ಎನ್ಐಎ ಅಧಿಕಾರಿ ತನ್ಜಿಲ್ ಅಹ್ಮದ್ ಹತ್ಯೆ ವ್ಯವಸ್ಥಿತ ಸಂಚು
ಬೆಂಗಳೂರು, ಏಪ್ರಿಲ್ 04 : ಎನ್ಐಎ ಅಧಿಕಾರಿ ಮೊಹಮ್ಮದ್ ತನ್ಜಿಲ್ ಅಹ್ಮದ್ ಹತ್ಯೆ ಪೂರ್ವ ನಿಯೋಜಿತವಾದದ್ದು, ಹಲವು ಗಂಟೆಗಳ ಕಾಲ ಅವರ ಚಲನವಲನದ ಮಾಹಿತಿ ಪಡೆದು ನಂತರ ಹತ್ಯೆ ಮಾಡಲಾಗಿದೆ. ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆ ಈ ಹತ್ಯೆಯ ಹಿಂದಿದೆ ಎಂಬ ಬಗ್ಗೆ ನಿಖರವಾದ ಮಾಹಿತಿ ಇನ್ನೂ ಲಭ್ಯವಾಗಿಲ್ಲ.
45 ವರ್ಷದ ತನ್ಜಿಲ್ ಅಹ್ಮದ್ ಅವರು ಕುಟುಂಬದವರೊಂದಿಗೆ ವಿವಾಹ ಆರತಕ್ಷತೆ ಮುಗಿಸಿಕೊಂಡು ಬರುವಾಗ ಉತ್ತರ ಪ್ರದೇಶದ ಬಿಜ್ನೋರ್ನಲ್ಲಿ ಅವರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿತ್ತು. ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಪ್ರಕರಣಗಳನ್ನು ತನಿಖೆ ನಡೆಸಲು ಆರಂಭಿಸಿದ ಮೇಲೆ ಅವರಿಗೆ ಶತ್ರಗಳು ಹೆಚ್ಚಾಗಿದ್ದರು. [NIA ಅಧಿಕಾರಿ ಹತ್ಯೆ]

ವ್ಯವಸ್ಥಿತ ಕೊಲೆ : ತನ್ಜಿಲ್ ಅಹ್ಮದ್ ಅವರ ಕೊಲೆ ಒಂದು ವ್ಯವಸ್ಥಿತ ಸಂಚು ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ. ಹಲವು ದಿನಗಳ ಕಾಲ ಅವರು ಸಂಚರಿಸುವ ಸ್ಥಳಗಳ ಮಾಹಿತಿ ಸಂಗ್ರಹಣೆ ಮಾಡಿ, ವ್ಯವಸ್ಥಿತವಾದ ಸಂಚು ರೂಪಿಸಿ ಅವರನ್ನು ಹತ್ಯೆ ಮಾಡಲಾಗಿದೆ. [ಪಠಾಣ್ ಕೋಟ್ ದಾಳಿ : ಉಗ್ರರ ಚಿತ್ರಗಳು ಬಿಡುಗಡೆ]
ಈ ಹತ್ಯೆ ಪ್ರಕರಣದ ಹಿಂದೆ ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕೈವಾಡವಿದೆ ಎಂಬ ನಿರ್ಧಾರಕ್ಕೆ ಬರಲು ಸಾಧ್ಯವಿಲ್ಲ. ಈ ದೃಷ್ಟಿಕೋನದಲ್ಲಿಯೂ ತನಿಖೆ ನಡೆಸಲಾಗುತ್ತದೆ ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ. ಇಬ್ಬರು ಆರೋಪಿಗಳು 9ಎಂಎಂ ಪಿಸ್ತೂಲ್ ಬಳಸಿ ಮೊಹಮ್ಮದ್ ತನ್ಜಿಲ್ ಅಹ್ಮದ್ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. [ಪಠಾಣ್ ಕೋಟ್ ಉಗ್ರರ ದಾಳಿ ಟೈಮ್ ಲೈನ್]
21 ಗುಂಡು ಹೊಕ್ಕಿವೆ : ಭಾನುವಾರ ಮುಂಜಾನೆ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮೊಹಮ್ಮದ್ ತನ್ಜಿಲ್ ಅಹ್ಮದ್ ಅವರ ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. 21 ಗುಂಡುಗಳು ತನ್ಜಿಲ್ ಅಹ್ಮದ್ ಅವರ ದೇಹಕ್ಕೆ ಹೊಕ್ಕಿವೆ. ಅವರನ್ನು ಆಸ್ಪತ್ರೆಗೆ ದಾಖಲಿಸುವಾಗಲೇ ಅವರು ಮೃತಪಟ್ಟಿದ್ದರು. ತನ್ಜಿಲ್ ಅಹ್ಮದ್ ಅವರ ಪತ್ನಿ ಸಹ ಗುಂಡೇಟಿನಿಂದ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಧಿಕಾರಿಗಳ ಸಂತಾಪ : ಮೊಹಮ್ಮದ್ ತನ್ಜಿಲ್ ಅಹ್ಮದ್ ಮೊದಲು ಬಿಎಸ್ಎಫ್ನಲ್ಲಿ ಅಸಿಸ್ಟೆಂಟ್ ಕಮಾಂಡರ್ ಆಗಿದ್ದರು. 2009ರ ಫೆಬ್ರವರಿಯಲ್ಲಿ ಅವರನ್ನು ಎನ್ಐಎಗೆ ವರ್ಗಾವಣೆ ಮಾಡಲಾಗಿತ್ತು. ಮೊದಲು ಎನ್ಐಎ ಗುಪ್ತಚರ ವಿಭಾಗದಲ್ಲಿದ್ದ ಅವರು ನಂತರ ತನಿಖಾಧಿಕಾರಿಯಾಗಿದ್ದರು.
ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆ ಸೇರಿದಂತೆ ಹಲವು ಪ್ರಕರಣಗಳ ತನಿಖೆಯನ್ನು ಮೊಹಮ್ಮದ್ ತನ್ಜಿಲ್ ಅಹ್ಮದ್ ನಡೆಸುತ್ತಿದ್ದರು. ಪಠಾಣ್ ಕೋಟ್ ವಾಯುನೆಲೆ ಮೇಲಿನ ದಾಳಿಯ ತನಿಖೆ ನಡೆಸಲು ಭಾರತಕ್ಕೆ ಆಗಮಿಸಿದ್ದ ಪಾಕಿಸ್ತಾನದ ತನಿಖಾ ತಂಡ ಜೊತೆಯೂ ತನ್ಜಿಲ್ ಅಹ್ಮದ್ ಮಾತುಕತೆ ನಡೆಸಿದ್ದರು. ತನ್ಜಿಲ್ ಅಹ್ಮದ್ ಸಾವಿಗೆ ಅಧಿಕಾರಿಗಳು ಸಂತಾಪ ಸೂಚಿಸಿದ್ದಾರೆ. [ಪಿಟಿಐ ಚಿತ್ರ]
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications