Nitish Kumar: ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ಮತ್ತೆ ಬಿಹಾರ ರಾಜಕೀಯ ಚಿತ್ರಣದಲ್ಲಿ ಬದಲಾವಣೆ?
ಪಾಟ್ನಾ, ಜೂನ್. 04: ಲೋಕಸಭಾ ಚುನಾವಣೆ ಬಳಿಕ ಬಿಹಾರ ರಾಜಕೀಯ ಚಿತ್ರಣ ಮತ್ತೊಮ್ಮೆ ಬದಲಾಗಲಿದೆ. ಸದ್ಯ ಹರಿದಾಡುತ್ತಿರುವ ಸುದ್ದಿಗಳನ್ನು ಕೇಳಿದರೆ, ಲೋಕಸಭಾ ಚುನಾವಣಾ ಫಲಿತಾಂಶ ಬಂದ ಬಳಿಕ ನಿತೀಶ್ ಕುಮಾರ್ ಅವರು ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ "ಅತಿ ಶೀಘ್ರದಲ್ಲಿ" ರಾಜೀನಾಮೆ ನೀಡಬಹುದು.
ಆದರೆ ನಿತೀಶ್ ಕುಮಾರ್ ನಿಜವಾಗಿಯೂ ಸಿಎಂ ಪಟ್ಟದಿಂದ ಕೆಳಗಿಳಿದರೆ, ಮತ್ತೊಮ್ಮೆ ರಾಜ್ಯದಲ್ಲಿ ಸಿಎಂ ಬದಲಾಗಲಿದ್ದಾರೆ. ಹೆಚ್ಚು ಸ್ಥಾನಗಳನ್ನು ಹೊಂದಿರುವ ತೇಜಸ್ವಿ ಯಾದವ್ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಜೊತೆ ಕೈಜೋಡಿಸಿ ಆಡಳಿತಕ್ಕೆ ಬರುತ್ತಾರಾ ಎಂಬ ಪ್ರಶ್ನೆ ಉದ್ಭವವಾಗಿದೆ. ನಿತೀಶ್ ಕುಮಾರ್ ಪದೇ ಪದೆ ಮೈತ್ರು ಬದಲಾಯಿಸುತ್ತಾ ಬಿಹಾರ ರಾಜಕೀಯವನ್ನು ಮತ್ತಷ್ಟು ಕೆಳಕ್ಕೆ ತಳ್ಳಿದ್ದಾರೆ. ಒಮ್ಮೆ ಬಿಜೆಪಿ, ಒಮ್ಮೆ ಆರ್ಜೆಡಿ ಎಂದು ಪದೇ ಪದೇ ತಮ್ಮ ದಾರಿ ಬದಲಾಯಿಸುತ್ತಿದ್ದಾರೆ.

ಆದರೆ ನಿತೀಶ್ ಕುಮಾರ್ 'ರಾಜೀನಾಮೆ' ಕುರಿತು ಚರ್ಚಿಸುತ್ತಿರುವಾಗಲೇ ಹಿಂದಿನಂತೆ ಭಿನ್ನವಾಗಿ, ವಯಸ್ಸಾದ ಜೆಡಿಯು ನಾಯಕ ಎನ್ಡಿಎಗೆ ಅಂಟಿಕೊಳ್ಳುತ್ತಾರೆ ಎನ್ನಲಾಗಿದೆ. ಕೊಯೆರಿ ಜಾತಿಗೆ ಸೇರಿದ ಉಪ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಮತ್ತು ಕುಮಾರ್ ಅವರಂತಹ ಒಬಿಸಿ ಅಭ್ಯರ್ಥಿಗಳನ್ನು ಸಿಎಂ ಸ್ಥಾನದ ಅಭ್ಯರ್ಥಿ ಮಾಡುವ ಮೂಲಕ ಬಿಹಾರದಲ್ಲಿ ಬಿಜೆಪಿ ಮುಖ್ಯಮಂತ್ರಿಗೆ ದಾರಿ ಮಾಡಿಕೊಡುತ್ತಾರೆ ಎನ್ನಲಾಗಿದೆ.
ಈ ಬಾರಿ ನಿತೀಶ್ ಕುಮಾರ್ ಅವರನ್ನು ಎನ್ಡಿಎಗೆ ಸೇರಿಸಿಕೊಳ್ಳಲು ಇದೇ ಷರತ್ತು ಎಂದು ಹೇಳಲಾಗಿದೆ. ಬಿಹಾರದಲ್ಲಿ ಸೀಟು ಹಂಚಿಕೆ ಒಪ್ಪಂದದಲ್ಲಿ ಬಿಜೆಪಿ 17 ಲೋಕಸಭಾ ಕ್ಷೇತ್ರಗಳಲ್ಲಿ ಮತ್ತು ಜೆಡಿಯು 16 ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ.
ರಾಜೀನಾಮೆ ನೀಡ್ತಾರಾ ನಿತೀಶ್ ಕುಮಾರ್!?
ನಿತೀಶ್ ಕುಮಾರ್ ರಾಜೀನಾಮೆ ಬಗ್ಗೆ ಬಿಜೆಪಿ ಅಥವಾ ಜೆಡಿಯುನ ಯಾರೂ ಪ್ರತಿಕ್ರಿಯಿಸಿಲ್ಲ. ಬದಲಾಗಿ, ಹೆಚ್ಚಿನವರು ಇದನ್ನು ಗಾಸಿಪ್ ಎಂದು ತಳ್ಳಿಹಾಕಿದ್ದಾರೆ. ಆದರೆ, ನಿತೀಶ್ ಕುಮಾರ್ ಭಾನುವಾರ ನವದೆಹಲಿಗೆ ಆಗಮಿಸಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. ಇದನ್ನು ಮುಖ್ಯಮಂತ್ರಿ ಮತ್ತು ಸಚಿವರ ನಡುವಿನ ಸೌಜನ್ಯದ ಭೇಟಿ ಎನ್ನಬಹುದು, ಆದರೆ, ವದಂತಿಗಳ ಸಮಯದಲ್ಲಿ ಈ ಭೇಟಿ ಮತ್ತಷ್ಟು ಹೊಸ ಚರ್ಚೆಗಳಿಗೆ ಎಡೆ ಮಾಡಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications