ಪ್ರಪ್ರಥಮ ಮಹಿಳಾ ರಕ್ಷಣಾ ಸಚಿವೆ: ಟ್ವಿಟ್ಟಿಗರು ಹೇಳೋದು ಹೀಗೆ..
ರಕ್ಷಣಾ ಸಚಿವೆಯಾಗಿ ನಿರ್ಮಲಾ ಸೀತಾರಾಮನ್ ಆಯ್ಕೆಯಾದ ನಂತರ #NirmalaSitharaman ಹ್ಯಾಷ್ ಟ್ಯಾಗ್ ಸಾಮಾಜಿಕ ತಾಣದಲ್ಲಿ ಟ್ರೆಂಡಿಂಗ್ ನಲ್ಲಿದೆ. ಪರ ವಿರೋಧ ಚರ್ಚೆಗಳು, ಕಾಲೆಳೆಯುವುದು ಯಥೇಚ್ಚವಾಗಿ ನಡಿಯುತ್ತಿದೆ. ಕೆಲವೊಂದು ಟ್ವೀಟ್ ಸ್ಯಾಂಪಲುಗ
ಚೀನಾದ ಜೊತೆ ದೋಕ್ಲಾಂ ಗಡಿಸಮಸ್ಯೆ ಬಗೆಹರಿದ ಬೆನ್ನಲ್ಲೇ ಆಯಕಟ್ಟಿನ ರಕ್ಷಣಾ ಖಾತೆಯನ್ನು ಅರುಣ್ ಜೇಟ್ಲಿ ಸುಪರ್ದಿಯಿಂದ ನಿರ್ಮಲಾ ಸೀತಾರಾಮನ್ ಅವರಿಗೆ ವಹಿಸಲಾಗಿದೆ.
ಆ ಮೂಲಕ ಮಹಿಳಾ ಸಬಲೀಕರಣದ ಬಗ್ಗೆ ವಿಶೇಷ ಒತ್ತು ನೀಡುತ್ತಿರುವ ಪ್ರಧಾನಿ ಮೋದಿ ತನ್ನ ಸರಕಾರದಲ್ಲಿ ಮೂರು ಪ್ರಮುಖ ಖಾತೆಯನ್ನು ಸುಷ್ಮಾ ಸ್ವರಾಜ್. ಸ್ಮೃತಿ ಇರಾನಿ ನಂತರ ನಿರ್ಮಲಾ ಸೀತಾರಾಮನ್ ಅವರಿಗೆ ನೀಡಿದ್ದಾರೆ.
ಕರ್ನಾಟಕದಲ್ಲಿ ಚುನಾವಣಾ ವರ್ಷವಾಗಿರುವುದರಿಂದಲೇ ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಮತ್ತು ಉತ್ತರ ಕನ್ನಡ ಕ್ಷೇತ್ರದ ಸಂಸದ ಅನಂತಕುಮಾರ್ ಹೆಗಡೆಗೆ ಸಂಪುಟದಲ್ಲಿ ಸ್ಥಾನ ನೀಡುವ ಮೂಲಕ ರಾಜ್ಯಕ್ಕೆ ವಿಶೇಷ ಒತ್ತು ನೀಡಲಾಗಿದೆ ಎಂದು ವ್ಯಾಖ್ಯಾನಿಸಲಾಗುತ್ತಿದೆ.
ಈ ಹಿಂದೆ ಪ್ರಧಾನಿಯಾಗಿದ್ದ ಇಂದಿರಾ ಗಾಂಧಿ, ರಕ್ಷಣಾ ಖಾತೆಯನ್ನು ತಮ್ಮಲ್ಲೇ ಇಟ್ಟುಕೊಂಡಿದ್ದನ್ನು ಬಿಟ್ಟರೆ ಪೂರ್ಣ ಪ್ರಮಾಣದಲ್ಲಿ ಮಹಿಳೆಯೊಬ್ಬರಿಗೆ ರಕ್ಷಣಾ ಖಾತೆ ನೀಡಿದ್ದು ಇದೇ ಮೊದಲು.
ರಕ್ಷಣಾ ಸಚಿವೆಯಾಗಿರುವ ನಿರ್ಮಲಾ ಸೀತಾರಾಮನ್ ಹ್ಯಾಷ್ ಟ್ಯಾಗ್ ಸಾಮಾಜಿಕ ತಾಣದಲ್ಲಿ ಟ್ರೆಂಡಿಂಗ್ ನಲ್ಲಿದೆ. ಪರ ವಿರೋಧ ಚರ್ಚೆಗಳು, ಕಾಲೆಳೆಯುವುದು ಯಥೇಚ್ಚವಾಗಿ ನಡಿಯುತ್ತಿದೆ. ಕೆಲವೊಂದು ಟ್ವೀಟ್ ಸ್ಯಾಂಪಲುಗಳು ಇಂತಿವೆ..
|
ಮೋದಿ ಸರಕಾರದಲ್ಲಿ ಮಹಿಳೆಯರಿಗೆ ಹೆಚ್ಚಿನ ಒತ್ತು
ಮೋದಿ ಸರಕಾರದಲ್ಲಿ ಮಹಿಳಾ ಸಬಲೀಕರಣ. ಸುಷ್ಮಾ ಸ್ವರಾಜ್, ಸ್ಮೃತಿ ಇರಾನಿ ನಂತರ ಈಗ ನಿರ್ಮಲಾ ಸೀತಾರಾಮನ್ ಎನ್ನುವ ಟ್ವೀಟ್.
|
ನಿರ್ಮಲಾ ಸೀತಾರಾಮನ್ ಗೆ ಹುದ್ದೆ ಲಭಿಸಿದ್ದು ಮೆರಿಟ್ ನಲ್ಲಿ
ಇಂದಿರಾ ಗಾಂಧಿಗೆ ಪ್ರಧಾನಿ ಹುದ್ದೆ ಲಭಿಸಿದ್ದು ನೆಹರೂ ಕುಟುಂಬದಿಂದಾಗಿ, ನಿರ್ಮಲಾ ಸೀತಾರಾಮನ್ ಗೆ ಹುದ್ದೆ ಲಭಿಸಿದ್ದು ಮೆರಿಟ್ ನಲ್ಲಿ.
|
ನಿರ್ಮಲಾ ಸೀತಾರಾಮನ್ ಸಾಧನೆಯ ಬಗೆಗಿನ ಒಂದು ಅಂಕಿಅಂಶ
ವಾಣಿಜ್ಯ ಸಚಿವೆಯಾಗಿದ್ದ ನಿರ್ಮಲಾ ಸೀತಾರಾಮನ್ ಅವರ ಸಾಧನೆಯ ಬಗೆಗಿನ ಒಂದು ಅಂಕಿಅಂಶ.
|
ನಿರ್ಮಲಾ ಆಯ್ಕೆಯಿಂದ ರಾಜಕೀಯ ಪಂಡಿತರ ಲೆಕ್ಕಾಚಾರ ಉಲ್ಟಾ
ನರೇಂದ್ರ ಮೋದಿ ಮತ್ತು ಅಮಿತ್ ಶಾ, ನಿರ್ಮಲಾ ಅವರನ್ನು ಆಯ್ಕೆಮಾಡಿ ಎಲ್ಲಾ ರಾಜಕೀಯ ಪಂಡಿತರ ಲೆಕ್ಕಾಚಾರ ಉಲ್ಟಾ ಮಾಡಿದ್ದಾರೆ.

ಯೋಧರು ಹುತಾತ್ಮರಾಗುತ್ತಿರುವುದಕ್ಕೆ ಪರಿಹಾರ ಕಂಡುಕೊಳ್ಳಲಿ
ಕಾಶ್ಮೀರ ಗಡಿಯಲ್ಲಿ ನಮ್ಮ ಯೋಧರು ಹುತಾತ್ಮರಾಗುತ್ತಿರುವುದಕ್ಕೆ ನಿರ್ಮಲಾ ಸೀತಾರಾಮನ್ ಪರಿಹಾರ ಕಂಡುಕೊಳ್ಳಬೇಕಾಗಿದೆ ಎನ್ನುವ ಟ್ವೀಟ್.
|
ಶಸ್ತ್ರಾಸ್ತ್ರ ಖರೀದಿ ಹಗರಣ ಮುಕ್ತವಾಗಿರಲಿ
ನಿರ್ಮಲಾ ಸೀತಾರಾಮನ್ ಅವರ ಪ್ರೊಫೈಲ್. ಶಸ್ತ್ರಾಸ್ತ್ರ ಖರೀದಿ, ಹಗರಣ ಮುಕ್ತವಾಗಿರಲಿ.
-
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!











Click it and Unblock the Notifications