ಭಯೋತ್ಪಾದಕರೊಂದಿಗೆ ನಂಟು: ಕರ್ನಾಟಕದ ಯುವಕರ ಮೇಲೆ ಎನ್ಐಎ ಕೇಸ್
ನವದೆಹಲಿ, ಜನವರಿ 10: ಕತಾರ್ನಲ್ಲಿ ನೆಲೆಸಿರುವ ಕೇರಳ ಮತ್ತು ಕರ್ನಾಟಕದ 7-8 ಯುವಕರ ವಿರುದ್ಧ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಪ್ರಕರಣ ದಾಖಲಿಸಿದೆ.
ಈ ಯುವಕರು ಇಸ್ಲಾಮಿಕ್ ಸ್ಟೇಟ್ ಜೊತೆ ನಂಟು ಹೊಂದಿರುವ ಜುಂಡ್ ಅಲ್-ಅಕ್ಸಾ ಮತ್ತು ಜಭಾತ್ ಉಲ್-ನುಸ್ರಾ ಉಗ್ರರ ಸಂಘಟನೆಗಳನ್ನು ಸೇರಿಕೊಳ್ಳಲು 2013ರಲ್ಲಿ ಸಿರಿಯಾಕ್ಕೆ ಹೊರಡಲು ಸಿದ್ಧತೆ ನಡೆಸಿದ್ದರು ಅಥವಾ ಅಲ್ಲಿಗೆ ತೆರಳಿದ್ದರು ಎನ್ನಲಾಗಿದೆ.
ಕತಾರ್ನಲ್ಲಿ ನೆಲಸಿರುವ ಈ ಯುವಕರು ಉಗ್ರ ಸಂಘಟನೆ ಸೇರಿಕೊಳ್ಳುವಂತೆ ಪ್ರಚೋದನೆಗೆ ಒಳಗಾಗಿದ್ದರು. ಕೇರಳದ ಕೆಲವು ಯುವಕರು ಐಎಸ್ ಸೇರಲು ಪ್ರಯತ್ನಿಸಿದ ಮತ್ತೊಂದು ಪ್ರಕರಣದ ವಿಚಾರಣೆ ವೇಳೆ ಕತಾರ್ನಲ್ಲಿ ನೆಲೆಸಿರುವ ಈ ಯುವಕರ ಚಟುವಟಿಕೆ ಬಗ್ಗೆ ಮಾಹಿತಿ ದೊರಕಿದೆ ಎಂದು ಎನ್ಐಎ ಮೂಲಗಳು ತಿಳಿಸಿವೆ.

ಈ ಎಲ್ಲ ಯುವಕರ ಗುರುತು ಮತ್ತು ಅವರ ವಿಳಾಸಗಳು ದೊರೆತಿವೆ. ಆದರೆ ಎಷ್ಟು ಮಂದಿ ಸಿರಿಯಾಕ್ಕೆ ತೆರಳಿದ್ದಾರೆ ಮತ್ತು ಎಷ್ಟು ಮಂದಿ ಇನ್ನೂ ಬದುಕಿದ್ದಾರೆಯೇ ಅಥವಾ ಸತ್ತಿದ್ದಾರೆಯೇ ಎಂಬುದು ಖಚಿತವಾಗಿಲ್ಲ.
ಈ ಯುವಕರ ಮೇಲೆ ಐಪಿಸಿ ಸೆಕ್ಷನ್ ಅಡಿಯಲ್ಲಿ ಅಪರಾಧ ಸಂಚು ಮತ್ತು ಶಾಂತಿಯುತ ದೇಶದ ವಿರುದ್ಧ ಯುದ್ಧ ಮಾಡುವ ತಯಾರಿ ಪ್ರಕರಣಗಳನ್ನು ದಾಖಲಿಸಲಾಗಿದೆ. ಅಲ್ಲದೆ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ ಅಡಿಯಲ್ಲಿಯೂ ಕೇಸು ದಾಖಲಿಸಲಾಗಿದೆ.
ಭಯೋತ್ಪಾದನಾ ಚಟುವಟಿಕೆಗಳನ್ನು ಮಾಡುವ ಸಲುವಾಗಿ ಜುಂಡ್ ಅಲ್-ಅಕ್ಸಾ ಹಾಗೂ ಜಭಾತ್ ಅಲ್-ನುಸ್ರಾ ಸೇರ್ಪಡೆಯಾಗಲು ಈ ಯುವಕರು ಸಿರಿಯಾಕ್ಕೆ ಹೋಗಲು ಸಿದ್ಧತೆ ನಡೆಸಿದ್ದರು ಅಥವಾ ಅಲ್ಲಿಗೆ ತೆರಳಿದ್ದಾರೆ ಎಂದು ಎನ್ಐಎ ತಿಳಿಸಿದೆ.
-
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್








Click it and Unblock the Notifications