INDIA ಮೈತ್ರಿಯ 'ಮಾಧ್ಯಮ ಬಹಿಷ್ಕಾರ' ನಿರ್ಧಾರ ಉಲ್ಲಂಘಿಸಿದ ನಿತಿಶ್ ಕುಮಾರ್: ಬಿಜೆಪಿ
ಬೆಂಗಳೂರು, ಸೆಪ್ಟಂಬರ್ 17: ಕೇಂದ್ರದ ವಿರೋಧ ಪಕ್ಷಗಳು ಕೂಡಿ INDIA ಮೈತ್ರಿ ಕೂಟ ರಚನೆ ಮಾಡಿವೆ. ಇದೀಗ ದೂರದರ್ಶನದ 14 ಸುದ್ದಿ ನಿರೂಪಕರ ಕಾರ್ಯಕ್ರಮಗಳನ್ನು ಇಂಡಿಯಾ ಬಹಿಷ್ಕರಿಸಿದೆ. ಇತ್ತ ಮೈತ್ರಿಕೂಟದ ಇನ್ನೋರ್ವ ನಾಯಕ ಬಿಹಾರ ಸಿಎಂ ನಿತಿಶ್ ಕುಮಾರ್ ಅವರು ಬಹಿಷ್ಕಾರ ವಿಚಾರ ಬಗ್ಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ. ಈ ಕಾರಣಕ್ಕೆ ಇಂಡಿಯಾ ಪಕ್ಷಗಳ ಬಗ್ಗೆ ಬಿಜೆಪಿ ವ್ಯಂಗ್ಯವಾಡಿದೆ.
ಈ ಕುರಿತು ನಿತಿಶ್ ಕುಮಾರ್ ಹೇಳಿಕೆ ವಿಡಿಯೋ ಪೋಸ್ಟ್ ಮಾಡಿರುವ ಬಿಜೆಪಿ ಮೈತ್ರಿ ಆಡಳಿತ ಬಗ್ಗೆ ಲೇವಡಿ ಮಾಡಿದೆ. I.N.D.I ಮೈತ್ರಿಯು ವಿರೋಧಾಭಾಸಗಳು ಮತ್ತು ಗೊಂದಲಗಳ ಮೈತ್ರಿಗಿಂತ ಹೆಚ್ಚೇನೂ ಅಲ್ಲ. ರಾಹುಲ್ ಗಾಂಧಿ ಅವರ ಅಹಂಕಾರವನ್ನು ತೃಪ್ತಿಪಡಿಸಲು, ಕಾಂಗ್ರೆಸ್ ಪತ್ರಕರ್ತರನ್ನು ಬಹಿಷ್ಕರಿಸುವ ನಿರ್ಣಯವನ್ನು ಮುಂದಿಟ್ಟಿದೆ ಎಂದು ಹೇಳಿದೆ.

ಈ ಬಹಿಷ್ಕಾರ ನಿರ್ಣಯವನ್ನು ಸಮಾಜವಾದಿ ಪಕ್ಷವು ತಮ್ಮ ವಕ್ತಾರರೊಬ್ಬರನ್ನು 14 ಸುದ್ದಿ ನಿರೂಪಕರ ಕಾರ್ಯಕ್ರಮಕ್ಕೆ ಕಳಹಿಸುವ ಮೂಲಕ ಬಹಿರಂಗವಾಗಿ ಉಲ್ಲಂಘಿಸುತ್ತದೆ. ಈಗ, ಬಿಹಾರ ಸಿಎಂ ಅವರು ನಿತೀಶ್ ಕುಮಾರ್ ಅವರು ಕಾಂಗ್ರೆಸ್ ಹೇಳಿರುವ ಸುದ್ದಿ ಸಂಪಾದಕರ ಬಹಿಷ್ಕಾರ ಕಲ್ಪನೆಯನ್ನು ಸಾರ್ವಜನಿಕವಾಗಿ ತಿರಸ್ಕರಿಸಿದ್ದಾರೆ ಎಂದು ತಿಳಿಸಿದೆ.
ಇಂಡಿಯಾ ಮೈತ್ರಿ ಕೂಟದಲ್ಲಿ ತಮ್ಮ ಸ್ವಂತ ನಿರ್ಣಯಗಳನ್ನು ಅನುಸರಿಸಲು ಒಬ್ಬರಿಗೊಬ್ಬರು ಮನವೊಲಿಸಲು ಸಾಧ್ಯವಾಗದಿರುವಾಗ ಸ್ವಾರ್ಥಿ ಸೋತವರ ಈ ಒಕ್ಕೂಟವು ಮುನ್ನಡೆಸುವುದನ್ನು ಹೇಗೆ ನಿರೀಕ್ಷಿಸಬಹುದಾಗಿದೆ ಎಂದು ಬಿಜೆಪಿ ಕುಟುಕಿದೆ.
The I.N.D.I alliance appears to be nothing more than an alliance of contradictions and confusions.
— BJP Karnataka (@BJP4Karnataka) September 17, 2023
To satisfy Rahul Gandhi's ego, Congress puts forth a resolution to boycott Journalists.
However, mere hours later, the Samajwadi Party openly violates it by sending one of their… https://t.co/JoB8ryJ9JM
ಮಾಧ್ಯಮಗಳಿಗೆ ನಿತಿಶ್ ಕುಮಾರ್ ಬೆಂಬಲ
ಇತ್ತೀಚೆಗೆ ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ಅವರು ಇಂಡಿಯಾ ಮೈತ್ರಿ ಕೂಟದ ಮಾಧ್ಯಮಗಳ ಬಹಿಷ್ಕಾರ ಬಗ್ಗೆ ಪ್ರಶ್ನೆ ಕೇಳಿದಾಗ ಈ ಬಗ್ಗೆ ನನಗೆ ಯಾವ ಐಡಿಯಾ ಇಲ್ಲ ಎಂದು ತಿಳಿಸಿದ್ದಾರೆ. ನಾನು ಮಾಧ್ಯಮಗಳನ್ನು ಬೆಂಬಲಿಸುತ್ತೇನೆ ಎಂದು ತಿಳಿಸಿದ್ದಾರೆ. ಈ ಹೇಳಿಕೆ ಇದೀಗ ಇಂಡಿಯಾ ಕೂಟಕ್ಕೆ ತಲೆನೋವಾಗಿ ಪರಿಣಮಿಸಲಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್












Click it and Unblock the Notifications