ಎನ್ಐಎ ಅಧಿಕಾರಿ ತನ್ಜಿಲ್ ಹತ್ಯೆ, ಇಬ್ಬರ ಬಂಧನ
ಬೆಂಗಳೂರು, ಏಪ್ರಿಲ್ 12 : ಎನ್ಐಎ ಅಧಿಕಾರಿ ಮೊಹಮ್ಮದ್ ತನ್ಜಿಲ್ ಅಹ್ಮದ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಹತ್ಯೆಯ ಪ್ರಮುಖ ಆರೋಪಿಯ ಸುಳಿವು ಕೊಟ್ಟವರಿಗೆ ನಗದು ಬಹುಮಾನವನ್ನು ಪೊಲೀಸರು ಘೋಷಣೆ ಮಾಡಿದ್ದಾರೆ.
ತನ್ಜಿಲ್ ಅಹ್ಮದ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಹಾನ್ ಮತ್ತು ಝೈನೂಲ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಹತ್ಯೆ ಪ್ರಕರಣದ ರೂವಾರಿ ಮುನೀರ್ ಎಂದು ಗುರುತಿಸಲಾಗಿದ್ದು, ಆತನಿಗಾಗಿ ಹುಡುಕಾಟ ಮುಂದುವರೆದಿದೆ. [ತನ್ಜಿಲ್ ಅಹ್ಮದ್ ಹತ್ಯೆ ವ್ಯವಸ್ಥಿತ ಸಂಚು]

ರೆಹಾನ್ ಮತ್ತು ಝೈನೂಲ್ ವಿಚಾರಣೆ ನಡೆಸಿದಾಗ ಮುನೀರ್ ಬಗ್ಗೆ ತಿಳಿದುಬಂದಿದೆ. ಮುನೀರ್ ಬಗ್ಗೆ ಮಾಹಿತಿ ನೀಡಿದವರಿಗೆ ನಗದು ಬಹುಮಾನ ನೀಡುವುದಾಗಿ ಪೊಲೀಸರು ಘೋಷಣೆ ಮಾಡಿದ್ದಾರೆ. ಮೂಲತಃ ಉತ್ತರ ಪ್ರದೇಶದ ಬಿಜ್ನೋರ್ನ ನಿವಾಸಿಯಾದ ಮುನೀರ್ ದೆಹಲಿಯಲ್ಲಿ ವಾಸ್ತವ್ಯ ಹೂಡಿದ್ದ ಎಂದು ಪೊಲೀಸರು ಹೇಳಿದ್ದಾರೆ. [NIA ಅಧಿಕಾರಿ ಹತ್ಯೆ]
ಇಬ್ಬರು ಆರೋಪಿಗಳನ್ನು ಬಂಧಿಸಿದರೂ ತನ್ಜಿಲ್ ಅಹ್ಮದ್ ಹತ್ಯೆಗೆ ನಿಖರವಾದ ಕಾರಣ ಏನೆಂದು ತಿಳಿದುಬಂದಿಲ್ಲ. ಮುನೀರ್ ಬಂಧನ ಬಳಿಕ ಸ್ಪಷ್ಟವಾದ ಮಾಹಿತಿ ತಿಳಿದುಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆಸ್ತಿ ವಿವಾದದ ಹಿನ್ನಲೆಯಲ್ಲಿ ಹತ್ಯೆ ನಡೆದಿರಬಹುದು ಎಂದು ಶಂಕಿಸಲಾಗಿದ್ದು, ಪೊಲೀಸರು ಈ ಕುರಿತು ತನಿಖೆ ನಡೆಸುತ್ತಿದ್ದಾರೆ.
ಏ.3ರ ಭಾನುವಾರ ಮುಂಜಾನೆ ಉತ್ತರ ಪ್ರದೇಶದ ಬಿಜ್ನೋರ್ ಬಳಿ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಎನ್ಐಎ ಅಧಿಕಾರಿ ತನ್ಜಿಲ್ ಅಹ್ಮದ್ ಅವರ ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಅಹ್ಮದ್ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದರು.
ತನ್ಜಿಲ್ ಅಹ್ಮದ್ ಅವರು ಬಿಎಸ್ಎಫ್ನಲ್ಲಿ ಅಸಿಸ್ಟೆಂಟ್ ಕಮಾಂಡರ್ ಆಗಿದ್ದರು. 2009ರ ಫೆಬ್ರವರಿಯಲ್ಲಿ ಅವರನ್ನು ಎನ್ಐಎಗೆ ವರ್ಗಾವಣೆ ಮಾಡಲಾಗಿತ್ತು. ಮೊದಲು ಎನ್ಐಎ ಗುಪ್ತಚರ ವಿಭಾಗದಲ್ಲಿದ್ದ ಅವರು ನಂತರ ತನಿಖಾಧಿಕಾರಿಯಾಗಿದ್ದರು. ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆ ಸೇರಿದಂತೆ ಹಲವು ಮಹತ್ವದ ಪ್ರಕರಣಗಳ ತನಿಖೆಯನ್ನು ಅವರು ನಡೆಸುತ್ತಿದ್ದರು. [ಪಿಟಿಐ ಚಿತ್ರ]
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications