ಖಾಸಗಿ ಕಂಪೆನಿಗಳಿಗೆ ವಾಹನ ದತ್ತಾಂಶ ನೀಡಿ 100 ಕೋಟಿ ರೂ ಸಂಗ್ರಹ: ನಿತಿನ್ ಗಡ್ಕರಿ
ನವದೆಹಲಿ, ಫೆಬ್ರವರಿ 12: ವಾಹನಗಳ ದತ್ತಾಂಶಗಳನ್ನು ದಾಖಲಿಸುವ ಸರ್ಕಾರದ ಪ್ಲಾಟ್ಫಾರ್ಮ್ಗಳಾದ ವಾಹನ್ ಮತ್ತು ಸಾರಥಿ ಡೇಟಾಬೇಸ್ಗಳಿಗೆ ಖಾಸಗಿ ಕಂಪೆನಿಗಳಿಗೆ ಪ್ರವೇಶ ಕಲ್ಪಿಸುವ ಮೂಲಕ ಕೇಂದ್ರ ಸರ್ಕಾರವು 100 ಕೋಟಿ ರೂ ಸಂಪಾದಿಸಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸಂಸತ್ಗೆ ಗುರುವಾರ ತಿಳಿಸಿದ್ದಾರೆ.
ಲೋಕಸಭೆಗೆ ಲಿಖಿತ ಪ್ರತಿಕ್ರಿಯೆ ನೀಡಿರುವ ಗಡ್ಕರಿ, ವಾಹನ್ ಮತ್ತು ಸಾರಥಿ ಡೇಟಾಬೇಸ್ಗೆ ಪ್ರವೇಶಾವಕಾಶ ಕಲ್ಪಿಸುವ ಮೂಲಕ ಸರ್ಕಾರವು 1,11,38,757 ರೂಪಾಯಿ ಆದಾಯ ಸಂಗ್ರಹಿಸಿದೆ ಎಂದು ಹೇಳಿದ್ದಾರೆ. ದತ್ತಾಂಶಗಳನ್ನು ಗೃಹ ಸಚಿವಾಲಯ, ಕಾನೂನು ಜಾರಿ ಸಂಸ್ಥೆಗಳು ಹಾಗೂ ವಿಮೆ, ಆಟೊಮೊಬೈಲ್ ಮತ್ತು ಸರಕು ಕಂಪೆನಿಗಳೊಂದಿಗೆ ಹಂಚಿಕೊಳ್ಳಲಾಗಿದೆ.
ಮರ್ಸಿಡೆಸ್ ಬೆಂಜ್, ಬಿಎಂಡಬ್ಲ್ಯೂ, ಬಜಾಜ್ ಅಲೈಯನ್ಸ್ ಜನರಲ್ ಇನ್ಶೂರೆನ್ಸ್, ಆಕ್ಸಿಸ್ ಬ್ಯಾಂಕ್ ಮತ್ತು ಎಲ್&ಟಿ ಫೈನಾನ್ಶಿಯಲ್ ಸರ್ವಿಸಸ್ ಹಾಗೂ ಇತರೆ ಕಂಪೆನಿಗಳಿಗೆ ಎರಡೂ ವೆಬ್ಸೈಟ್ಗಳಲ್ಲಿನ ದತ್ತಾಂಶಗಳನ್ನು ಪಡೆದುಕೊಳ್ಳಲು ಅವಕಾಶ ನೀಡಲಾಗಿದೆ.

ದೇಶದಲ್ಲಿ ನೋಂದಣಿಯಾದ ವಾಹನಗಳು ಮತ್ತು ಚಾಲನಾ ಪರವಾನಗಿ ವಿವರಗಳನ್ನು ಅಳವಡಿಸಲು ಇರುವ ವಾಹನ್ ಹಾಗೂ ಸಾರಥಿ ಡೇಟಾಬೇಸ್ಗಳಲ್ಲಿನ ಬೃಹತ್ ದತ್ತಾಂಶಗಳನ್ನು ಹಂಚಿಕೊಳ್ಳುವ ನೀತಿಯನ್ನು ಸಾರಿಗೆ ಸಚಿವಾಲಯ 2019ರಲ್ಲಿ ರದ್ದುಗೊಳಿಸಿತ್ತು. ವೈಯಕ್ತಿಕ ವಿವರಗಳು ಮತ್ತು ಖಾಸಗಿತನದ ದುರ್ಬಳಕೆಯ ಸಾಧ್ಯತೆಯ ಕಾರಣ 2020ರ ಜೂನ್ನಲ್ಲಿ ಸಚಿವಾಲಯವು ಹಳೆಯ ನೀತಿಯನ್ನು ತೆಗೆದುಹಾಕಿತ್ತು.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications