ಸ್ವಹಿತಾಸಕ್ತಿ ಕಾಪಾಡಲು ನಿತೀಶ್ ಏನು ಬೇಕಾದ್ರೂ ಮಾಡ್ತಾರೆ: ರಾಹುಲ್
ತಮ್ಮ ಸ್ವಹಿತಾಸಕ್ತಿಗಾಗಿ ನಿತೀಶ್ ಕುಮಾರ್ ಏನು ಬೇಕಾದರೂ ಮಾಡುತ್ತಾರೆ ಎಂದ ರಾಹುಲ್ ಗಾಂಧಿ. ಬಿಹಾರದ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತಂತೆ ವಿಶ್ಲೇಷಣೆ ಮಾಡಿದ ಕಾಂಗ್ರೆಸ್ ಉಪಾಧ್ಯಕ್ಷ.
ನವದೆಹಲಿ, ಜುಲೈ 27: ಬಿಹಾರದಲ್ಲಿ ಲಾಲೂ ಅವರ ನಂಟನ್ನು ಕಳೆದುಕೊಂಡು ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದ ನಿತೀಶ್ ಕುಮಾರ್, ತಮ್ಮ ಸ್ವ ಹಿತಾಸಕ್ತಿಗಾಗಿ ಏನನ್ನು ಮಾಡಲೂ ಸಿದ್ಧವಾಗಿರುತ್ತಾರೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಬುಧವಾರ (ಜುಲೈ 26) ಸಂಜೆ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದ ನಿತೀಶ್ ಕುಮಾರ್, ದಿನಬೆಳಗಾಗುತ್ತಲೇ ಬಿಜೆಪಿ ಜತೆಗೆ ಕೈ ಜೋಡಿಸಿ ಹೊಸ ಸರ್ಕಾರ ರಚಿಸಿದರಲ್ಲದೆ, ಬಿಹಾರದ ಮುಖ್ಯಮಂತ್ರಿಯಾಗಿ ಮತ್ತೆ ಅಧಿಕಾರಕ್ಕೆ ಬಂದಿದ್ದಾರೆ.

ಈ ಬಗ್ಗೆ ನವದೆಹಲಿಯಲ್ಲಿ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, ''ಕೋಮುವಾದಿ ಶಕ್ತಿಗಳ ವಿರುದ್ಧದ ಹೋರಾಟದಲ್ಲಿ ಪಾಲ್ಗೊಳ್ಳಲೆಂದೇ ನಿತೀಶ್ ಕುಮಾರ್ ಅವರು ಕಾಂಗ್ರೆಸ್ ಜತೆ ಕೈ ಜೋಡಿಸಿದ್ದರು. ಇದೀಗ, ತಮ್ಮ ಸ್ವಂತ ರಾಜಕಾರಣಕ್ಕಾಗಿ ಕೋಮುವಾದಿಗಳೊಂದಿಗೆ ಜತೆಯಾಗಿದ್ದಾರೆ. ಅವರು ರಾಜಿನಾಮೆ ನೀಡುತ್ತಾರೆಂದು ನಾನು ಮೊದಲೇ ಊಹಿಸಿದ್ದೆ'' ಎಂದು ತಿಳಿಸಿದ್ದಾರೆ.
''ಬಿಹಾರ ರಾಜಕೀಯದಲ್ಲಿ ಬುಧವಾರ (ಜುಲೈ 26) ಸಂಜೆ ನಡೆದ ನಾಟಕೀಯ ಬದಲಾವಣೆಗಳು ಎಲ್ಲವೂ ಒಂದೇ ದಿನದಲ್ಲಿ ನಡೆದ ವಿದ್ಯಮಾನವಲ್ಲ. ಸುಮಾರು 3-4 ತಿಂಗಳುಗಳ ಹಿಂದೆಯೇ ಇದರ ಪ್ಲಾನ್ ಸಿದ್ಧವಾಗಿತ್ತು'' ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.
ಲಾಲೂ ಪ್ರಸಾದ್ ಯಾದವ್ ಅವರ ರಾಷ್ಟ್ರೀಯ ಜನತಾ ದಳದ (ಆರ್ ಜೆಡಿ) ಜತೆಗೆ ಸಮ್ಮಿಶ್ರ ಸರ್ಕಾರ ರಚಿಸಿದ್ದ ಸಂಯುಕ್ತ ಜನತಾ ದಳದ ನಾಯಕ, ಮುಖ್ಯಮಂತ್ರಿ ನಿತೀಶ್ ಕುಮಾರ್, ಲಾಲೂ ಅವರೊಂದಿಗೆ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಬುಧವಾರ ಸಂಜೆ ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದರು.
ಆನಂತರ, ರಾತ್ರೋ ರಾತ್ರಿ ನಡೆದ ಬೆಳವಣಿಗೆಯಲ್ಲಿ ನಿತೀಶ್ ಅವರು ಬಿಜೆಪಿಯ ಬೆಂಬಲ ಪಡೆದು ಹೊಸ ಸಮ್ಮಿಶ್ರ ಸರ್ಕಾರ ರಚಿಸಿದರಲ್ಲದೆ, ಜುಲೈ 27ರ ಬೆಳಗ್ಗೆ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications