ ಅವರನ್ನು ವಿಚಾರಣೆಗೊಳಪಡಿಸಲು ತೀರ್ಮಾನಿಸಿದೆ. ಹಾಗಾಗಿ, ಕಳೆದೊಂದು ತಿಂಗಳಿನಿಂದ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಒಂದರ ಮೇಲೊಂದರಂತೆ ಸಮನ್ಸ್ ಜಾರಿಗೊಳಿಸಲಾಗಿದ್ದರೂ ಅವರು ವಿಚಾರಣೆಗೆ ಹಾಜರಾಗಿಲ್ಲ.

ಈಗ ಮೂರನೇ ಬಾರಿಗೆ ಮತ್ತೊಂದು ಸಮನ್ಸ್ ಜಾರಿಗೊಂಡಿದೆ. ಈ ಬಾರಿ, ಏಪ್ರಿಲ್ 17ರಂದು ವಿಚಾರಣೆಗೆ ಹಾಜರಾಗಬೇಕೆಂದು ಅದು ಸೂಚಿಸಿದೆ.
ಈ ಬಾರಿಯೂ ಅವರು ವಿಚಾರಣೆಗೆ ಹಾಜರಾಗದಿದ್ದಲ್ಲಿ, ಎನ್ ಐಎಯು ನ್ಯಾಯಾಲಯದ ಮೊರೆ ಹೋಗುವುದಲ್ಲದೆ, ನ್ಯಾಯಾಲಯದ ನಿರ್ದೇಶನವನ್ನು ಪಡೆದು ಅದನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ರವಾನಿಸಲಿದೆ. ಆನಂತರ, ಕೇಂದ್ರ ಗೃಹ ಸಚಿವಾಲಯದಿಂದ ಜಾಕಿರ್ ಬಂಧನದ ವಾರಂಟ್ ಜಾರಿಯಾಗಲಿದೆ.
ಇದು ಜಾರಿಗೊಳ್ಳುತ್ತಲೇ, ಎನ್ ಐಎಯು ಜಾಕಿರ್ ಹಸ್ತಾಂತರ ಪ್ರಕ್ರಿಯೆಗೆ ಚಾಲನೆ ನೀಡಲಿದೆ ಎಂದು ಮೂಲಗಳು ತಿಳಿಸಿವೆ.
ವಿಚಾರಣೆಗೆ ಹಾಜರಾಗದ ಜಾಕಿರ್: ಜಾಕಿರ್ ಅವರು ಕಳೆದ ಹತ್ತು ತಿಂಗಳಿನಿಂದಲೂ ಸೌದಿ ಅರೇಬಿಯಾದಲ್ಲಿ ನೆಲೆಸಿರುವುದಾಗಿ ಹೇಳಲಾಗಿದೆ. ಹಾಗಾಗಿ, ಅವರ ಇ-ಮೇಲ್ ವಿಳಾಸಕ್ಕೂ ಈ ಹಿಂದೆ ಸಮನ್ಸ್ ಗಳನ್ನು ಜಾರಿಗೊಳಿಸಲಾಗಿತ್ತು. ವಿಚಾರಣೆಗಾಗಿ ಖುದ್ದಾಗಿ, ಭಾರತಕ್ಕೆ ಆಗಮಿಸಬೇಕೆಂದೂ ಸೂಚಿಸಲಾಗಿತ್ತು.
ಈ ಹಿಂದೆ ಕಳುಹಿಸಲಾದ ಎರಡು ಸಮನ್ಸ್ ಗಳಲ್ಲಿ ಕ್ರಮವಾಗಿ ಮಾರ್ಚ್ 14 ಹಾಗೂ ಮಾರ್ಚ್ 30ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು.
ಆ ಎರಡು ಸಮನ್ಸ್ ಗಳಲ್ಲಿ ಒಂದಕ್ಕೆ ಮಾತ್ರ ಸ್ಪಂದಿಸಿದ್ದ ಜಾಕಿರ್, ''ತಾವು ವೀಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೊಳಗಾಗುವುದಾಗಿ ಎನ್ ಐಎಗೆ ಮನವಿ ಸಲ್ಲಿಸಿದ್ದರು. ಆದರೆ, ಆ ಮನವಿಯನ್ನು ಎನ್ ಐಎ ಮಾನ್ಯ ಮಾಡಿರಲಿಲ್ಲ. ಜಾಕಿರ್ ಖುದ್ದು ಹಾಜರಾಗಬೇಕೆಂಬುದೇ ಎನ್ ಐಎನ ನಿಲುವಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications