'ನಿಸರ್ಗ' ಚಂಡಮಾರುತ; ರೈಲುಗಳ ವೇಳಾಪಟ್ಟಿ ಬದಲು

ಬೆಂಗಳೂರು, ಜೂನ್ 03 : ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ 'ನಿಸರ್ಗ' ಚಂಡಮಾರುತದ ಪರಿಣಾಮ ಹಲವು ರೈಲುಗಳ ಮಾರ್ಗವನ್ನು ಬದಲಾವಣೆ ಮಾಡಲಾಗಿದೆ. ನಾಲ್ಕು ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ.

Recommended Video

      Good news to all you beer fans of Karnataka | Brewery | Oneindia kannada

      ಮಹಾರಾಷ್ಟ್ರ, ಕರ್ನಾಟಕ, ಗುಜರಾತ್ ಮತ್ತು ಗೋವಾ ರಾಜ್ಯದಲ್ಲಿ ಚಂಡಮಾರುತದ ಪ್ರಭಾವದಿಂದ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಆದ್ದರಿಂದ ಕೆಲವು ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ.

      ಜೂನ್ 2 ಮತ್ತು 3ರಂದು ಕೊಂಕಣ ಮಾರ್ಗದಲ್ಲಿ ಸಂಚಾರ ನಡೆಸುವ ವಿಶೇಷ ರೈಲುಗಳ ಮಾರ್ಗವನ್ನು ಬದಲಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಲಾಕ್ ಡೌನ್ ಪರಿಣಾಮ ವಿಶೇಷ ರೈಲುಗಳು ಮಾತ್ರ ಸಂಚಾರ ನಡೆಸುತ್ತಿವೆ.

      Nisarga Cyclone Some Trains Diverted

      ರೈಲುಗಳ ವಿವರ

      * ಎರ್ನಾಕುಲಂ- ಎಚ್. ನಿಜಾಮುದ್ದೀನ್ (20617) ವಿಶೇಷ ರೈಲು ಮಡಗಾಂ ಜಂಕ್ಷನ್‌ನಿಂದ ಲೋಂಡಾ-ಮೀರಜ್-ಪುಣೆ-ಮನ್ಮಾದ್ ಮಾರ್ಗವಾಗಿ ಚಲಿಸಲಿದೆ.

      * ತಿರುವನಂತಪುರ ಸೆಂಟ್ರಲ್-ಲೋಕಮಾನ್ಯ ತಿಲಕ್ ಟರ್ಮಿನಸ್ (06346) ರೈಲು ಮಡಗಾಂವ್ ಜಂಕ್ಷನ್‌ನಿಂದ ಲೋಂಡಾ-ಮೀರಜ್-ಪುಣೆ-ಕಲ್ಯಾಣ್ ಮೂಲಕ ಸಾಗಲಿದೆ.

      * ನವದೆಹಲಿ-ತಿರುವನಂತಪುರ (02432) ರೈಲು ಸೂರತ್-ವಸೈ ರೋಡ್-ಕಲ್ಯಾಣ್-ಮೀರಜ್-ಲೋಂಡಾ-ಮಡಗಾಂವ್ ಜಂಕ್ಷನ್ ಮೂಲಕ ಸಂಚಾರ ನಡೆಸಲಿದೆ.

      * ಲೋಕಮಾನ್ಯ ತಿಲಕ್ (ಟಿ)-ತಿರುವನಂತಪುರ ಸೆಂಟ್ರಲ್ (06345) ವಿಶೇಷ ರೈಲು ಸಂಜೆ 6 ಗಂಟೆಗೆ ಪ್ರಯಾಣ ಆರಂಭಿಸಲಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+