Get Updates
Get notified of breaking news, exclusive insights, and must-see stories!

ಒಳ್ಳೆಯ ಕೆಲಸ ಮಾಡುವ ವ್ಯಕ್ತಿಗೆ ಗೌರವ ಸಿಗುವುದಿಲ್ಲ: ಕೇಂದ್ರ ಸಚಿವ ನಿತಿನ್ ಗಡ್ಕರಿ ಬೇಸರ

ಅವಕಾಶವಾದಿ ರಾಜಕಾರಣಿಗಳು ಇಂದಿನ ಆಡಳಿತ ಪಕ್ಷದೊಂದಿಗೆ ಸಂಬಂಧ ಹೊಂದಲು ಬಯಸುತ್ತಿರುವ ಬಗ್ಗೆ ಮಂಗಳವಾರ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ, ಇಂತಹ ಸಿದ್ಧಾಂತಗಳಲ್ಲಿದ ಹೊಂದಾಣಿಕೆ ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ ಎಂದು ಹೇಳಿದ್ದಾರೆ.

ತಮ್ಮ ಸಿದ್ಧಾಂತದಲ್ಲಿ ದೃಢವಾಗಿ ನಿಲ್ಲುವ ನಾಯಕರಿದ್ದಾರೆ ಆದರೆ ಅವರ ಸಂಖ್ಯೆ ಕ್ರಮೇಣ ಕಡಿಮೆಯಾಗುತ್ತಿದೆ ಎಂದು ನಿತಿನ್ ಗಡ್ಕರಿ ಹೇಳಿದರು.

Nitin Gadkari: Those Doing Good Work Often Lack Recognition

"ನಾನು ಯಾವಾಗಲೂ ತಮಾಷೆಯಾಗಿ ಹೇಳುತ್ತೇನೆ, ಅದು ಯಾವುದೇ ಪಕ್ಷದ ಸರ್ಕಾರವೇ ಆಗಿರಲಿ, ಒಳ್ಳೆಯ ಕೆಲಸ ಮಾಡುವವರಿಗೆ ಎಂದಿಗೂ ಗೌರವ ಸಿಗುವುದಿಲ್ಲ ಮತ್ತು ಕೆಟ್ಟ ಕೆಲಸ ಮಾಡುವವರಿಗೆ ಎಂದಿಗೂ ಶಿಕ್ಷೆಯಾಗುವುದಿಲ್ಲ ಎನ್ನುವುದು ಖಚಿತ" ಎಂದು ಗಡ್ಕರಿ ಹೇಳಿದರು.

ವಿಚಾರಗಳ ಕೊರತೆ ನಮ್ಮ ಸಮಸ್ಯೆ

ಲೋಕಮಾತ್ ಮೀಡಿಯಾ ಗ್ರೂಪ್ ಇಲ್ಲಿ ಆಯೋಜಿಸಿದ್ದ ಸಂಸದೀಯ ಸದಸ್ಯರಿಗೆ ಅವರ ಅನುಕರಣೀಯ ಕೊಡುಗೆಗಳಿಗಾಗಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ದೇಶಿಸಿ ಸಚಿವ ನಿತಿನ್ ಗಡ್ಕರಿ ಮಾತನಾಡಿದರು.

"ನಮ್ಮ ಚರ್ಚೆಗಳಲ್ಲಿ, ಭಿನ್ನಾಭಿಪ್ರಾಯಗಳು ಸಮಸ್ಯೆಯಲ್ಲ, ನಮ್ಮ ಸಮಸ್ಯೆ ವಿಚಾರಗಳ ಕೊರತೆ" ಎಂದು ಬಿಜೆಪಿಯ ಹಿರಿಯ ನಾಯಕ ಗಡ್ಕರಿ ಹೇಳಿದರು.

"ತಮ್ಮ ಸಿದ್ಧಾಂತದ ಆಧಾರದ ಮೇಲೆ ದೃಢವಾಗಿ ನಿಲ್ಲುವ ಜನರಿದ್ದಾರೆ ಆದರೆ ಅಂತಹ ಜನರ ಸಂಖ್ಯೆ ಕ್ಷೀಣಿಸುತ್ತಿದೆ. ಮತ್ತು ಸಿದ್ಧಾಂತದಲ್ಲಿ ಅವನತಿಯಾಗುತ್ತಿದೆ, ಇದು ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ" ಎಂದು ಅವರು ಆತಂಕ ವ್ಯಕ್ತಪಡಿಸಿದರು.

"ಬಲಪಂಥೀಯರೂ ಅಲ್ಲ, ಎಡಪಂಥೀಯರೂ ಅಲ್ಲ, ನಾವು ಅವಕಾಶವಾದಿಗಳು, ಕೆಲವರು ಈ ರೀತಿ ಬರೆಯುತ್ತಾರೆ. ಎಲ್ಲರೂ ಆಡಳಿತ ಪಕ್ಷದೊಂದಿಗೆ ಸಂಬಂಧವನ್ನು ಉಳಿಸಿಕೊಳ್ಳಲು ಬಯಸುತ್ತಾರೆ" ಎಂದು ಹೇಳಿದರು.

ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವಾಗಿದೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಮಾತಿನಲ್ಲಿ ಭಾರತವು ಪ್ರಜಾಪ್ರಭುತ್ವದ ತಾಯಿ ಎಂದರು. ಈ ವಿಶೇಷತೆಯ ಕಾರಣದಿಂದಾಗಿ, ನಮ್ಮ ಪ್ರಜಾಪ್ರಭುತ್ವದ ಆಡಳಿತ ವ್ಯವಸ್ಥೆಯು ಪ್ರಪಂಚದ ಉಳಿದ ಭಾಗಗಳಿಗೆ ಆದರ್ಶವಾಗಿದೆ ಎಂದರು.

ರಾಜಕಾರಣಿಗಳು ಬರುತ್ತಾರೆ ಮತ್ತು ಹೋಗುತ್ತಾರೆ ಆದರೆ ಅವರು ತಮ್ಮ ಕ್ಷೇತ್ರಗಳ ಜನರಿಗೆ ಮಾಡಿದ ಕೆಲಸಗಳು ಅಂತಿಮವಾಗಿ ಮುಖ್ಯವಾಗುತ್ತವೆ ಮತ್ತು ಅವರಿಗೆ ಗೌರವವನ್ನು ತರುತ್ತವೆ ಎಂದು ಗಡ್ಕರಿ ಹೇಳಿದರು.

ಪ್ರಚಾರ ಮತ್ತು ಜನಪ್ರಿಯತೆ ಅಗತ್ಯ ಆದರೆ ಅವರು ಸಂಸತ್ತಿನಲ್ಲಿ ಏನು ಮಾತನಾಡುತ್ತಾರೆ ಎನ್ನುವುದಕ್ಕಿಂತ ಆಯಾ ಕ್ಷೇತ್ರದ ಜನರಿಗಾಗಿ ಹೇಗೆ ಕೆಲಸ ಮಾಡುತ್ತಾರೆ ಎಂಬುದು ಮುಖ್ಯವಾಗುತ್ತದೆ ಎಂದರು.

ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ವಾಕ್ಚಾತುರ್ಯವನ್ನು ಶ್ಲಾಘಿಸಿದ ಗಡ್ಕರಿ ಅವರು ಮಾಜಿ ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್ ಅವರ ನಡವಳಿಕೆ, ಸರಳತೆ ಮತ್ತು ವ್ಯಕ್ತಿತ್ವದಿಂದ ಸಾಕಷ್ಟು ಕಲಿತಿದ್ದಾರೆ ಎಂದು ಹೇಳಿದರು. ಅಟಲ್ ಬಿಹಾರಿ ವಾಜಪೇಯಿ ಅವರ ನಂತರ ನಾನು ತುಂಬಾ ಪ್ರಭಾವಿತನಾದ ವ್ಯಕ್ತಿ ಜಾರ್ಜ್ ಫರ್ನಾಂಡಿಸ್ ಎಂದು ಅವರು ಹೇಳಿದರು.

ಇತ್ತೀಚೆಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿಯನ್ನು ಪಡೆದ ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರನ್ನು ನಿತಿನ್ ಗಡ್ಕರಿ ಶ್ಲಾಘಿಸಿದರು ಮತ್ತು ಅಂತಹ ಜನರು ದೇಶದ ಪ್ರಜಾಪ್ರಭುತ್ವವನ್ನು ಬಲಿಷ್ಠಗೊಳಿಸಿದ್ದಾರೆ ಎಂದು ಹೇಳಿದರು.

"ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಂತರ ಠಾಕೂರ್ ಆಟೋ ರಿಕ್ಷಾದಲ್ಲಿ ಪ್ರಯಾಣಿಸಿದರು ಮತ್ತು ಅವರು ಸಾಮಾನ್ಯವಾದ ಜೀವನ ಮಾಡಿದರು. ರಾಜಕೀಯ ನಾಯಕರು ಅಂತಹ ವ್ಯಕ್ತಿಗಳಿಂದ ಸ್ಫೂರ್ತಿ ಪಡೆಯಬೇಕು ಎಂದು ಸಲಹೆ ನೀಡಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+