Nitin Gadkari: ಚುನಾವಣಾ ಪ್ರಚಾರದಲ್ಲಿದ್ದ 'ನಿತಿನ್ ಗಡ್ಕರಿ' ಆರೋಗ್ಯದಲ್ಲಿ ಏರುಪೇರು
ಮುಂಬೈ, ಏಪ್ರಿಲ್ 24: ಅಧಿಕ ತಾಪಮಾನವಿರುವ ಮಹಾರಾಷ್ಟ್ರದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ವೇದಿಕೆ ಮೇಲೆ ಭಾಷಣ ಮಾಡುವಾಗಲೇ ಆರೋಗ್ಯದಲ್ಲಿ ಏರುಪೇರಾದ ಘಟನೆ ಬುಧವಾರ ನಡೆದಿದೆ.
ದೇಶದ ಅನೇಕ ಕಡೆಗಳಲ್ಲಿ ಇನ್ನೂ ಬಿಸಿಲಿನ ವಾತಾವರಣ ಇದ್ದು, ಮಹಾರಾಷ್ಟ್ರ ಇದಕ್ಕೆ ಹೊರತಾಗಿಲ್ಲ. ಮಹಾರಾಷ್ಟ್ರದ ಯವತ್ಮಾಲ್ನಲ್ಲಿ ಚುನಾವಣಾ ಪ್ರಚಾರದ ವೇಳೆ ನಿತಿನ್ ಗಡ್ಕರಿ ಅವರ ಆರೋಗ್ಯದಲ್ಲಿ ತೊಂದರೆ ಆಗಿದೆ. ಹೀಗಾಗಿ ಅವರು ವೇದಿಕೆ ಮೇಲೆ ಅಸ್ವಸ್ಥರಾದರು.

ಕೂಡಲೇ ವೇದಿಕೆ ಮೇಲಿದ್ದ ಕೇಂದ್ರ ಸಚಿವರ ಅಂಗ ರಕ್ಷಕರು, ಬಿಜೆಪಿ ಮುಖಂಡರು, ಸಿಬ್ಬಂದಿ ಅವರನ್ನು ಕೆಳಗೆ ಬೀಳದಂತೆ ಹಿಡಿದುಕೊಂಡು ಸುರಕ್ಷಿತವಾಗಿ ಕೂರಿಸಿದ್ದಾರೆ. ಮಹಾರಾಷ್ಟ್ರದಲ್ಲಿನ ವಿಪರೀತ ಸೆಕೆಯಿಂದ ನಿತಿನ್ ಗಡ್ಕರಿಗೆ ಹೀಗೆ ತೊಂದರೆ ಆಗಿದೆ. ಕೆಲ ಹೊತ್ತು ವಿಶ್ರಾಂತಿ ಪಡೆದ ಬಳಿಕ ಅವರು ಈಗ ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ.
2018 ರಲ್ಲೂ ಹೀಗೆಯೇ ಆಗಿತ್ತು
ಈ ಹಿಂದೆ (2018 ರಲ್ಲಿ) ಅಹ್ಮದ್ನಗರದಲ್ಲಿ ಕಾರ್ಯಕ್ರಮದಲ್ಲಿ ವೇದಿಕೆಯ ಮೇಲೆ ಭಾಷಣ ಮಾಡುವಾಗಲೂ ನಿತಿನ್ ಗಡ್ಕರಿ ಅವರು ಮೂರ್ಛೆ ಬಿದ್ದು, ಅನಾರೋಗ್ಯ ಸಮಸ್ಯೆ ಎದುರಿಸಿದ್ದರು. ಅವರ ರಕ್ತದಲ್ಲಿನ ಸಕ್ಕರೆ ಇಳಿಕೆ ಆಗಿತ್ತು. ಹೀಗಾಗಿ ಅವರು ತಲೆ ತಿರುಗಿ ಅಸ್ವಸ್ಥರಾಗಿದ್ದರು.
ತೂಕ ಹೆಚ್ಚಿರುವ ಅವರು, ಆ ಸಮಸ್ಯೆಯಿಂದ ಪರಿಹರಿಸಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಗಡ್ಕರಿ ಅವರು ನಾಗ್ಪುರದಿಂದ ಮೂರನೇ ಬಾರಿಗೆ ಆಯ್ಕೆಯಾಗಿದ್ದಾರೆ. ನಾಗ್ಪುರ ಲೋಕಸಭಾ ಕ್ಷೇತ್ರದ ಆಡಳಿತಾರೂಢ ಬಿಜೆಪಿ ಅಭ್ಯರ್ಥಿ ಗಡ್ಕರಿ ಅವರು ಚುನಾವಣೆಯಲ್ಲಿ ಭಾರಿ ಅಂತರದಿಂದ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಾಗ್ಪುರದಿಂದ ಸಂಸತ್ತಿಗೆ ಮೂರನೇ ಬಾರಿಗೆ ಸ್ಪರ್ಧಿಸುತ್ತಿರುವ ಹಿರಿಯ ಬಿಜೆಪಿ ನಾಯಕ, ಪಕ್ಷದ ಕಾರ್ಯಕರ್ತರ ಬೆಂಬಲಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದರು. ನಾಗ್ಪುರ ಕ್ಷೇತ್ರಕ್ಕೆ ಏಪ್ರಿಲ್ 19 ರಂದು ಮತದಾನ ನಡೆಯಿತು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications