ಬಿಜೆಪಿ ಬಿಡೆನು ಎಂದ ನಿತಿನ್ ಪಟೇಲ್, ಹಾರ್ದಿಕ್ ಆಸೆಗೆ ತಣ್ಣೀರು
ಅಹಮದಾಬಾದ್, ಡಿಸೆಂಬರ್ 30: ಗುಜರಾತ್ ಉಪಮುಖ್ಯಮಂತ್ರಿ ನಿತಿನ್ ಪಟೇಲ್ ಅವರು ಬಿಜೆಪಿ ಪಕ್ಷದ ವರಿಷ್ಠರ ಮೇಲೆ ಬೇಸರಗೊಂಡಿದ್ದು, ಪಕ್ಷಕ್ಕೆ ರಾಜಿನಾಮೆ ನೀಡುತ್ತಾರೆ ಎಂಬ ಊಹಾಪೋಹ ಹರಿದಾಡುತ್ತಿತ್ತು, ಆದರೆ ಇದು ಸುಳ್ಳಾಗಿದೆ.
ಸ್ವತಃ ನಿತಿನ್ ಪಟೇಲ್ ಈ ವಿಷಯ ಸ್ಪಷ್ಟಪಡಿಸಿದ್ದು, 40 ವರ್ಷಗಳ ಸತತ ಪರಿಶ್ರಮದಿಂದ ಈ ಹಂತಕ್ಕೆ ಬೆಳೆದಿದ್ದೇನೆ, ಪಕ್ಷಕ್ಕಾಗಿ ಅವಿರತ ದುಡಿದಿದ್ದೇನೆ ನಾನೇಕೆ ರಾಜಿನಾಮೆ ಕೊಡಲಿ ಎಂದು ತಮ್ಮ ರಾಜಿನಾಮೆ ಸುದ್ದಿ ಹರಡಿಸಿದವರನ್ನೇ ಪ್ರಶ್ನಿಸಿದ್ದಾರೆ ನಿತಿನ್ ಪಟೇಲ್.
ತಾವು ಅಸಮಾಧಾನಗೊಂಡಿರುವುದನ್ನು ಒಪ್ಪಿಕೊಂಡಿರುವ ಅವರು 'ಕೆಲವು ಆಂತರಿಕ ಸಮಸ್ಯೆಗಳು ಇದ್ದು, ಅವನ್ನು ಪಕ್ಷದ ವರಿಷ್ಠರು ಬಗೆಹರಿಸುತ್ತಾರೆ' ಎಂದಿದ್ದಾರೆ.

ತಮ್ಮ ಕೋರಿಕೆಯ ಖಾತೆ ನೀಡಲಿಲ್ಲವೆಂದು ನಿತಿನ್ ಪಟೇಲ್ ಅಸಮಾಧಾನಗೊಂಡಿದ್ದರು, ತಮ್ಮ ಕೋರಿಕೆಯ ಖಾತೆ ಹಾಗೂ ತಮ್ಮ ಬೆಂಬಲಿಗ ಶಾಸಕರಿಗೂ ಖಾತೆಗಳನ್ನು ನಿಡುವಂತೆ ನಿತಿನ್ ಪಟೇಲ್ 48 ಗಂಟೆಗಳ ಗಡುವು ನೀಡಿದ್ದಾರೆ ಅದಾದ ನಂತರ ಅವರು ಬಿಜೆಪಿಗೆ ರಾಜಿನಾಮೆ ನೀಡಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದ್ದವು.
ಇದೇ ಅವಕಾಶದ ಸದುಪಯೋಗಕ್ಕೆ ಪ್ರಯತ್ನಿಸಿದ ಪಾಟೀದಾರ್ ಅನಾಮತ್ ಆಂದೋಲನದ ನಾಯಕ ಹಾರ್ದಿಕ್ ಪಟೇಲ್, ನಿತಿನ್ ಅವರನ್ನು ಬಿಜೆಪಿ ಬಿಡುವಂತೆ ಕೋರಿದ್ದರು, ನಿತಿನ್ ಅವರು ಬಿಜೆಪಿ ತೊರೆದು ನಮ್ಮೊಂದಿಗೆ ಸೇರಿದಲ್ಲಿ, ಕಾಂಗ್ರೆಸ್ ಜೊತೆ ಮಾತನಾಡಿ ಉತ್ತಮ ಸ್ಥಾನ-ಮಾನ ಕೊಡಿಸಲಾಗುವುದು ಎಂದು ಬಹಿರಂಗವಾಗಿ ಹೇಳಿದ್ದರು.
ತಮ್ಮ ಕೋರಿಕೆಯ ಖಾತೆ ಸಿಗದೆ ಅಸಮಾಧಾನಗೊಂಡಿರುವುದು ಸತ್ಯವೆಂದು ಒಪ್ಪಿಕೊಂಡಿರುವ ನಿತಿನ್ ಪಟೇಲ್ ರಾಜಿನಾಮೆ ಸುದ್ದಿಯನ್ನು ತಳ್ಳಿಹಾಕಿದ್ದಾರೆ.
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications