ಬರಾಕ್ ಒಬಾಮಾ 6 ಮುಸ್ಲಿಂ ರಾಷ್ಟ್ರಗಳ ಮೇಲೆ ಬಾಂಬ್ ದಾಳಿ ಮಾಡಿಸಿದವರು ಎಂದಿದ್ದೇಕೆ ನಿರ್ಮಲಾ ಸೀತಾರಾಮನ್?
ನವದೆಹಲಿ, ಜೂನ್. 26 : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾನುವಾರ ಅಮೆರಿಕಾದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಭಾರತದಲ್ಲಿ ಮುಸ್ಲಿಮರನ್ನು ನಡೆಸಿಕೊಳ್ಳುತ್ತಿರುವ ಬಗ್ಗೆ ಮತ್ತು ಈ ವಿಷಯದ ಕುರಿತು ನೀಡಿದ ಉತ್ತರದ ಸುತ್ತಲಿನ ಪ್ರಶ್ನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಮರ್ಥಿಸಿಕೊಂಡಿದ್ದಾರೆ.
ಇದರ ಜೊತೆಗೆ ಅಮೆರಿಕಾದ ಮಾಜಿ ಅಧ್ಯಕ್ಷ ಬರಾಜ್ ಒಬಾಮ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬರಾಕ್ ಒಬಾಮಾ ಅವರ ಆಡಳಿತದಲ್ಲಿ ಯುಎಸ್ ಆರು ಮುಸ್ಲಿಂ ಬಹುಸಂಖ್ಯಾತ ರಾಷ್ಟ್ರಗಳ ಮೇಲೆ ಬಾಂಬ್ ದಾಳಿ ನಡೆಸಿದ್ದರಿಂದ ಭಾರತೀಯ ಮುಸ್ಲಿಮರ ಬಗ್ಗೆ ಹೇಳಿಕೆ ನೀಡುವುದನ್ನು ನಿರ್ಮಲಾ ಸೀತಾರಾಮನ್ ಪ್ರಶ್ನಿಸಿದ್ದಾರೆ.

"ಗೌರವಾನ್ವಿತ ಪ್ರಧಾನ ಮಂತ್ರಿಗಳು ಸ್ವತಃ ಅಮೆರಿಕಾದ ಪತ್ರಿಕಾಗೋಷ್ಠಿಯಲ್ಲಿ, ತಮ್ಮ ಸರ್ಕಾರವು 'ಸಬ್ಕಾ ಸಾಥ್, ಸಬ್ಕಾ ವಿಕಾಸ್' ತತ್ವದ ಮೇಲೆ ಹೇಗೆ ಕಾರ್ಯನಿರ್ವಹಿಸುತ್ತದೆ ಮತ್ತು ಯಾವುದೇ ಸಮುದಾಯದ ವಿರುದ್ಧ ತಾರತಮ್ಯ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು ಪ್ರಧಾನಿ ನರೇಂದ್ರ ಮೋದಿ ಅವರನ್ನು ಚುನಾವಣೆಯಲ್ಲಿ ಸೋಲಿಸಲು ಸಾಧ್ಯವಿಲ್ಲ ಎಂದು ತಿಳಿದಿದೆ. ಆದ್ದರಿಂದ ದೇಶದಲ್ಲಿ ಮತ್ತು ಪಾಶ್ಚಿಮಾತ್ಯ ದೇಶಗಳಲ್ಲಿ ಟೂಲ್ಕಿಟ್ಗಳ ಮೂಲಕ ಅಲ್ಪಸಂಖ್ಯಾತರಿಗೆ ಸಂಬಂಧಿಸಿದ ಪ್ರಚಾರಗಳನ್ನು ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.
ಒಂಬತ್ತು ವರ್ಷಗಳ ಆಡಳಿತದಲ್ಲಿ ಪ್ರಧಾನಿ ಮೋದಿ ಅವರು ಪಡೆದ 13 ಉನ್ನತ ಪ್ರಶಸ್ತಿಗಳಲ್ಲಿ ಆರು ಮುಸ್ಲಿಂ ಪ್ರಾಬಲ್ಯ ಹೊಂದಿರುವ ರಾಷ್ಟ್ರಗಳಿಂದ ನೀಡಲ್ಪಟ್ಟಿವೆ. ಅದರಲ್ಲಿ ಈಜಿಪ್ಟ್ ಇತ್ತೀಚಿನದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

"ಪ್ರಧಾನಿ ಅವರು ಅಮೆರಿಕಾದಲ್ಲಿದ್ದಾಗ ಭಾರತದ ಬಗ್ಗೆ ಮಾತನಾಡುವಾಗ, ಅಮೆರಿಕದ ಮಾಜಿ ಅಧ್ಯಕ್ಷರೊಬ್ಬರು ಭಾರತೀಯ ಮುಸ್ಲಿಮರ ಬಗ್ಗೆ ಹೇಳಿಕೆ ನೀಡಿರುವುದು ನನಗೆ ಆಶ್ಚರ್ಯ ತಂದಿದೆ. ಸಿರಿಯಾ, ಯೆಮೆನ್, ಸೌದಿ ಅರೇಬಿಯಾ ಮತ್ತು ಇರಾಕ್ ಸೇರಿದಂತೆ ಆರು ಮುಸ್ಲಿಂ ಪ್ರಾಬಲ್ಯದ ರಾಷ್ಟ್ರಗಳಲ್ಲಿ ಬಾಂಬ್ ದಾಳಿಗಳು ಅವರ ಆಡಳಿತದಲ್ಲಿ ಸಂಭವಿಸಿದವು. ಯುದ್ಧದಂತಹ ಪರಿಸ್ಥಿತಿಗಳು ಅಭಿವೃದ್ಧಿಗೊಂಡವು ಮತ್ತು 26,000 ಕ್ಕೂ ಹೆಚ್ಚು ಬಾಂಬ್ಗಳ ದಾಳಿ ನಡೆಸಲಾಯಿತು" ಎಂದಿದ್ದಾರೆ.
"ಅವರು ಭಾರತದ ಬಗ್ಗೆ ಆಧಾರರಹಿತ ಹೇಳಿಕೆಗಳನ್ನು ನೀಡಿದಾಗ, ಭಾರತೀಯರು ಅವರನ್ನು ಹೇಗೆ ನಂಬುತ್ತಾರೆ..? ಎಂದು ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಿರ್ಮಲಾ ಸೀತಾರಾಮನ್ ಪ್ರಶ್ನಿಸಿದ್ದಾರೆ. ವಿದೇಶ ಪ್ರವಾಸಗಳಲ್ಲಿ ವಿರೋಧ ಪಕ್ಷದ ನಾಯಕರು ಎಂದಿಗೂ ಭಾರತದ ಹಿತಾಸಕ್ತಿಯಲ್ಲಿ ಮಾತನಾಡುವುದಿಲ್ಲ ಮತ್ತು ಇತರರನ್ನು ತಮ್ಮ ಉದ್ದೇಶಗಳಿಗಾಗಿ ಬಳಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
"ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ರಾಜ್ಯ ಮಟ್ಟದಲ್ಲಿ ಪ್ರಸ್ತಾಪಿಸಬೇಕಾದ ಸಮಸ್ಯೆಗಳಿವೆ. ಅದನ್ನು ನೋಡಿಕೊಳ್ಳುವ ಜನರಿದ್ದಾರೆ. ಕೈಯಲ್ಲಿ ಮೂಲಭೂತ ಡೇಟಾ ಇಲ್ಲದೆ ಕೇವಲ ಆರೋಪ ಮಾಡುವುದು ಇವು ಸಂಘಟಿತ ಪ್ರಚಾರಗಳು ಎಂದು ನಮಗೆ ತಿಳಿಯುತ್ತಿದೆ" ಎಂದು ಬಿಜೆಪಿ ನಾಯಕಿ ಹೇಳಿದ್ದಾರೆ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications