ಎನ್ಐಎಯಿಂದ ಎಲ್ಲ ಪ್ರಕರಣಕ್ಕೂ 'ಕೇಸರಿ ಬಣ್ಣ'
ನವದೆಹಲಿ, ಏಪ್ರಿಲ್ 17: ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್ಐಎ) ಪ್ರತಿ ಪ್ರಕರಣಕ್ಕೂ ಹಿಂದೂ ಭಯೋತ್ಪಾದನೆಯ ಆಯಾಮದ ಬಣ್ಣವನ್ನೇ ಹಚ್ಚುತ್ತಿತ್ತು ಎಂದು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯದ ಮಾಜಿ ಅಧೀನ ಕಾರ್ಯದರ್ಶಿ ಆರ್.ವಿ.ಎಸ್. ಮಣಿ ಹೇಳಿದ್ದಾರೆ.
ಮೂಲ ಪ್ರಕರಣವನ್ನು ಸಿಬಿಐ ನಿರ್ವಹಿಸುತ್ತಿರುತ್ತದೆ. ಅದು ಎಲ್ಲ ಸಾಕ್ಷ್ಯಗಳನ್ನೂ ಸಂಗ್ರಹಿಸಿ ಚೆನ್ನಾಗಿ ತನಿಖೆ ನಡೆಸುತ್ತಿರುತ್ತದೆ. ಆಗ ಗೃಹ ಸಚಿವಾಲಯದ ರಾಜಕೀಯ ನಾಯಕತ್ವವು ಪ್ರಕರಣವನ್ನು ಒಂದು ಸಂಸ್ಥೆಯಿಂದ ಮತ್ತೊಂದು ಸಂಸ್ಥೆಗೆ ವರ್ಗಾಯಿಸುತ್ತದೆ. ಪ್ರಮುಖ ಪ್ರಕರಣವನ್ನು ಎನ್ಐಎ ಒಪ್ಪಿಸುತ್ತದೆ. ಅವರು ಅಸಲಿ ಸಾಕ್ಷ್ಯಗಳನ್ನು ಏನು ಮಾಡುತ್ತಾರೋ ಗೊತ್ತಿಲ್ಲ. ಆದರೆ, ಆ ಪ್ರಕರಣಕ್ಕೆ ಕೇಸರಿ ಭಯೋತ್ಪಾದನೆಯ ಕಥೆ ಕಟ್ಟಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಆರಂಭದಲ್ಲಿ ಎನ್ಐಎ ಕೇವಲ ಕೇಸರಿ ಭಯೋತ್ಪಾದನೆಯ ಪ್ರಕರಣಗಳನ್ನು ಮಾತ್ರ ನಿರ್ವಹಿಸಿತ್ತು. ಅದು ತನಿಳಖಾ ಸಂಸ್ಥೆ ಎನ್ನುವುದಕ್ಕಿಂತ ಪೈಂಟಿಂಗ್ ಸಂಸ್ಥೆ ಎಂದು ಕರೆಯಬಹುದು. ಪ್ರತಿ ಪ್ರಕರಣಕ್ಕೂ ಕೇಸರಿ ಬಣ್ಣ ಬಳಿಯುತ್ತಿದ್ದರು ಎಂದಿದ್ದಾರೆ.

'ನಾನು ಸಚಿವಾಲಯದಿಂದ ವರ್ಗಾವಣೆಯಾದ ಬಳಿಕ ದೇಶದ ಅನೇಕ ಭಯೋತ್ಪಾದನಾ ಕೃತ್ಯ ಪ್ರಕರಣಗಳಲ್ಲಿ ಗೃಹ ಸಚಿವಾಲಯದಲ್ಲಿನ ಧರ್ಮ ರಾಜಕೀಯ ಕೆಲಸ ಮಾಡಿದೆ. ನನ್ನ ವರ್ಗಾವಣೆಯ ಬಳಿಕ ಗೃಹ ಸಚಿವಾಲಯದಲ್ಲಿ ಹಿಂದೂ ಭಯೋತ್ಪಾದನೆಯ ಬೀಜ ಬಿತ್ತಲಾಯಿತು. ನಾನು 22 ತಿಂಗಳಿಗೆ ಮುನ್ನವೇ ಸ್ವಯಂ ನಿವೃತ್ತಿ ತೆಗೆದುಕೊಂಡೆ. ನಾನು ಸತ್ಯದೊಂದಿಗೆ ಇದ್ದೇನೆ. ಹುದ್ದೆಗಳ ಬೆನ್ನತ್ತುವುದು ರಾಜಕಾರಣಿಗಳ ಕೆಲಸ. ನನ್ನದಲ್ಲ' ಎಂದು ಹೇಳಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications