ದೇಶದಲ್ಲಿ ಬೂಸ್ಟರ್ ಡೋಸ್ ನೀಡುವ ಕುರಿತು ಚಿಂತನೆ ಇಲ್ಲ: ನೀತಿ ಆಯೋಗ
ನವದೆಹಲಿ, ಅಕ್ಟೋಬರ್ 14: ಪ್ರಸ್ತುತ ಸ್ಥಿತಿಯಲ್ಲಿ ದೇಶದಲ್ಲಿ ಕೊರೊನಾ ಸೋಂಕಿಗೆ ಬೂಸ್ಟರ್ ಡೋಸ್ ನೀಡುವ ಕುರಿತು ಚಿಂತನೆ ನಡೆಸಿಲ್ಲ ಎಂದು ನೀತಿ ಆಯೋಗ ಸ್ಪಷ್ಟಪಡಿಸಿದೆ.
ಈ ಕುರಿತು ಸರ್ಕಾರದ ಮುಖ್ಯ ಕೋವಿಡ್ 19 ಸಲಹೆಗಾರ ವಿಕೆ ಪೌಲ್ ಮಾತನಾಡಿ, ಭಾರತವು 100 ಕೋಟಿ ಲಸಿಕೆಯನ್ನು ನೀಡುವ ಗುರಿಯತ್ತ ಸಾಗುತ್ತಿದೆ. ಲಸಿಕೆ ಉತ್ಪಾದನೆಯೂ ಕೂಡ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ, ಈ ಕಾರಣದಿಂದಾಗಿ ಬೂಸ್ಟರ್ ಡೋಸ್ ನೀಡುವ ಕುರಿತು ಯಾವುದೇ ಆಲೋಚನೆ ಮಾಡಿಲ್ಲ ಎಂದು ಹೇಳಿದ್ದಾರೆ.
ಈಗಾಗಲೇ ಜಾಗತಿಕವಾಗಿ ಇಸ್ರೇಲ್ , ಇಟಲಿ, ಫ್ರಾನ್ಸ್ ಹಾಗೂ ಜರ್ಮನಿ ಸಹಿತ 15ಕ್ಕೂ ಹೆಚ್ಚು ರಾಷ್ಟ್ರಗಳು ಹಿರಿಯ ನಾಗರಿಕರಿಗೆ ಕೊರೊನಾ ತಡೆಗೆ ಮೂರನೇ ಡೋಸ್ ಲಸಿಕೆ ನೀಡಲು ಆರಂಭಿಸಿದೆ.

ಆದರೆ ವಿಶ್ವ ಆರೋಗ್ಯ ಸಂಸ್ಥೆಯ ಸೂಚನೆ ಪ್ರಕಾರ, ಮೂರನೇ ಡೋಸ್ ಲಸಿಕೆ ನೀಡುವ ಕುರಿತಂತೆ ಯಾವುದೇ ಸ್ಪಷ್ಟ ಅಧಿಸೂಚನೆ ಲಭ್ಯವಾಗಿಲ್ಲ. ಹೀಗಾಗಿ ದೇಶದಲ್ಲಿ ಬೂಸ್ಟರ್ ಡೋಸ್ ಲಸಿಕೆ ನೀಡುವ ಕುರಿತು ಯೋಜನೆ ರೂಪಿಸಿಲ್ಲ ಎಂದು ತಿಳಿಸಿದ್ದಾರೆ.
ಈಗ ದೇಶಕ್ಕೆ ಅಗತ್ಯವಿರುವ ಪ್ರಮಾಣದಲ್ಲಿ ಲಸಿಕೆ ಉತ್ಪಾದನೆಯಾಗುತ್ತಿದ್ದು, ಇಲ್ಲಿ ಬಳಕೆಗೆ ಲಭ್ಯವಾದ ಬಳಿಕ ಮುಂದಿನ ವರ್ಷದಿಂದ ರಫ್ತು ಮಾಡುವ ಗುರಿ ಇದೆ ಎಂದು ತಿಳಿಸಿದ್ದಾರೆ.
ಕೋವಿಡ್ -19 ಬೂಸ್ಟರ್ ಡೋಸ್ ನೀಡುವ ಬಗ್ಗೆ ಕೇಂದ್ರ ಸರ್ಕಾರ ವೈಜ್ಞಾನಿಕ ಮತ್ತು ಆರೋಗ್ಯದ ದೃಷ್ಟಿಯಿಂದ ಯಾವುದೇ ಚಿಂತನೆ ನಡೆಸಿಲ್ಲ. ಪ್ರಸ್ತುತ 2 ಡೋಸ್ ಲಸಿಕೆ ನೀಡುವುದೇ ನಮ್ಮ ಮುಂದಿರುವ ಆದ್ಯತೆ ಎಂದು ಐಸಿಎಂಆರ್ ಮಹಾನಿರ್ದೇಶಕ ಬಲರಾಮ್ ಭಾರ್ಗವ್ ಕೂಡ ತಿಳಿಸಿದ್ದರು.
ಎರಡೂ ಡೋಸ್ಗಳನ್ನು ನೀಡುವುದು ಅತ್ಯಗತ್ಯ. ಅದರಲ್ಲಿ ಯಾವುದೇ ಬದಲಾವಣೆ ಇಲ್ಲ. ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಈ ಸಮಯದಲ್ಲಿ ಬೂಸ್ಟರ್ ಡೋಸ್ ನೀಡುವುದು ಕೇಂದ್ರದ ವಿಷಯವಲ್ಲ ಎಂಬುದನ್ನು ನಾವು ಸ್ಪಷ್ಟಪಡಿಸುತ್ತೇನೆ ಎಂದು ಭಾರ್ಗವ್ ಹೇಳಿದ್ದರು.
ಪ್ರತಿಕಾಯಗಳ ಮಟ್ಟವನ್ನು ಅಳೆಯಬಾರದು ಎಂದು ಹಲವಾರು ಏಜೆನ್ಸಿಗಳು ಶಿಫಾರಸು ಮಾಡಿವೆ. ಆದರೆ ಮುಖ್ಯವಾದ ತಿಳುವಳಿಕೆಯೆಂದರೆ ಎರಡೂ ಡೋಸ್ಗಳಿಗೆ ಸಂಪೂರ್ಣ ವ್ಯಾಕ್ಸಿನೇಷನ್ ಮಾಡುವುದು ಅತ್ಯಗತ್ಯ. ಅದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕೂಡ ತಿಳಿಸಿದ್ದರು.
ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು, ಭಾರತದ ವಯಸ್ಕ ಜನಸಂಖ್ಯೆಯ ಶೇ. 20ರಷ್ಟು ಜನರು ಕೋವಿಡ್ -19 ಲಸಿಕೆಯ ಎರಡು ಡೋಸ್ ಪಡೆದಿದ್ದಾರೆ. ಇನ್ನು ಶೇ. 62ರಷ್ಟು ಜನರು ಕನಿಷ್ಠ ಒಂದು ಡೋಸ್ ಪಡೆದಿದ್ದಾರೆ. ಅಲ್ಲದೆ, 99 ಪ್ರತಿಶತ ಆರೋಗ್ಯ ಕಾರ್ಯಕರ್ತರು ಮೊದಲ ಡೋಸ್ ಪಡೆದಿದ್ದಾರೆ. 82 ಪ್ರತಿಶತ ಅರ್ಹ ಆರೋಗ್ಯ ಕಾರ್ಯಕರ್ತರು ಎರಡನೇ ಡೋಸ್ ತೆಗೆದುಕೊಂಡಿದ್ದಾರೆ
ಕೊರೊನಾ ವೈರಸ್ನ ಹೆಚ್ಚುತ್ತಿರುವ ಭೀತಿಯ ನಡುವೆ, ಅನೇಕ ದೇಶಗಳು ಕೋವಿಡ್ ಲಸಿಕೆಯ ಮೂರನೇ ಬೂಸ್ಟರ್ ಡೋಸ್ ಅನ್ನು ಅನುಮೋದಿಸಲು ಆರಂಭಿಸಿವೆ. ಭಾರತದಲ್ಲಿ ಇದುವರೆಗೆ ಈ ವಿಷಯದಲ್ಲಿ ಯಾವುದೇ ಘೋಷಣೆಯನ್ನು ಮಾಡಿಲ್ಲ. ಆದಾಗ್ಯೂ, ಪುಣೆಯ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ (SII) ಅಧ್ಯಕ್ಷ ಸೈರಸ್ ಪೂನವಲ್ಲ , ಕೋವಿಡ್ -19 ಲಸಿಕೆಯ ಮೂರನೇ ಡೋಸ್ ಅನ್ನು 6 ತಿಂಗಳ ನಂತರ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ. ಕೋವಿಶೀಲ್ಡ್ ಲಸಿಕೆಯ 2 ಡೋಸ್ಗಳ ನಡುವಿನ ಸೂಕ್ತ ಮಧ್ಯಂತರವು 2 ತಿಂಗಳುಗಳು ಎಂದು ಹೇಳಲಾಗಿದೆ.
ದಿ ಲ್ಯಾನ್ಸೆಟ್ನಲ್ಲಿ ಪ್ರಕಟವಾದ ವರದಿಯಲ್ಲಿ, ಸ್ವಲ್ಪ ಸಮಯದ ನಂತರ ಕೋವಿಡ್ಶೀಲ್ಡ್ನ ಪ್ರತಿಕಾಯಗಳು ಕೋವಿಡ್ ವಿರುದ್ಧ ಕಡಿಮೆಯಾಗುತ್ತವೆ ಎಂದು ಹೇಳಲಾಗಿದೆ. ಈ ಬಗ್ಗೆ ಸೈರಸ್ ಪೂನಾವಾಲಾ ಅವರನ್ನು ಕೇಳಿದಾಗ, 'ಇದು ನಿಜ, ಆದರೆ ನೆನಪಿನ ಕೋಶಗಳು ಇರುತ್ತವೆ' ಎಂದು ಹೇಳಿದರು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications