ಪಠಾಣ್ ಕೋಟ್ ವಾಯುನೆಲೆಗೆ ನುಗ್ಗಿದ್ದ ಉಗ್ರರೆಷ್ಟು?
ಬೆಂಗಳೂರು, ಫೆಬ್ರವರಿ 10 : ಪಂಜಾಬಿನ ಪಠಾಣ್ ಕೋಟ್ ವಾಯುನೆಲೆಗೆ ನುಗ್ಗಿದ್ದ ಉಗ್ರರೆಷ್ಟು? ಎಂಬ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ತನಿಖೆ ನಡೆಸಲಿದೆ. ವಾಯುನೆಲೆಯಿಂದ ಇಬ್ಬರು ಉಗ್ರರು ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ ತನಿಖೆ ನಡೆಯಲಿದೆ.
ಎನ್ಐಎ ಮುಖ್ಯಸ್ಥ ಶರದ್ ಕುಮಾರ್ ಅವರ ನೇತೃತ್ವದಲ್ಲಿ ಈ ತನಿಖೆ ನಡೆಯಲಿದೆ. ವಾಯುನೆಲೆಗೆ ಒಟ್ಟು 6 ಉಗ್ರರು ನುಗ್ಗಿದ್ದರು ಎಂದು ಅಂದಾಜಿಸಲಾಗಿದೆ. ನಾಲ್ವರು ಉಗ್ರರನ್ನು ಯೋಧರು ಕೊಂದು ಹಾಕಿದ್ದಾರೆ. ಅವರ ಶವಗಳು ಸಿಕ್ಕಿವೆ. ಆದರೆ, ಉಳಿದ ಇಬ್ಬರು ಉಗ್ರರ ಶವಗಳು ಸಿಕ್ಕಿಲ್ಲ. [ಪಠಾಣ್ ಕೋಟ್ ವಾಯುನೆಲೆಯ ವಿಶೇಷತೆಗಳೇನು?]

ವಾಯುನೆಲೆಯಲ್ಲಿ ಮೃತಪಟ್ಟ ಉಗ್ರರಿಂದ 4 ಎಕೆ -47 ರೈಫಲ್ ಮತ್ತು ಮೂರು ಪಿಸ್ತೂಲ್ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿತ್ತು. ಆದರೆ, ಎರಡನೇ ದಿನ ಇಬ್ಬರು ಉಗ್ರರು ಯೋಧರ ಮೇಲೆ ದಾಳಿ ಮಾಡಿದ್ದಾರೆ ಎಂದು ಶಂಕಿಸಲಾಗಿದ್ದು, ಅವರ ಬಂದೂಕುಗಳು ಸಿಕ್ಕಿಲ್ಲ. [ಪಠಾಣ್ ಕೋಟ್ ಉಗ್ರರ ದಾಳಿ : ಟೈಮ್ ಲೈನ್]
ಇಬ್ಬರು ಉಗ್ರರು ಮೃತಪಟ್ಟ ಸ್ಥಳಕ್ಕೆ ಬೆಂಕಿ ಬಿದ್ದಿದ್ದು ಅಲ್ಲಿ ಸುಟ್ಟ ವಸ್ತುಗಳು ಪತ್ತೆಯಾಗಿವೆ. ಬೂದಿಯಲ್ಲಿ ಕಬ್ಬಿಣದ ತುಂಡುಗಳು ಸಿಕ್ಕಿವೆ. ಈ ಉಗ್ರರು ಸೇನಾ ಸಮವಸ್ತ್ರ ಧರಿಸಿದ್ದರೆ ಎಂಬುದಕ್ಕೆ ನಿಖರವಾದ ಸಾಕ್ಷಿಗಳು ಸಿಕ್ಕಿಲ್ಲ. ಪೊರೆನ್ಸಿಕ್ ತಜ್ಞರು ಬೂದಿಯಲ್ಲಿ ಸಿಕ್ಕ ವಸ್ತುಗಳನ್ನು ಪರಿಶೀಲಿಸುತ್ತಿದ್ದಾರೆ.
ಪೊರೆನ್ಸಿಕ್ ತಜ್ಞರ ವರದಿ ಬಂದ ಬಳಿಕ ಅಂತಿಮ ತೀರ್ಮಾನವನ್ನು ಕೈಗೊಳ್ಳಲು ಎನ್ಐಎ ಅಧಿಕಾರಿಗಳ ತಂಡ ನಿರ್ಧರಿಸಿದೆ. ಈ ತನಿಖೆಯಲ್ಲಿ ಸರಿಯಾದ ಸಾಕ್ಷಿಗಳು ಲಭ್ಯವಾಗದಿದ್ದರೆ. ವಾಯುನೆಲೆಗೆ 4 ಉಗ್ರರು ಮಾತ್ರ ನುಗ್ಗಿದ್ದರು ಎಂದು ತೀರ್ಮಾನಕ್ಕೆ ಎನ್ಐಎ ಬರಲಿದೆ.
ಜನವರಿ 1 ಮತ್ತು 2ರಂದು ಭಾರತ ಮತ್ತು ಪಾಕಿಸ್ತಾನದ ಗಡಿಭಾಗದಿಂದ ಕೇವಲ 40 ಕಿ.ಮೀ.ದೂರದಲ್ಲಿರುವ ಪಠಾಣ್ ಕೋಟ್ ವಾಯುನೆಲೆ ಮೇಲೆ ಉಗ್ರರ ದಾಳಿ ನಡೆದಿತ್ತು. ಇದು ದೇಶದ ಮಹತ್ವದ ಸೇನಾ ನೆಲೆಯಾಗಿದ್ದು, ವಾಯುಪಡೆಯ ಅತ್ಯುನ್ನತ ಯುದ್ಧ ವಿಮಾನಗಳು, ಹೆಲಿಕಾಪ್ಟರ್ಗಳು ಈ ವಾಯುನೆಲೆಯಲ್ಲಿವೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications