ಸರ್ಕಾರಿ ಬಂಗಲೆಯಿಂದ ಲಾಲು ಪುತ್ರನ ಎತ್ತಂಗಡಿ
ಪಾಟ್ನಾ, ಸೆಪ್ಟೆಂಬರ್ 16: ಬಿಹಾರದ ಉಪಮುಖ್ಯಮಂತ್ರಿ ಸ್ಥಾನದಿಂದ ಪದಚ್ಯುತಗೊಂಡರೂ ಸರ್ಕಾರಿ ಬಂಗಲೆಯನ್ನು ತೆರವುಗೊಳಿಸದೇ ಇದ್ದ ತೇಜಸ್ವಿ ಯಾದವ್ (ಲಾಲೂ ಪ್ರಸಾದ್ ಯಾದವ್ ಪುತ್ರ) ಅವರನ್ನು ನಿವಾಸದಿಂದ ಹೊರಕಳಿಸುವಲ್ಲಿ ನಿತೀಶ್ ಕುಮಾರ್ ಸರ್ಕಾರ ಕೊನೆಗೂ ಯಶಸ್ವಿಯಾಗಿದೆ.
ಬಿಹಾರದ ರಾಜಕೀಯದಲ್ಲಿ ಇತ್ತೀಚೆಗೆ ನಡೆದಿದ್ದ ನಾಟಕೀಯ ಬೆಳವಣಿಗೆಯೊಂದರಲ್ಲಿ, ಈ ಮೊದಲು ಆರ್ ಜೆಡಿ ಪಕ್ಷದ ಜತೆ ಸರ್ಕಾರ ರಚಿಸಿದ್ದ ಜೆಡಿಯುನ ನಿತೀಶ್ ಕುಮಾರ್, ಆರ್ ಜೆಡಿ ಸಖ್ಯ ತೊರೆದು ಬಿಜೆಪಿ ಜತೆಗೆ ಕೈ ಜೋಡಿಸಿ, ಹೊಸ ಸರ್ಕಾರ ರಚಿಸಿದ್ದರು. ಇದರಿಂದಾಗಿ, ಆರ್ ಜೆಡಿ-ಜೆಡಿಯು ಮೈತ್ರಿ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ತೇಜಸ್ವಿ ಯಾದವ್ ತಮ್ಮ ಸ್ಥಾನ ಕಳೆದುಕೊಂಡಿದ್ದರು.

ಆದರೆ, ಇದಾಗಿ ವಾರಗಳೇ ಕಳೆದರೂ ತೇಜಸ್ವಿ ಯಾದವ್ ತಮಗೆ ನೀಡಿದ್ದ ಸರ್ಕಾರಿ ಬಂಗಲೆಯನ್ನು ತೊರೆದಿರಲಿಲ್ಲ. ಇದಕ್ಕೆ ಕಾರಣ, ಈ ಮೊದಲು ಹಳೆಯದಾಗಿದ್ದ ಈ ಬಂಗಲೆಯನ್ನು ತಾವು ಉಪಮುಖ್ಯಮಂತ್ರಿಯಾಗಿದ್ದ ವೇಳೆಯಲ್ಲಿ ಆಧುನೀಕರಣಗೊಳಿಸಿದ್ದರು ಯಾದವ್. ಇದೇ ಕಾರಣಕ್ಕಾಗಿಯೇ ಅವರು ಬಂಗಲೆ ಬಿಡಲು ಮನಸ್ಸೇ ಮಾಡಿರಲಿಲ್ಲ ಎನ್ನಲಾಗಿದೆ.
ಆದರೆ, ಈ ಬಂಗಲೆಯನ್ನು ಇದೀಗ ವಿರೋಧ ಪಕ್ಷದ ನಾಯಕರಿಗೆ ನೀಡಿರುವುದರಿಂದ ಇದನ್ನು ಬಿಡುವಂತೆ ನಿತೀಶ್ ಸರ್ಕಾರ ಪದೇ ಪದೇ ತೇಜಸ್ವಿ ಅವರಿಗೆ ತಾಕೀತು ಮಾಡಿತ್ತು. ಆದರೆ, ಇದಕ್ಕೆ ತೇಜಸ್ವಿ ಏನಾದರೊಂದು ನೆಪ ಹೇಳುತ್ತಲೇ ಇದ್ದರು. ಆದರೂ, ಪಟ್ಟುಬಿಡದ ನಿತೀಶ್ ಸರ್ಕಾರ, ತೇಜಸ್ವಿ ಅವರನ್ನು ಬಿಡುಗಡೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications