Nitish Kumar: 9ನೇ ಬಾರಿಗೆ ಬಿಹಾರ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿ ನಿತೀಶ್ ಕುಮಾರ್
ಆರ್ಜೆಡಿ-ಜೆಡಿ(ಯು) ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳ ನಂತರ ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿಯಾಗಿ 9ನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದರು.
ಭಾರತ ಮಾತಾ ಕಿ ಜೈ ಮತ್ತು ಜೈ ಶ್ರೀ ರಾಮ್ ಘೋಷಣೆಗಳ ನಡುವೆ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಿದರು. ಜಿತನ್ ರಾಮ್ ಮಾಂಝಿ, ಚಿರಾಗ್ ಪಾಸ್ವಾನ್, ಸಾಮ್ರಾಟ್ ಚೌಧರಿ, ಜೆಪಿ ನಡ್ಡಾ ಉಪಸ್ಥಿತರಿದ್ದರು.
ನಿತೀಶ್ ಕುಮಾರ್ ಅವರು 2022 ರಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು, ಅವರು ಎನ್ಡಿಎ ಜೊತೆಗಿನ ಸಂಬಂಧವನ್ನು ಕಡಿದುಕೊಂಡು ಆರ್ಜೆಡಿ, ಕಾಂಗ್ರೆಸ್ ಮತ್ತು ಎಡ ಮೈತ್ರಿಕೂಟವನ್ನು ಸೇರಿಕೊಂಡರು ಮತ್ತು ಬಿಹಾರದ ಮಹಾಘಟಬಂಧನ್ನ ಮುಖ್ಯಮಂತ್ರಿಯಾಗಿದ್ದರು.

ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಇಂಡಿಯಾ ಒಕ್ಕೂಟವನ್ನು ತೊರೆದ ನಿತೀಶ್ ಕುಮಾರ್ ಎನ್ಡಿಎ ಸೇರಿಕೊಂಡಿದ್ದು. ಬಿಜೆಪಿ ಬೆಂಬಲದ ಮೂಲಕ ಬಿಹಾರದಲ್ಲಿ ಸರ್ಕಾರ ರಚನೆ ಮಾಡಿದ್ದಾರೆ.
ನಿತೀಶ್ ಕುಮಾರ್ ರಾಜಕೀಯ ಮೇಲಾಟ
ನಿತೀಶ್ ಕುಮಾರ್ ಜೊತೆಗೆ ಬಿಜೆಪಿಯ ಸಾಮ್ರಾಟ್ ಚೌಧರಿ, ವಿಜಯ್ ಸಿನ್ಹಾ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು. ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ) ಕೂಡ ಹೊಸ ಸರ್ಕಾರದ ಭಾಗವಾಗಲಿದೆ. ಹೆಚ್ಎಎಂ ಅಧ್ಯಕ್ಷ ಡಾ ಸಂತೋಷ್ ಕುಮಾರ್ ಸುಮನ್ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು.
ಬಿಹಾರದಲ್ಲಿ ಬದಲಾದ ರಾಜಕೀಯ ಸಮೀಕರಣದಲ್ಲಿ ನಿತೀಶ್ ಕುಮಾರ್ ಇದೀಗ ಹೊಸ ಸಚಿವ ಸಂಪುಟವನ್ನು ಪಡೆಯಲಿರುವುದರಿಂದ ರಾತ್ರೋರಾತ್ರಿ ಆರ್ ಜೆಡಿ ಸಚಿವರು ಸಂಪುಟದಿಂದ ಹೊರಬಿದ್ದಿದ್ದಾರೆ. ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ನಿತೀಶ್ ಕುಮಾರ್ ವಿರುದ್ಧ ಕಿಡಿ ಕಾರಿದ್ದು 2024 ಜೆಡಿಯು ಅಂತ್ಯವನ್ನು ಸೂಚಿಸುತ್ತದೆ ಮತ್ತು ಬಿಹಾರದಲ್ಲಿ ಆಟವು ಇನ್ನೂ ಮುಗಿದಿಲ್ಲ ಎಂದಿದ್ದಾರೆ.
ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರು ಬಿಜೆಪಿಯೊಂದಿಗಿನ ನಿತೀಶ್ ಅವರ ಪ್ರಯತ್ನವು ಅಲ್ಪಕಾಲಿಕವಾಗಿರುತ್ತದೆ ಮತ್ತು ಲೋಕಸಭೆ ಚುನಾವಣೆಯ ನಂತರ ಬಿಹಾರವು ಆರು ತಿಂಗಳೊಳಗೆ ಮತ್ತೆ ಬದಲಾವಣೆಗಳನ್ನು ಕಾಣಲಿದೆ. ಆದರೆ ನಿತೀಶ್ ಕುಮಾರ್ ಯಾರ ಜೊತೆ ಹೋದರೂ 2025ರ ರಾಜ್ಯ ಚುನಾವಣೆಯಲ್ಲಿ 20ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುವುದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ.
ನಿತೀಶ್ ಕುಮಾರ್ ದ್ರೋಹದ ಹೊಸ ದಾಖಲೆಯನ್ನು ಮಾಡಿದ್ದಾರೆ ಮತ್ತು ಬಿಜೆಪಿ ಈಗ ದುರ್ಬಲವಾಗಿದೆ ಎಂದು ಅಖಿಲೇಶ್ ಯಾದವ್ ವಾಗ್ದಾಳಿ ನಡೆಸಿದ್ದಾರೆ.
ಭಾನುವಾರ ಬೆಳಗ್ಗೆ ನಿತೀಶ್ ಕುಮಾರ್ ರಾಜೀನಾಮೆ ಸಲ್ಲಿಸುತ್ತಿದ್ದಂತೆ, ಇಂಡಿಯಾ ಒಕ್ಕೂಟದಲ್ಲಿ ವಿಷಯಗಳು ಒಪ್ಪಿಗೆಯಾಗಿಲ್ಲ ಎಂದು ವಿವರಿಸಿದರು.
-
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ












Click it and Unblock the Notifications