Timeline:ನಿರ್ಭಯಾ ಪ್ರಕರಣ ನಡೆದು ಬಂದ ಹಾದಿ
ನವದಹೆಲಿ, ಡಿಸೆಂಬರ್ 18: ಇಡೀ ಪ್ರಪಂಚದ ಗಮನ ಸೆಳೆದಿದ್ದ ನಿರ್ಭಯಾ ಪ್ರಕರಣದ ತೀರ್ಪುನ್ನು ಸುಪ್ರೀಂ ಕೋರ್ಟ್ ಪ್ರಕಟಿಸಿದ್ದು, ಪ್ರಕರಣದ ನಾಲ್ವರು ಆರೋಪಿಗಳಿಗೆ ಮರಣ ದಂಡನೆ ಕಾಯಂಗೊಳಿಸಿದೆ. ಅಕ್ಷಯ್ ಕುಮಾರ್ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.
2012ರ ಡಿಸೆಂಬರ್ ನಲ್ಲಿ ನಡೆದಿದ್ದ ಈ ಹೀನ, ಕುಕೃತ್ಯಕ್ಕೆ ಮೇ 5, 2014ರಂದು ಅಂತಿಮ ತೀರ್ಪು ಬಂದಿದೆ. ಸುಮಾರು ನಾಲ್ಕೂವರೆ ವರ್ಷಗಳವರೆಗೆ ನ್ಯಾಯಾಲಯದ ವಿಚಾರಣೆಗೆ ಒಳಪಟ್ಟಿದ್ದ ಈ ಪ್ರಕರಣದ ನಡೆದು ಬಂದ ಹಾದಿಯನ್ನು ಇಲ್ಲಿ ನೀಡಲಾಗಿದೆ.
ಅಕ್ಷಯ್ ಠಾಕೂರ್ ಅರ್ಜಿ ಸುಪ್ರೀಂನಿಂದ ವಜಾ; ಗಲ್ಲು ಶಿಕ್ಷೆ ಜಾರಿ
ಡಿ. 16, 2012 - ನಿರ್ಭಯಾ ಅಂದು ತನ್ನ ಭಾವಿ ಪತಿಯೊಂದಿಗೆ ಸಿನಿಮಾಕ್ಕೆ ತೆರಳಿ ಸಂಜೆ ಕತ್ತಲಾಗುವ ಹೊತ್ತಿಗೆ ಮನೆಗೆ ಮರಳುವ ವೇಳೆ ಖಾಸಗಿ ಬಸ್ ನಲ್ಲಿ ಆಕೆಯ ಮೇಲೆ ಅತ್ಯಾಚಾರವಾಗಿತ್ತು. ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾತ್ರವಲ್ಲ, ಮನುಷ್ಯತ್ವಕ್ಕೇ ಅಪಮಾನವಾಗುವಂಥ ರೀತಿಯಲ್ಲಿ ಆ ಯುವತಿಯ ಮೇಲೆ ಅತ್ಯಂತ ಕ್ರೂರವಾಗಿ, ಚಲಿಸುತ್ತಿದ್ದ ಬಸ್ ನಲ್ಲಿ ಅತ್ಯಾಚಾರ.
ಡಿ. 17, 2012 - ಮಾಧ್ಯಮಗಳಲ್ಲಿ ಈ ಸುದ್ದಿ ಕಾಳ್ಗಿಚ್ಚಿನಂತೆ ಹಬ್ಬಿದ ರಾಷ್ಟ್ರಾದ್ಯಂತ ಕೋಲಾಹಲ ಸೃಷ್ಟಿಯಾದ ಮೇಲೆ ಎಚ್ಚೆತ್ತ ದೆಹಲಿ ಪೊಲೀಸರಿಂದ, ಪ್ರಕರಣದ ತನಿಖೆ ನಡೆಸಿ, 17 ವರ್ಷದ ಓರ್ವ ಬಾಲಕ ಸೇರಿದಂತೆ ಆರು ಆರೋಪಿಗಳನ್ನು ಗುರುತು.[ನಿರ್ಭಯಾ ಅತ್ಯಾಚಾರಿಗಳನ್ನು ಗಲ್ಲಿಗೇರಿಸಿ ಎಂದ ಸುಪ್ರೀಂ ಕೋರ್ಟ್]
ಡಿ. 18, 2012 - ಒಬ್ಬ 17 ವರ್ಷದ ಹುಡುಗ ಸೇರಿದಂತೆ ಆರು ಆರೋಪಿಗಳ ಬಂಧನ. ಪ್ರಮುಖರು - ಅಕ್ಷಯ್, ರಾಮ್ ಸಿಂಗ್, ಮುಖೇಶ್, ವಿನಯ್ ಶರ್ಮಾ ಹಾಗೂ ಪವನ್ ಗುಪ್ತಾ.
ಡಿ. 29 , 2012 - ಹೆಚ್ಚಿನ ಚಿಕಿತ್ಸೆಗಾಗಿ ಸಿಂಗಾಪುರಕ್ಕೆ ರವಾನಿಸಲಾಗಿದ್ದ ನಿರ್ಭಯಾ ಅಲ್ಲೇ ಆಸ್ಪತ್ರೆಯಲ್ಲಿ ಸಾವು.
ಮಾ. 11, 2013 - ಪ್ರಕರಣದ ಪ್ರಮುಖ ಆರೋಪಿ ರಾಮ್ ಸಿಂಗ್, ತಿಹಾರ್ ಜೈಲಿನಲ್ಲಿ ಆತ್ಮಹತ್ಯೆಗೆ ಶರಣು.
ಆ. 31, 2013 - ಬಾಲಾಪರಾಧಿ ನ್ಯಾಯಾಧೀಕರಣ (ಜೆಜೆಬಿ), ಪ್ರಕರಣದ ಬಾಲಾಪರಾಧಿಗೆ ಮೊಹಮ್ಮದ್ ಅಫ್ರೋಜ್ ಗೆ ಮೂರು ವರ್ಷ ಶಿಕ್ಷೆ ವಿಧಿಸಿ ಆತನನ್ನು ಬಾಲ ಮಂದಿರಕ್ಕೆ ಕಳುಹಿಸಿತು.[ಜ್ಯೋತಿ ಅತ್ಯಾಚಾರಿಗಳನ್ನು ನೇಣಿಗೆ ಹಾಕಿ: ಟ್ವಿಟ್ಟಿಗರ ಆಜ್ಞೆ]
ಸೆ. 13, 2013 - ಒಬ್ಬ ಬಾಲಾಪರಾಧಿಯೆಂದು ಪರಿಗಣಿಸಲ್ಪಟ್ಟ, ಮತ್ತೊಬ್ಬ ಆತ್ಮಹತ್ಯೆ ಮಾಡಿಕೊಂಡ. ಹಾಗಾಗಿ, ಉಳಿದ ನಾಲ್ವರಿಗೆ ಮರಣ ದಂಡನೆ ಶಿಕ್ಷೆ ನೀಡಿದ ದೆಹಲಿಯ ಸಾಕೇತ್ ನ್ಯಾಯಾಲಯ. ನ್ಯಾಯಮೂರ್ತಿಗಳಾದ ರೇವಾ ಖೇತ್ರಪಾಲ್ ಹಾಗೂ ಪ್ರತಿಭಾ ರಾಣಿ ಅವರಿಂದ ತೀರ್ಪು ಪ್ರಕಟ.
ಮಾ. 15, 2014: ಕೆಳ ನ್ಯಾಯಾಲಯ ನೀಡಿದ್ದ ತೀರ್ಪಿಗೆ ತಡೆಯಾಜ್ಞೆ ನೀಡಿದ ಸುಪ್ರೀಂ ಕೋರ್ಟ್. ಪ್ರಕರಣದ ಸಾಕ್ಷಿಗಳ ಮರು ವಿಚಾರಣೆಗೆ ಇಂಗಿತ.
ಡಿ. 18, 2015 - ಬಾಲಾಪರಾಧಿಯನ್ನು ಬಿಡುಗಡೆ ಮಾಡಕೂಡದೆಂದು ಸಲ್ಲಿಸಲಾಗಿದ್ದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್. ಇದರ ಪರಿಣಾಮವಾಗಿ, ಬಾಲಾಪರಾಧಿ ಬಿಡುಗಡೆ.
ಏ. 3, 2016 - ಸುಪ್ರೀಂ ಕೋರ್ಟ್ ನಲ್ಲಿ ಪ್ರಕರಣದ ವಿಚಾರಣೆ ಆರಂಭ. ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ, ವಿ. ಗೋಪಾಲ ಗೌಡ ಹಾಗೂ ಕುರಿಯನ್ ಜೋಸೆಫ್ ಅವರುಳ್ಳ ಪೀಠದಿಂದ ವಿಚಾರಣೆ.
ಏ. 8, 2016 - ಹಿರಿಯ ವಕೀಲರಾದ ರಾಜು ರಾಮಚಂದ್ರನ್, ಸಂಜಯ್ ಹೆಗ್ಡೆ ಅವರು ಅಮಿಕಸ್ ಕ್ಯೂರಿಯಾಗಿ ನೇಮಕ.
ಜು. 11, 2016 - ನಿರ್ಭಯಾ ಪ್ರಕರಣದ ನ್ಯಾಯಪೀಠ ಬದಲಾವಣೆ. ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ, ಆರ್. ಬಾನುಮತಿ, ಅಶೋಕ್ ಭೂಷಣ್ ಅವರುಳ್ಳ ಹೊಸ ಸಮಿತಿ ನೇಮಕ.
ಸೆ. 2, 2016 - ಡಿಫೆನ್ಸ್ ಅಡ್ವೊಕೇಟ್ ಎಂ.ಎಲ್. ಶರ್ಮಾ ಅವರಿಂದ ಅಹವಾಲು ಸಲ್ಲಿಕೆ.
ಮಾ. 6, 2017 - ಆರೋಪಿಗಳಿಂದ ಹೆಚ್ಚುವರಿ ಅಫಿಡವಿಟ್ ಸಲ್ಲಿಕೆ.
ಮಾ. 27, 2017 - ವಿಚಾರಣೆ ಮುಕ್ತಾಯ. ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್.
ಏ. 5, 2017 - ಅಪರಾಧಿಗಳಿಗೆ ಮರಣ ದಂಡನೆ ಕಾಯಂಗೊಳಿಸಿದ ಸರ್ವೋಚ್ಛ ನ್ಯಾಯಾಲಯ.
ನಿರ್ಭಯಾ ಕೇಸ್ : 3 ಅಪರಾಧಿಗಳಿಗೆ ಗಲ್ಲು ಶಿಕ್ಷೆ ಖಾಯಂ, ಸುಪ್ರೀಂ ಆದೇಶ
ಜುಲೈ 09, 2018: ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಮೂವರು ಅಪರಾಧಿಗಳು ಸಲ್ಲಿಸಿರುವ ಪುನರ್ ಪರಿಶೀಲನಾ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟಿನ ತ್ರಿಸದಸ್ಯಪೀಠ. ಎಲ್ಲಾ ಅಪರಾಧಿಗಳಿಗೂ ಗಲ್ಲುಶಿಕ್ಷೆ ಖಾಯಂಗೊಳಿಸಲಾಗಿದೆ.
ಡಿಸೆಂಬರ್ 18, 2019: ಅಕ್ಷಯ್ ಕುಮಾರ್ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ಬುಧವಾರ(ಡಿಸೆಂಬರ್ 18) ತಿರಸ್ಕರಿಸಿದೆ. ಹೀಗಾಗಿ, ಪ್ರಕರಣದ ನಾಲ್ವರು ಆರೋಪಿಗಳಿಗೆ ಮರಣ ದಂಡನೆ ಕಾಯಂಗೊಂಡಿದೆ.