ಕ್ಷಮಾದಾನ ಕೋರಿದ ನೀರವ್ ಮೋದಿಯ ತಂಗಿ ಮತ್ತು ಭಾವ: ಸಾಕ್ಷ್ಯ ಹೇಳಲು ಸಿದ್ಧ
ನವದೆಹಲಿ, ಜನವರಿ 6: ದೇಶಭ್ರಷ್ಟ ಆರ್ಥಿಕ ಅಪರಾಧಿಯಾಗಿರುವ ವಜ್ರಾಭರಣ ಮಾರಾಟಗಾರ ನೀರವ್ ಮೋದಿ ವಿರುದ್ಧ ಆತನ ತಂಗಿ ಮತ್ತು ಭಾವ ಸಾಕ್ಷ್ಯ ಹೇಳಲು ಮುಂದಾಗಿದ್ದಾರೆ. ಕ್ಷಮಾದಾನ ಕೋರಿ ಇಬ್ಬರೂ ಸಲ್ಲಿಸಿರುವ ಅರ್ಜಿಯನ್ನು ಸ್ವೀಕರಿಸಿರುವ ವಿಶೇಷ ನ್ಯಾಯಾಲಯವು, ಜಾರಿ ನಿರ್ದೇಶನದ ಮುಂದೆ ಅವರು ಎರಡು ಪ್ರಕರಣಗಳಲ್ಲಿ ಸಾಕ್ಷ್ಯ ಹೇಳಲು ಅವಕಾಶ ನೀಡಿದೆ.
ತಾವು ನೀರವ್ ಮೋದಿಯಿಂದ ಅಂತರ ಕಾಪಾಡಿಕೊಳ್ಳಲು ಬಯಸಿದ್ದು, ನೀರವ್ ಹಾಗೂ ಆತನ ಒಪ್ಪಂದಗಳಿಗೆ ಸಂಬಂಧಿಸಿದಂತೆ ಸಮರ್ಪಕ ಹಾಗೂ ಮಹತ್ವದ ಪುರಾವೆಗಳನ್ನು ಒದಗಿಸಲು ಸಿದ್ಧರಿರುವುದಾಗಿ ಪೂರ್ವಿ ಮೆಹ್ತಾ ಮತ್ತು ಆಕೆಯ ಪತಿ ಮಯಾಂಕ್ ಮೆಹ್ತಾ ಕಳೆದ ತಿಂಗಳು ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಬೆಲ್ಜಿಯಂ ಪ್ರಜೆಯಾಗಿರುವ ಪೂರ್ವಿ ಮತ್ತು ಬ್ರಿಟಿಷ್ ಪ್ರಜೆಯಾಗಿರುವ ಮಯಾಂಕ್ ಇಬ್ಬರೂ ನೀರವ್ ಮೋದಿಯ ಕ್ರಿಮಿನಲ್ ಚಟುವಟಿಕೆಗಳ ಆರೋಪದಿಂದಾಗಿ ತಮ್ಮ ವೈಯಕ್ತಿಕ ಮತ್ತು ವೃತ್ತಿಪರ ಬದುಕು ಸಂಕಷ್ಟಕ್ಕೆ ಸಿಲುಕಿದೆ ಎಂದು ಹೇಳಿದ್ದಾರೆ. ಜಾರಿ ನಿರ್ದೇಶನಾಲಯ ದಾಖಲಿಸಿರುವ ಎರಡು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಸಾಕ್ಷಿಗಳಾಗಿ ವಿಚಾರಣೆಗೆ ಒಳಪಡಲು ಸಿದ್ಧರಿರುವುದಾಗಿ ತಿಳಿಸಿದ್ದು, ನೀರವ್ ಹಾಗೂ ಇತರೆ ಆರೋಪಿಗಳ ವಿರುದ್ಧದ ನಿರ್ಣಾಯಕ ವಾಸ್ತವಗಳನ್ನು ಸಾಬೀತುಪಡಿಸಬಲ್ಲ ಮಾಹಿತಿಗಳನ್ನು ಬಹಿರಂಗಪಡಿಸುವುದಾಗಿ ಹೇಳಿದ್ದಾರೆ.

ನೀರವ್ ಹಾಗೂ ಇತರರು ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ 6,498.20 ಕೋಟಿ ರೂ ವಂಚಿಸಿದ ಆರೋಪದಡಿ ಸಿಬಿಐ ಹಾಗೂ ಇ.ಡಿಗಳಿಂದ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಸಿಬಿಐ ದಾಖಲಿಸಿರುವ ಪ್ರಕರಣಗಳಲ್ಲಿ ಪೂರ್ವಿ ಹಾಗೂ ಆಕೆಯ ಪತಿ ಮಯಾಂಕ್ ಹೆಸರನ್ನು ಉಲ್ಲೇಖಿಸಿಲ್ಲ. ಆದರೆ ಜಾರಿ ನಿರ್ದೇಶನಾಲಯವು ಇಬ್ಬರನ್ನೂ ಸಹ ಆರೋಪಿಗಳಾಗಿ ಗುರುತಿಸಿದೆ.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications