ರಕ್ಷಣಾ ಸಚಿವೆಯಾಗಿ ಅಧಿಕಾರ ಸ್ವೀಕರಿಸಿದ ನಿರ್ಮಲಾ
ರಕ್ಷಣಾ ಸಚಿವೆಯಾಗಿ ನಿರ್ಮಲಾ ಸೀತಾರಾಮನ್ ಅಧಿಕಾರ ಸ್ವೀಕಾರ. ಇತ್ತೀಚೆಗೆ ನಡೆದಿದ್ದ ಕೇಂದ್ರ ಸಂಪುಟ ಪುನರಾಚನೆ ವೇಳೆ ರಕ್ಷಣಾ ಸಚಿವೆಯಾಗಿ ನೇಮಕಗೊಂಡಿದ್ದ ನಿರ್ಮಲಾ.
ನವದೆಹಲಿ, ಸೆಪ್ಟೆಂಬರ್ 7: ಇತ್ತೀಚೆಗಷ್ಟೇ, ರಕ್ಷಣಾ ಸಚಿವೆಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಕರ್ನಾಟಕದ ರಾಜ್ಯಸಭಾ ಸದಸ್ಯೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.
ರಕ್ಷಣಾ ಸಚಿವರ ಕಾರ್ಯಾಲಯದಲ್ಲಿರುವ ತಮ್ಮ ಕೊಠಡಿಯಲ್ಲಿ ನಡೆದ ಸರಳ ಪೂಜಾ ಸಮಾರಂಭದ ನಂತರ ಅವರು ಪದಗ್ರಹಣ ಮಾಡಿದರು. ಈ ಸಂದರ್ಭದಲ್ಲಿ ಪುರೋಹಿತರಿಂದ ಅವರು ಆಶೀರ್ವಾದ ಪಡೆದರು. ಈ ಮೊದಲು ಕೈಗಾರಿಕಾ ಇಲಾಖೆಯ ರಾಜ್ಯ ಸಚಿವರಾಗಿದ್ದ ನಿರ್ಮಲಾ ಅವರಿಗೆ ಇತ್ತೀಚೆಗೆ ನಡೆದ ಮೋದಿ ಅವರ ಸಂಪುಟ ಪುನರಾಚನೆ ವೇಳೆ ಕ್ಯಾಬಿನೆಟ್ ದರ್ಜೆ ನೀಡಿ, ಅವರನ್ನು ರಕ್ಷಣಾ ಇಲಾಖೆಯ ಸಚಿವೆಯನ್ನಾಗಿ ನೇಮಿಸಲಾಗಿತ್ತು.
ಸೆಪ್ಟೆಂಬರ್ 2ರಂದು ನಡೆದಿದ್ದ ನೂತನ ಸಚಿವರ ಪ್ರಮಾಣ ವಚನ ನಡೆದಿತ್ತು. ಅದರ ಮರುದಿನವೇ ಅವರು ಪದಗ್ರಹಣ ಗ್ರಹಣ ಮಾಡಬೇಕಿತ್ತಾದರೂ, ಆ ವೇಳೆ ರಕ್ಷಣಾ ಸಚಿವರಾಗಿದ್ದ ಅರುಣ್ ಜೇಟ್ಲಿ ಅವರು ಜಪಾನ್ ಪ್ರವಾಸದಲ್ಲಿದ್ದರು. ಹೀಗಾಗಿ, ಅವರು ಹಿಂದಿರುಗಿ ಅಧಿಕಾರ ಹಸ್ತಾಂತರದ ಪ್ರಕ್ರಿಯೆ ನಡೆಸಿಕೊಡುವವರೆಗೂ ನಿರ್ಮಲಾ ಸೀತಾರಾಮನ್ ಅವರು ಕಾಯಬೇಕಾಯಿತು.

ಮೊದಲ ಹೇಳಿಕೆ
ಗುರುವಾರ (ಸೆಪ್ಟೆಂಬರ್ 7) ಅಧಿಕಾರ ಸ್ವೀಕರಿಸಿದ ನಂತರ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮನ್ನು ಇಂಥ ಮಹತ್ವದ ಹುದ್ದೆಗೆ ಆಯ್ಕೆ ಮಾಡಿದ ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ ಅರ್ಪಿಸಿದರು.

ಸೇನೆ ಸಬಲತೆಗೆ ನಿರ್ಧಾರ
ಪ್ರಧಾನಿಯವರು ವಹಿಸಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವುದಾಗಿ ತಿಳಿಸಿದ ಅವರು, ತಮ್ಮ ಮೊದಲ ಆದ್ಯತೆಯು ಸೇನೆಯನ್ನು ಬಲಪಡಿಸುವುದೇ ಆಗಿದೆ ಎಂದರು.

ಪಾರಿಕ್ಕರ್ ರಾಜಿನಾಮೆಯಿಂದ ತೆರವಾಗಿದ್ದ ಸ್ಥಾನ
ಮನೋಹರ್ ಪಾರಿಕ್ಕರ್ ಅವರು ಗೋವಾ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ, ಅವರು ನಿಭಾಯಿಸುತ್ತಿದ್ದ ರಕ್ಷಣಾ ಇಲಾಖೆಯು ಅರುಣ್ ಜೇಟ್ಲಿ ಅವರ ಪಾಲಾಗಿತ್ತು.

ಮೊದಲ ಪೂರ್ಣ ಪ್ರಮಾಣದ ರಕ್ಷಣಾ ಸಚಿವೆ
ನಿರ್ಮಲಾ ಸೀತಾರಾಮನ್ ಅವರು ದೇಶದ ಮೊದಲ ಪೂರ್ಣ ಪ್ರಮಾಣದ ಮಹಿಳಾ ರಕ್ಷಣಾ ಸಚಿವೆ ಎಂಬ ಹೆಗ್ಗಳಿಕೆ ಪಡೆದಿದ್ದಾರೆ. ಈ ಹಿಂದೆ, ಇಂದಿರಾ ಗಾಂಧಿಯವರು ರಕ್ಷಣಾ ಇಲಾಖೆಯನ್ನು ನಿಭಾಯಿಸಿದ್ದರೂ ಅದು ಅವರಿಗೆ ಹೆಚ್ಚುವರಿ ಜವಾಬ್ದಾರಿಯಾಗಿತ್ತು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications