ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತೇಜಸ್ವಿ ಯಾದವ್ ಗೆ ಸಂಪುಟದಿಂದ ಕೊಕ್: ಲಾಲೂಗೆ ನಿತೀಶ್ ಗಡುವು

ಲಾಲು ಪ್ರಸಾದ್ ಯಾದವ್ ಅವರ ಪುತ್ರ ತೇಜಸ್ವಿ ಯಾದವ್ ಅವರನ್ನು ಸಂಪುಟದಿಂದ ಕೈಬಿಡಲು ನಿತೀಶ್ ನಿರ್ಧಾರ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್. ಅವರ ಮಂತ್ರಿ ಮಂಡಲದಲ್ಲಿ ಉಪ ಮುಖ್ಯಮಂತ್ರಿಯಾಗಿರುವ ತೇಜಸ್ವಿ ಯಾದವ್.

|
Google Oneindia Kannada News

ಪಾಟ್ನಾ, ಜುಲೈ 11: ಬಿಹಾರದ ಉಪ ಮುಖ್ಯಮಂತ್ರಿ ಹಾಗೂ ಲಾಲು ಪ್ರಸಾದ್ ಯಾದವ್ ಅವರ ಪುತ್ರ ತೇಜಸ್ವಿ ಯಾದವ್ ಅವರನ್ನು ಸಂಪುಟದಿಂದ ಕೈಬಿಡಲು ನಿರ್ಧರಿಸಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್, ಈ ನಿಟ್ಟಿನಲ್ಲಿ ಹುಷಾರಾದ ಹೆಜ್ಜೆ ಇಟ್ಟಿದ್ದಾರೆ.

ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ತೇಜಸ್ವಿ ಯಾದವ್ ಅವರನ್ನು ಸಂಪುಟದಲ್ಲಿ ಮುಂದುವರಿಸಬೇಕೋ, ಬೇಡವೋ ಎಂಬುದರ ಬಗ್ಗೆ ಮಿತ್ರ ಪಕ್ಷವಾದ ರಾಷ್ಟ್ರೀಯ ಜನತಾ ದಳ (ಆರ್ ಜೆಡಿ) ನಿರ್ಧರಿಸಲಿ ಎಂದಿರುವ ನಿತೀಶ್, ಅದಕ್ಕಾಗಿ ಮೂರು ದಿನಗಳ ಗಡುವನ್ನೂ ವಿಧಿಸಿದ್ದಾರೆ.

ಬಿಹಾರ ರಾಜಕೀಯದಲ್ಲಿ ಬಿಕ್ಕಟ್ಟು, ಬೇರೆಯಾಗ್ತಾರಾ ಲಾಲು-ನಿತೀಶ್?ಬಿಹಾರ ರಾಜಕೀಯದಲ್ಲಿ ಬಿಕ್ಕಟ್ಟು, ಬೇರೆಯಾಗ್ತಾರಾ ಲಾಲು-ನಿತೀಶ್?

Nitish Kumar gives 3 day deadline to Lalu to decide on Tejaswi

ಇತ್ತೀಚೆಗೆ, ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಹಾಗೂ ಅವರ ಆಪ್ತರ ಮನೆಗಳ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದರು. ಅದರ ಬೆನ್ನಲ್ಲೇ ಜಾರಿ ನಿರ್ದೇಶನಾಲಯದಿಂದಲೂ ಲಾಲೂ ಪ್ರಸಾದ್ ಪುತ್ರಿ ಮಿಸಾ ಭಾರತಿ ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿತ್ತು. ಹಾಗಾಗಿ, ಲಾಲು ಅವರ ಇಡೀ ಕುಟುಂಬದ ಮೇಲೆಯೇ ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ, ಆರ್ ಜೆಡಿಯ ಪರವಾಗಿ ಉಪ ಮುಖ್ಯಮಂತ್ರಿಯಾಗಿರುವ ಲಾಲು ಅವರ ಪುತ್ರರನ್ನು ಸಂಪುಟದಿಂದ ಕೈಬಿಡಲು ನಿತೀಶ್ ಆಲೋಚಿಸಿದ್ದಾರೆ.

English summary
With an intension to expell deputy chief minister Tejaswi Yadav, Bihar Chief Minister Nitish Kumar has given 3 day dead line to Lalu Prasad's RJD to take a call on his son.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X