ಮಧುರೈ ರೈಲಿನಲ್ಲಿ ಬೆಂಕಿ ಅವಘಡ: 9 ಮಂದಿ ಉತ್ತರ ಪ್ರದೇಶದ ಪ್ರಯಾಣಿಕರ ಸಾವು!
ಮಧುರೈ, ಆಗಸ್ಟ್ 26: ಶನಿವಾರ ಬೆಳಗ್ಗೆ ಮಧುರೈ ರೈಲು ನಿಲ್ದಾಣದಲ್ಲಿ ಪ್ರವಾಸಿಗರ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಘಟನೆಯಲ್ಲಿ 9 ಪ್ರವಾಸಿಗರು ಸಾವನ್ನಪ್ಪಿ ಸುಮಾರು 20 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ.
ಬೆಳಗ್ಗೆ 5 ಗಂಟೆಗೆ ಬೆಂಕಿಹೊತ್ತಿಕೊಂಡಿದ್ದು, 7.15 ಕ್ಕೆ ಬೆಂಕಿಯನ್ನ ನಂದಿಸಲಾಗಿದೆ. ರೈಲಿನಲ್ಲಿ ಕೆಲವು ಪ್ರಯಾಣಿಕರು ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಗಳನ್ನು ಸಾಗಿಸುತ್ತಿದ್ದು, ಅದರಿಂದಾಗಿಯೇ ಅಗ್ನಿ ಅವಘಡ ನಡೆದಿದೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಮೃತ ಪಟ್ಟವರಲ್ಲಿ ಉತ್ತರ ಪ್ರದೇಶದ ಪ್ರವಾಸಿಗರೂ ಸೇರಿದ್ದಾರೆ ಎಂದು ತಿಳಿದು ಬಂದಿದೆ.

ಡಿವಿಜನಲ್ ರೈಲ್ವೇ ಮ್ಯಾನೇಜರ್ (ಮದುರೈ), ಮತ್ತು ಹೆಚ್ಚುವರಿ ವಿಭಾಗೀಯ ರೈಲ್ವೆ ಮ್ಯಾನೇಜರ್ (ADRM) ಈಗಾಗಲೇ ಸ್ಥಳದಲ್ಲಿದ್ದು, ಜನರಲ್ ಮ್ಯಾನೇಜರ್ (ದಕ್ಷಿಣ ರೈಲ್ವೆ) ಮತ್ತು ಇತರ ಹಿರಿಯ ಅಧಿಕಾರಿಗಳು ಚೆನ್ನೈನಿಂದ ಮಧುರೈಗೆ ಆಗಮಿಸಿದ್ದಾರೆ.
ರೈಲಿಗೆ ಬೆಂಕಿ ಹೊತ್ತಿಕೊಂಡು ಬಲಿಯಾದ ಉತ್ತರ ಪ್ರದೇಶ ಮೂಲದ 9 ಮಂದಿ ಪ್ರಯಾಣಿಕರ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಪರಿಹಾರವನ್ನು ದಕ್ಷಿಣ ರೈಲ್ವೆ ಘೋಷಣೆ ಮಾಡಿದೆ ಇನ್ನೂ ಘಟನೆಯಲ್ಲಿ ಗಾಯಗೊಂಡವರನ್ನು ಮಧುರೈನ ರಾಜಾಜಿ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ.
ಇನ್ನೂ ಬೆಂಕಿಯನ್ನು ಗಮನಿಸಿದ ಅನೇಕ ಪ್ರಯಾಣಿಕರು ಕೋಚ್ನಿಂದ ಹೊರ ಬಂದಿದ್ದಾರೆ. ಕೆಲವು ಪ್ರಯಾಣಿಕರು ಪ್ಲಾಟ್ಫಾರ್ಮ್ನಲ್ಲಿಯೇ ಇಳಿದಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಸಿದ್ದಾರೆ. ಘಟನೆ ನಡೆದ ಜಾಗವನ್ನು ಪರಿಶೋಧಿಸಲಾಗಿದ್ದು, ಅದರಲ್ಲಿ ಅಡುಗೆ ಸಿಲಿಂಡರ್, ಗ್ಯಾಸ್ ಸ್ಟೋವ್, ಆಲೂಗೆಡ್ಡೆ ಹಾಗೂ ಮುಂತಾದ ವಸ್ತುಗಳು ಕಂಡುಬಂದಿದೆ.
ಗ್ಯಾಸ್ ಸಿಲಿಂಡರ್ ಸೇರಿದಂತೆ ಯಾವುದೇ ಸ್ಫೋಟಕಗಳು ಹಾಗೂ ಇನ್ನಿತರ ಶೀಘ್ರ ದಹನಕಾರಿ ವಸ್ತುಗಳನ್ನು ರೈಲು ಬೋಗಿಗಳೊಳಗೆ ತರುವುದಕ್ಕೆ ನಿಷೇಧವಿದೆ. ಆದರೂ ರೈಲಿನಲ್ಲಿ ಎಲ್ ಪಿಡಿ ಸಿಲಿಂಡರ್ ಗಳನ್ನು ತಂದಿದ್ದಾರೂ ಹೇಗೆ ಎಂಬುದರ ಬಗ್ಗೆ ತನಿಖೆ ನಡೆಸಲು ರೈಲ್ವೆ ಇಲಾಖೆ ನಿರ್ಧರಿಸಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications