ನಿತೀಶ್ ಕುಮಾರ್ಗೆ ಆಟ, ಕಾಂಗ್ರೆಸ್ ನಾಯಕರಿಗೆ ಪ್ರಾಣ ಸಂಕಟ!
2024ರ ಲೋಕಸಭಾ ಚುನಾವಣೆಗೆ ಭಾರತ ಸಜ್ಜಾಗುತ್ತಿದ್ದು, ಇಡೀ ಜಗತ್ತೇ ಈಗ ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದ ಮೇಲೆ ಕಣ್ಣಿಟ್ಟು ಕೂತಿದೆ. ಪ್ರಧಾನಿ ನರೇಂದ್ರ ಮೋದಿಗೆ ಈ ಚುನಾವಣೆ ಅತ್ಯಂತ ಮುಖ್ಯವಾಗಿದ್ದು ಹ್ಯಾಟ್ರಿಕ್ ಬಾರಿಸುವ ನಿರೀಕ್ಷೆಯಲ್ಲೂ ಇದ್ದಾರೆ. ಈ ಸ್ಥಿತಿಯಲ್ಲಿ ಬಿಹಾರ ಸಿಎಂ ನಿತೀಶ್ ಕುಮಾರ್ ಕಾಂಗ್ರೆಸ್ & ವಿರೋಧ ಪಕ್ಷಗಳ ನಾಯಕರಿಗೆ ಮರ್ಮಾಘಾತ ನೀಡಿದ್ದಾರೆ.
ಅಂದಹಾಗೆ ನಿತೀಶ್ ಕುಮಾರ್ ಅವರು ಪಕ್ಷಾಂತರ ಮಾಡುವುದು ಇದೇ ಮೊದಲೇನಲ್ಲ. ಈ ಹಿಂದೆ ಕೂಡ ಬಿಜೆಪಿ ಜೊತೆ ಸರ್ಕಾರ ರಚಿಸಿ, ಕೊನೆಗೆ ಬಿಜೆಪಿಗೆ ಕೈಕೊಟ್ಟು ಓಡಿ ಬಂದರು. ಹತ್ತಾರು ವರ್ಷಗಳ ಕಾಲ ಬಿಜೆಪಿ ಜೊತೆಗೆ ಸರ್ಕಾರ ರಚಿಸಿದ್ದ ನಿತೀಶ್ ಕುಮಾರ್ 2014ರಲ್ಲಿ ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದ ನಂತರ ಮುನಿಸಿಕೊಂಡರು. ಹಾಗೇ ಮೋದಿ ಅವರಿಗೆ ಪ್ರಧಾನಿ ಸ್ಥಾನ ಸಿಕ್ಕಿದ್ದು ನಿತೀಶ್ ಕುಮಾರ್ಗೆ ಇಷ್ಟ ಇರಲಿಲ್ಲ ಎಂಬ ಮಾತು ಕೇಳಿಬಂದವು.

ಕೊನೆಗೆ ಬಿಜೆಪಿ ಬಿಟ್ಟು ಹೊರಗೆ ಬಂದು ಕಾಂಗ್ರೆಸ್ & ಆರ್ಜೆಡಿ ಜೊತೆ ಸೇರಿ ಬಿಹಾರದಲ್ಲಿ, ಸರ್ಕಾರ ರಚಿಸಿದ್ದರು ನಿತೀಶ್ ಕುಮಾರ್. ಆದರೆ ಆ ನಂತರ ಮತ್ತೆ ಬಿಜೆಪಿಗೆ ಓಡಿ ಹೋದ್ರು ಇದೇ ನಿತೀಶ್ ಕುಮಾರ್. ಹೀಗೆ ಕೆರೆ ದಡ & ದಡ ಕೆರೆ ಆಟ ಆಡುತ್ತಿರುವ ಬಿಹಾರ ಸಿಎಂಗೆ ಈಗ ಮತ್ತೊಮ್ಮೆ ಬಿಜೆಪಿಗೆ ಹೋಗುವ ಮನಸ್ಸಾಗಿದೆ ಎನ್ನಲಾಗುತ್ತಿದೆ!
2022ರಲ್ಲಿ ಮತ್ತೆ ಕಾಂಗ್ರೆಸ್ ಜೋಡಿ!
ಇನ್ನು ಬಿಹಾರ ಸಿಎಂ ನಿತೀಶ್ ಕುಮಾರ್ ಯಾವಾಗ ಯಾರ ಜೊತೆ ಇರುತ್ತಾರೆ? ಅನ್ನೋದು ಗೊತ್ತೇ ಆಗಲ್ಲ. ಅದೇ ರೀತಿ 2022ರಲ್ಲಿ ಅವರು ಮತ್ತೆ ಬಿಜೆಪಿಗೆ ಕೈಕೊಟ್ಟು, ವಾಪಸ್ ಅದೇ ಹಳೆಯ ದೋಸ್ತಿಗಳ ಜೊತೆ ಸೇರಿ ಬಿಹಾರದಲ್ಲಿ ಸರ್ಕಾರ ರಚಿಸಿದ್ದರು. ಹೀಗೆ ನಿತೀಶ್ ಮತ್ತೆ ಕಾಂಗ್ರೆಸ್ & ಆರ್ಜೆಡಿ ಸಂಬಂಧ ಬೆಳೆಸಿದ್ದರು. ಹೀಗೆ, ವಿರೋಧ ಪಕ್ಷಗಳ ಜೊತೆಗೆ ಸರ್ಕಾರ ರಚನೆ ಮಾಡಿ 2 ವರ್ಷ ಕೂಡ ಕಳೆದಿಲ್ಲ. ಆಗಲೇ ಮತ್ತೊಮ್ಮೆ ಬಿಜೆಪಿಗೆ ಹೋಗಲು ನಿತೀಶ್ ತಯಾರಿ ನಡೆಸಿದ್ದಾರಂತೆ.
ನಿತೀಶ್ ಕುಮಾರ್ ಗುರಿ ಏನು?
2024ರ ಲೋಕಸಭಾ ಚುನಾವಣೆಗೆ ಬಿಜೆಪಿ ವಿರುದ್ಧ ವಿರೋಧ ಪಕ್ಷಗಳು ಒಕ್ಕೂಟ ರಚಿಸಿದಾಗ ಇದೇ ನಿತೀಶ್ ಕುಮಾರ್ ಮುಂಚೂಣಿಯಲ್ಲಿ ಇದ್ದರು. ಅದರಲ್ಲೂ ವಿವಿಧ ಪಕ್ಷಗಳ ಜೊತೆಗೆ ಮಾತುಕತೆ ನಡೆಸಿದ್ದ ಅವರು, ಹಲವು ಸಭೆಗಳ ಮುಂದಾಳತ್ವ ವಹಿಸಿದ್ದರು. ಈ ಮೂಲಕ ಇಂಡಿಯಾ ಒಕ್ಕೂಟಕ್ಕೆ ಬೆಂಬಲವಾಗಿ ನಿಂತಿದ್ದರು. ಆದರೆ ಮೊದಲಿನಿಂದ ಪ್ರಧಾನಿ ಪಟ್ಟದ ಮೇಲೆ ಒಂದು ಕಣ್ಣು ಇಟ್ಟಿರುವ ನಿತೀಶ್ ಕುಮಾರ್ ಈಗ ವಿರೋಧ ಪಕ್ಷಗಳಿಗೆ ಕೈಕೊಟ್ಟು, ವಾಪಸ್ ಬಿಜೆಪಿಗೆ ಹೋಗುತ್ತಿರುವುದು ಸಂಚಲನ ಸೃಷ್ಟಿಸಿದೆ.

ಕಾಂಗ್ರೆಸ್ ನಾಯಕರಿಗೆ ಚಿಂತೆ ಶುರು
ಈಗಾಗಲೇ ಬಿಹಾರ ಸಿಎಂ ನಿತೀಶ್ ಕುಮಾರ್ ಡಿಸೈಡ್ ಮಾಡಿದಂತೆ ಕಾಣುತ್ತಿದೆ. ಯಾಕಂದ್ರೆ ಲೋಕಸಭೆ ಚುನಾವಣೆ ಸಮಯದಲ್ಲಿ ನಿತೀಶ್ ಕುಮಾರ್ ಅವರ ಬೆಂಬಲ ಬಿಜೆಪಿ ಅಗತ್ಯವಿದೆ. ಇದೇ ಸಮಯದಲ್ಲಿ ಆರ್ಜೆಡಿ ಮತ್ತು ಕಾಂಗ್ರೆಸ್ ಜೊತೆಗೂ ನಿತೀಶ್ ಕುಮಾರ್ ಮುನಿಸನ್ನು ಮುಂದುವರಿಸಿದ್ದಾರೆ. ಈ ಎಲ್ಲಾ ಬೆಳವಣಿಗೆ ನಡುವೆ ನಿತೀಶ್ ಕುಮಾರ್ ದಿಢೀರ್ ಎಸ್ಕೇಪ್ ಆಗಿ, ಮತ್ತೆ ಬಿಜೆಪಿ ಜೊತೆ ಸೇರುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಲೋಕಸಭಾ ಚುನಾವಣೆ 2024ಕ್ಕೆ ಮೊದಲು ಭಾರತೀಯ ರಾಜಕೀಯ ಶೇಕ್ ಆಗಿದೆ. ಹಾಗೇ ಕಾಂಗ್ರೆಸ್ ನಾಯಕರಿಗೂ ನಿತೀಶ್ ಕುಮಾರ್ ಸಂಪರ್ಕ ಸಾಧ್ಯವಾಗುತ್ತಿಲ್ಲ.
2024ರ ಲೋಕಸಭೆ ಚುನಾವಣೆಯಲ್ಲಿ BJP ವಿರುದ್ಧ ಜಯ ಸಾಧಿಸುವುದು ವಿಪಕ್ಷಗಳ ಒನ್ಲೈನ್ ಅಜೆಂಡಾ. ಇದೇ ಹಿನ್ನೆಲೆ ವಿರೋಧ ಪಕ್ಷಗಳ ನಡುವೆ ಒಗ್ಗಟ್ಟನ್ನೂ ಮೂಡಿಸಿ, ಲೋಕಸಭೆಗಾಗಿ ಸಜ್ಜಾಗಲು ಮೀಟಿಂಗ್ ಮೇಲೆ ಮೀಟಿಂಗ್ ಮಾಡಲಾಗಿತ್ತು. ಹೀಗಿದ್ದಾಗ, ನಿತೀಶ್ ಕುಮಾರ್ಗೆ ಗಾಳ ಹಾಕಲು ಬಿಜೆಪಿ ನಾಯಕರು ಮೊದಲಿಂದ ಯತ್ನಿಸಿದ್ದರು ಎನ್ನುವ ಮಾತು ಹರಿದಾಡಿ ಸಂಚಲನ ಸೃಷ್ಟಿಯಾಗಿತ್ತು. ಆದರೆ ಇದೀಗ ಅದು ನಡೆದೇ ಹೋಗಿದೆ. ನಿತೀಶ್ ಕುಮಾರ್ಗೆ ಬಿಜೆಪಿ ಸೇರಲು ರೆಡ್ ಕಾರ್ಪೆಟ್ ಹಾಸಲಾಗಿದೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications