ಯುಕೆಯಿಂದ ನೀರವ್ ಮೋದಿ ಹಸ್ತಾಂತರಕ್ಕೆ ಮನವಿ ಸಲ್ಲಿಸಿದ ಭಾರತ
ಲಂಡನ್, ಆಗಸ್ಟ್ 03: ಸಾವಿರಾರು ಕೋಟಿ ಮೌಲ್ಯದ ಪಿಎನ್ ಬಿ ಹಗರಣದ ಪ್ರಮುಖ ಆರೋಪಿ ನೀರವ್ ಮೋದಿ ಅವರನ್ನು ಗಡೀಪಾರು ಮಾಡಿ, ಭಾರತಕ್ಕೆ ಹಸ್ತಾಂತರಿಸುವಂತೆ ಯುನೈಟೆಡ್ ಕಿಂಗ್ ಡಮ್ ಗೆ ಭಾರತದಿಂದ ಅಧಿಕೃತ ಮನವಿ ಸಲ್ಲಿಸಲಾಗಿದೆ.
ವಿಜಯ್ ಮಲ್ಯ, ನೀರವ್ ಮೋದಿ ಸೇರಿದಂತೆ 29ಕ್ಕೂ ಅಧಿಕ ಮಂದಿ ಅಪರಾಧ ಪ್ರಕರಣಗಳಿಂದ ತಪ್ಪಿಸಿಕೊಳ್ಳಲು ದೇಶದಿಂದ ಪರಾರಿಯಾಗಿದ್ದಾರೆ. ನೀರವ್ ಮೋದಿ ಅವರ ಹಸ್ತಾಂತರ ಕುರಿತಂತೆ ರಾಜತಾಂತ್ರಿಕ ಕಚೇರಿಗೆ ಅಧಿಕೃತವಾಗಿ ಮನವಿ ಪತ್ರ ನೀಡಲಾಗಿದೆ.

ಈ ಬಗ್ಗೆ ರಾಜ್ಯಸಭೆಯಲ್ಲಿ ಮಾಹಿತಿ ನೀಡಿದ ವಿದೇಶಾಂಗ ಖಾತೆ ರಾಜ್ಯ ಸಚಿವ ವಿಕೆ ಸಿಂಗ್, ನೀರವ್ ಮೋದಿ ವಿರುದ್ಧ ಇಂಟರ್ ಪೋಲ್ ನಿಂದ ಎರಡು ರೆಡ್ ಕಾರ್ನರ್ ನೋಟಿಸ್ ಜಾರಿಯಾಗಿದೆ ಎಂದರು.
2002ರಿಂದ ಇಲ್ಲಿ ತನಕ ಈ ರೀತಿ 29 ಬಾರಿ ಮನವಿ ಸಲ್ಲಿಸಲಾಗಿದ್ದು, ಯುಕೆ ಕೇವಲ 9 ಮನವಿಗಳನ್ನು ಮಾತ್ರ ತಿರಸ್ಕರಿಸಿದೆ. ಮೂರು ಪ್ರಕರಣಗಳಲ್ಲಿ ಆರೋಪಿಗಳಿಗೆ ಯುಕೆ ನ್ಯಾಯಾಲಯವು ಬಂಧನ ವಾರೆಂಟ್ ಜಾರಿಗೊಳಿಸಿಲ್ಲ.
ಮಲ್ಯ ಪ್ರಕರಣ ಸೇರಿ ಮಿಕ್ಕ 15 ಪ್ರಕರಣಗಳು ವಿಚಾರಣೆ ಹಂತದಲ್ಲಿವೆ. ಆದರೆ, ಕಳೆದ 16 ವರ್ಷಗಳಲ್ಲಿ ಸಮೀರ್ ಭಾಯಿ ವಿನುಭಾಯಿ ಪಟೇಲ್ ಅವರನ್ನು ಮಾತ್ರ ಯುಕೆಯಿಂದ ಭಾರತಕ್ಕೆ ಹಸ್ತಾಂತರಿಸಲಾಗಿದೆ.
ಜನವರಿ 01, 2018ರಂದು ಭಾರತ ತೊರೆದ ನೀರವ್ ಮೋದಿ ಸದ್ಯ ಲಂಡನ್ನಿನಲ್ಲಿರುವುದು ಖಾತ್ರಿಯಾಗಿದೆ. ಮತ್ತೊಬ್ಬ ಆರೋಪಿ ಮೆಹುಲ್ ಚೋಕ್ಸಿ ಅವರು ಜನವರಿ 04ರಂದು ಭಾರತ ತೊರೆದು ಆಂಟಿಗುವಾ ಸೇರಿದ್ದಾರೆ. ಆಂಟಿಗುವಾ ಹಾಗೂ ಬರ್ಬುಡಾದ ಪೌರವತ್ವವನ್ನು 2017ರಲ್ಲೇ ಪಡೆದುಕೊಂಡಿರುವುದಾಗಿ ಇತ್ತೀಚೆಗೆ ಪ್ರಕಟಿಸಿದ್ದಾರೆ. ಮೆಹುಲ್ ಚೋಕ್ಸಿ ಹಾಗೂ ನೀರವ್ ಮೋದಿ ಅವರ ಪಾಸ್ ಪೋರ್ಟ್ ಬಳಕೆಗೆ ವಿದೇಶಾಂಗ ಸಚಿವಾಲಯ ನಿರ್ಬಂಧ ಹೇರಿ ಫೆಬ್ರವರಿ 16,2018ರಲ್ಲಿ ಆದೇಶಿಸಿದೆ.
-
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ












Click it and Unblock the Notifications