ಬಿಹಾರದಲ್ಲಿ ಮಹಾಮೈತ್ರಿಕೂಟ ಪರ್ವ ಆರಂಭ
ಪಾಟ್ನಾ, ನ.20: ಬಿಹಾರದಲ್ಲಿ ಮಹಾಮೈತ್ರಿಕೂಟ ಪರ್ವ ಆರಂಭಗೊಂಡಿದೆ. ನಿತೀಶ್ ಕುಮಾರ್ ಅವರು ಐದನೇ ಬಾರಿಗೆ ಸಿಎಂ ಪಟ್ಟ ಅಲಂಕರಿಸಿದ್ದಾರೆ. ಸತ್ಯ, ಧರ್ಮ, ನಿಷ್ಠೆಯಿಂದ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸುವುದಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಇಬ್ಬರು ಮಕ್ಕಳು ಮಹಾಮೈತ್ರಿಕೂಟದ ನಾಯಕ ನಿತೀಶ್ ಕುಮಾರ್ ಅವರ ಸಂಪುಟ ಸೇರಿದ್ದಾರೆ. ತೇಜಸ್ವಿ ಯಾದವ್ ಮತ್ತು ತೇಜ್ ಪ್ರತಾಪ್ ಯಾದವ್ ಅವರು ಶುಕ್ರವಾರ ಮಧ್ಯಾಹ್ನ ನಿತೀಶ್ ಸಂಪುಟ ಸೇರಿಕೊಂಡಿದ್ದಾರೆ.ನಿತೀಶ್ ಕುಮಾರ್ ಅವರ ಸಂಪುಟಕ್ಕೆ ಆರ್ ಜೆ ಡಿ ಹಾಗೂ ಜೆಡಿಯು ಕಡೆಯಿಂದ ತಲಾ 12 ಸಚಿವರು ಹಾಗೂ ಕಾಂಗ್ರೆಸ್ಸಿನಿಂದ ನಾಲ್ವರು ಸಂಪುಟ ಸೇರಿದ್ದಾರೆ.

ಮಂಜು ವರ್ಮ, ಮದನ್ ಸಹ್ನಿ, ಶೈಲೇಶ್ ಕುಮಾರ್ ಹಾಗೂ ಕಪಿಲ್ ದೇವ್ ಕಾಮತ್ ಅವರು ಸಚಿವ ಸ್ಥಾನ ಪಡೆದುಕೊಳ್ಳುತ್ತಿದ್ದಾರೆ. ಬಿಜೇಂದ್ರ ಪ್ರಸಾದ್ ಯಾದವ್, ಶ್ರವಣ್ ಕುಮಾರ್, ರಾಜೀವ್ ರಂಜನ್ ಸಿಂಗ್ ಲಲ್ಲನ್, ಜಯ್ ಕುಮಾರ್ ಸಿಂಗ್ ಅವರು ಸ್ಥಾನ ಉಳಿಸಿಕೊಂಡಿದ್ದಾರೆ.
ಆರ್ ಜೆ ಡಿಯಿಂದ 12 ಜನ ಸ್ಥಾನವನ್ನು ತೇಜಸ್ವಿ ಯಾದವ್ ಹಾಗೂ ಅವರ ಸೋದರ ತೇಜ್ ಪ್ರತಾಪ್ ಯಾದವ್, ಅಬ್ದುಲ್ ಬಾರಿ ಸಿದ್ದಿಕಿ, ಅಬ್ದುಲ್ ಗಫೂರ್, ವಿಜಯ್ ಪ್ರಕಾಶ್, ಚಂದ್ರಿಕಾ ರಾಯ್, ಮುಂದ್ರಿಕಾ ಸಿಂಗ್ ಯಾದವ್, ಸಂತೋಷ್ ನಿರಾಳ, ರಾಮ್ ವಿಚಾರ್ ರಾಯ್ ಹಾಗೂ ಶೆಯೋ ರಾಮ್.
Nitish Kumar sworn in as Chief Minister of Bihar pic.twitter.com/v33VBHJxB6
— ANI (@ANI_news) November 20, 2015 ಕಾಂಗ್ರೆಸ್ ನಿಂದ ಅಶೋಕ್ ಚೌಧರಿ, ಮದನ ಮೋಹನ್ ಝಾ, ಅಬ್ದುಲ್ ಜಲೀಲ್ ಮಸ್ತಾನ್, ಅವದೇಶ್ ಕುಮಾರ್ ಸಿಂಗ್ ಸೇರ್ಪಡೆಗೊಂಡಿದ್ದಾರೆ.
Nitish Kumar and Lalu Yadav at Gandhi Maidan in Patna. pic.twitter.com/dv1as9rGTM
— ANI (@ANI_news) November 20, 2015 ಗಣ್ಯಾತಿಗಣ್ಯರ ಉಪಸ್ಥಿತಿ: ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ, ಕೇಂದ್ರ ಸಚಿವ ವೆಂಕಯ್ಯ ನಾಯ್ಡು, ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಹಿಮಾಚಲ ಪ್ರದೇಶ ಸಿಎಂ ವೀರಭದ್ರ ಸಿಂಗ್ ಅವರು ಅವರು ಗಾಂಧಿ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಉಪಸ್ಥಿತರಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications