Nitin Gadkari: 'ದಯವಿಟ್ಟು ಜೀವ, ವೈದ್ಯಕೀಯ ವಿಮಾ ಕಂತುಗಳ ಮೇಲಿನ ಜಿಎಸ್ಟಿ ತೆಗೆದುಹಾಕಿ'
ನವದೆಹಲಿ, ಜುಲೈ. 31: ಜೀವನದ ಅನಿಶ್ಚಿತತೆಗಳು ಮತ್ತು ವಲಯದ ನಿರ್ಬಂಧಗಳಿಗೆ ಕಾರಣವಾಗುವ ಜೀವ ಮತ್ತು ವೈದ್ಯಕೀಯ ವಿಮಾ ಕಂತುಗಳ ಮೇಲಿನ 18% ಸರಕು ಮತ್ತು ಸೇವಾ ತೆರಿಗೆಯನ್ನು (ಜಿಎಸ್ಟಿ) ತೆಗೆದುಹಾಕುವಂತೆ ಕೇಂದ್ರ ರಸ್ತೆ, ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರನ್ನು ಒತ್ತಾಯಿಸಿದ್ದಾರೆ.
"ಜೀವನ ಮತ್ತು ವೈದ್ಯಕೀಯ ವಿಮಾ ಪ್ರೀಮಿಯಂ ಮೇಲಿನ ಜಿಎಸ್ಟಿಯನ್ನು ಹಿಂಪಡೆಯುವ ಸಲಹೆಯನ್ನು ಆದ್ಯತೆಯ ಮೇಲೆ ಪರಿಗಣಿಸಲು ನಿಮ್ಮನ್ನು ವಿನಂತಿಸಲಾಗಿದೆ. ಏಕೆಂದರೆ ಈ ಜಿಎಸ್ಟಿಯು ಹಿರಿಯ ನಾಗರಿಕರಿಗೆ ತೊಡಕಾಗುತ್ತದೆ" ಎಂದು ನಿತಿನ್ ಗಡ್ಕರಿ ಜುಲೈ 28 ರಂದು ಸೀತಾರಾಮನ್ ಅವರಿಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಪ್ರಸ್ತುತ, ಜೀವ ಮತ್ತು ವೈದ್ಯಕೀಯ ವಿಮಾ ಕಂತುಗಳ ಮೇಲೆ 18 ಪ್ರತಿಶತ ಜಿಎಸ್ಟಿ ವಿಧಿಸಲಾಗುತ್ತದೆ. ನಿತಿನ್ ಗಡ್ಕರಿ ಪ್ರಕಾರ, ವೈದ್ಯಕೀಯ ವಿಮಾ ಕಂತುಗಳ ಮೇಲಿನ ತೆರಿಗೆಯು ಉದ್ಯಮದ ಬೆಳವಣಿಗೆಯನ್ನು ನಿರ್ಬಂಧಿಸುತ್ತದೆ ಮತ್ತು ಸಮಾಜದ ಮೇಲೆ ಮತ್ತಷ್ಟು ಪರಿಣಾಮ ಬೀರುತ್ತದೆ ಎನ್ನಲಾಗಿದೆ.
"ಅದೇ ರೀತಿಯಲ್ಲಿ, ವೈದ್ಯಕೀಯ ವಿಮಾ ಪ್ರೀಮಿಯಂ ಮೇಲಿನ 18 ಪ್ರತಿಶತ ಜಿಎಸ್ಟಿಯು ಸಾಮಾಜಿಕವಾಗಿ ಅಗತ್ಯವಿರುವ ವ್ಯಾಪಾರದ ಈ ವಿಭಾಗದ ಬೆಳವಣಿಗೆಗೆ ಪ್ರತಿಬಂಧಕವಾಗಿದೆ" ಎಂದು ನಿತಿನ್ ಗಡ್ಕರಿ ಅಭಿಪ್ರಾಯಪಟ್ಟಿದ್ದಾರೆ. ಈ ಪತ್ರವು ನಾಗಪುರ ವಿಭಾಗೀಯ ಜೀವ ವಿಮಾ ನಿಗಮದ ನೌಕರರ ಸಂಘ ಸಚಿವರನ್ನು ಭೇಟಿಯಾದ ಬಳಿಕ ಬಂದ ಪ್ರತಿಕ್ರಿಯೆಯಾಗಿದೆ. ನಿತಿನ್ ಗಡ್ಕರಿ ಅವರು ಲೋಕಸಭೆಯಲ್ಲಿ ನಾಗ್ಪುರ ಕ್ಷೇತ್ರವನ್ನು ಪ್ರತಿನಿಧಿಸುವ ಸಂಸದರಾಗಿದ್ದಾರೆ.

ನಿತಿನ್ ಗಡ್ಕರಿ ಅವರನ್ನು ಭೇಟಿಯಾದ ಗಪುರ ವಿಭಾಗೀಯ ಜೀವ ವಿಮಾ ನಿಗಮದ ನೌಕರರ ಸಂಘವು ಜೀವ ವಿಮೆಯ ಮೂಲಕ ಉಳಿತಾಯಕ್ಕೆ ವಿಭಿನ್ನ ಚಿಕಿತ್ಸೆ, ಆರೋಗ್ಯ ವಿಮಾ ಪ್ರೀಮಿಯಂಗೆ ಐಟಿ ಕಡಿತದ ಮರು ಪರಿಚಯದ ಸವಾಲುಗನ್ನು ಒತ್ತಿ ಹೇಳಿದೆ. ಸಾರ್ವಜನಿಕ ಮತ್ತು ವಲಯದ ಸಾಮಾನ್ಯ ವಿಮಾ ಕಂಪನಿಗಳ ಏಕೀಕರಣಕ್ಕೆ ಸಂಬಂಧಿಸಿದ ಅಂಶಗಳನ್ನು ಎತ್ತಿದೆ ಎಂದು ಸಚಿವರು ಪತ್ರದಲ್ಲಿ ತಿಳಿಸಿದ್ದಾರೆ.
"ಜೀವ ವಿಮಾ ಪ್ರೀಮಿಯಂ ಮೇಲೆ ಜಿಎಸ್ಟಿ ವಿಧಿಸುವುದು ಜೀವನದ ಅನಿಶ್ಚಿತತೆಗಳ ಮೇಲೆ ತೆರಿಗೆಯನ್ನು ವಿಧಿಸಿದಂತಾಗುತ್ತದೆ. ಕುಟುಂಬಕ್ಕೆ ಸ್ವಲ್ಪ ರಕ್ಷಣೆ ನೀಡಲು ಜೀವನದ ಅನಿಶ್ಚಿತತೆಯ ಅಪಾಯವನ್ನು ಆವರಿಸುವ ವ್ಯಕ್ತಿಯು ಈ ಅಪಾಯದ ವಿರುದ್ಧ ರಕ್ಷಣೆಯನ್ನು ಪಡೆಯಲು ಬಯಸುತ್ತಾರೆ. ಅಂತಹ ಪ್ರೀಮಿಯಂಗೆ ತೆರಿಗೆಯನ್ನು ವಿಧಿಸಬಾರದು ಎಂದು ಒಕ್ಕೂಟವು ಭಾವಿಸುತ್ತದೆ" ಎಂದು ಹೇಳಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications